Homeಕರ್ನಾಟಕಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ನಿನ್ನೆ ಕೇಂದ್ರ ಸರ್ಕಾರ ನೀಡಿದ ಸೂಚನೆಯ ಮೇರೆಗೆ ಸೆಪ್ಟಂಬರ್ 21ರಿಂದ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿಯನ್ನು ತಡೆಹಿಡಿಯಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು

- Advertisement -
- Advertisement -

ರಾಜ್ಯದಲ್ಲಿ ಸೋಮವಾರದಿಂದ ಶಾಲಾ-ಕಾಲೇಜು ತೆರೆಯಲಿದ್ದು, ಆದರೆ ತರಗತಿಗಳು ಆರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ಆದರೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಹಿಂಪಡೆಯಲಾಗಿದೆ. ಕೇಂದ್ರ ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೂ ಶಾಲೆ ತೆರೆಯುವುದಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

“ಸೆಪ್ಟೆಂಬರ್ 21 ರಿಂದ ಶಿಕ್ಷಕರು ಮತ್ತು ಪಿಯುಸಿ ಉಪನ್ಯಾಸಕರು ಶಾಲೆ, ಕಾಲೇಜುಗಳಲ್ಲಿ ಹಾಜರಿರುತ್ತಾರೆ. 9, 10 ನೇ ತರಗತಿ ವಿದ್ಯಾರ್ಥಿಗಳು, ಪಿಯುಸಿ ವಿದ್ಯಾರ್ಥಿಗಳು ಅವರ ಅಧ್ಯಯನಕ್ಕೆ ಸಂಬಂಧಿಸಿದ ಅನುಮಾನಗಳು ಇದ್ದರೆ ಶಾಲೆಗೆ ಹೋಗಿ ನಿವಾರಿಸಿಕೊಳ್ಳಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೈಸೂರಿನಲ್ಲಿ ಹೇಳಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ಆದರೆ ತರಗತಿಯಿಲ್ಲ…

ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. ಆನ್‌ಲೈನ್ ತರಗತಿಗಳೇ ಆರಾಮದಾಯಕವೆಂದು ಪೋಷಕರು ಹೇಳುತ್ತಾರೆ. ಇಲ್ಲಿ ಪೋಷಕರಿಗೆ ತಮ್ಮ ಮಕ್ಕಳ ಬಗ್ಗೆ ಇರುವ ಕಾಳಜಿ ಅರ್ಥ ಮಾಡಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ಹೇಳಿದ್ದರು.

ಜೊತೆಗೆ, ಕೇಂದ್ರದಿಂದ ತರಗತಿಗಳ ಪ್ರಾರಂಭಕ್ಕೆ ಒಪ್ಪಿಗೆ ದೊರೆತ ಬಳಿಕ, ಪೋಷಕರಿಂದ ಒಪ್ಪಿಗೆ ಪತ್ರಗಳನ್ನು ಪಡೆಯುವುದನ್ನು ಕಡ್ಡಾಯಗೊಳಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ ಎಂದಿದ್ದರು.

ಇದನ್ನೂ ಓದಿ: 59.7% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಶಾಲೆಗೆ ಹೋಗುತ್ತಾರೆ: NSO

ಆದರೆ, “ನಿನ್ನೆ ಕೇಂದ್ರ ಸರ್ಕಾರ ನೀಡಿದ ಸೂಚನೆಯ ಮೇರೆಗೆ, ಸೆಪ್ಟಂಬರ್ 21ರಿಂದ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿಯನ್ನು ನಿರಾಕರಿಸಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ತಿಳಿಸಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರವೇ, 9-12ನೇ ತರಗತಿಯವರೆಗೆ ಶಾಲೆ ತೆರೆದು, ಮಾರ್ಗದರ್ಶನ ನೀಡಲು ಅವಕಾಶ ಕಲ್ಪಿಸಿಕೊಡುವಂತೆ ಸೂಚಿಸಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ತೆರೆಯಲು ಅವಕಾಶ ನೀಡಲು ಸಾಧ್ಯವಿಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ.


ಇದನ್ನೂ ಓದಿ: ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...