Homeಅಂತರಾಷ್ಟ್ರೀಯಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದು, ಅದನ್ನು ನಿಲ್ಲಿಸುವವರೆಗೂ ಪಾಕ್‌ ಜೊತೆಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಸರ್ಕಾರ ಈ ಹಿಂದೆ ಹೇಳಿತ್ತು.

- Advertisement -
- Advertisement -

ಲಡಾಕ್‌ ಗಡಿ ಸಂಘರ್ಷಕ್ಕೆ ಸಂಬಂಧಿಸಿದ ಬಿಕ್ಕಟ್ಟನ್ನು ಶಮನಗೊಳಿಸಲು ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾದ್ಯವಾಗುವುದಾದರೆ, ಪಾಕಿಸ್ತಾನದೊಂದಿಗೆ ಯಾಕೆ ಸಾಧ್ಯವಾಗುವುದಿಲ್ಲ ಎಂದು ಸಂಸದ ಫಾರೂಕ್‌ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಲಡಾಖ್ ಗಡಿಯಲ್ಲಿ ಉದ್ಭವವಾಗಿರುವ ಗಡಿ ತಕರಾರನ್ನು ಬಗೆಹರಿಸಲು ಭಾರತ-ಚೀನಾ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿವೆ. ಆದರೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿನ ಸಮಸ್ಯೆಗಳನ್ನೂ ಬಗೆಹರಿಸಲು ಭಾರತ-ಪಾಕ್ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯಬೇಕು ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ:  ಕಾಶ್ಮೀರದಲ್ಲಿ ಯಾರನ್ನೂ ಗೃಹಬಂಧನದಲ್ಲಿಟ್ಟಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿದ್ದಾರೆ: ಪ್ರೊ.ಸೈಫುದ್ದೀನ್ ಸೋಜ್

ಭಾರತ-ಪಾಕ್ ಗಡಿಯಲ್ಲಿ ನಡೆಯುತ್ತಿರುವ ನಿರಂತರ ಕಾದಾಟದಿಂದ ಜನಸಾಮಾನ್ಯರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನಸಾಮಾನ್ಯರ ಜೀವ ಉಳಿಸಲು ಪಾಕ್ ಕದನ ವಿರಾಮ ಉಲ್ಲಂಘನೆಯನ್ನು ನಿಲ್ಲಿಸಬೇಕಿದೆ. ಅದು ರಾಜತಾಂತ್ರಿಕ ಮಾತುಕತೆಗಳಿಂದ ಮಾತ್ರ ಸಾಧ್ಯ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಆದರೆ, ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದು, ಅದನ್ನು ನಿಲ್ಲಿಸುವವರೆಗೂ ಪಾಕ್‌ ಜೊತೆಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಸರ್ಕಾರ ಈ ಹಿಂದೆ ಹೇಳಿತ್ತು.

ಜಮ್ಮು ಕಾಶ್ಮೀರದ ಪ್ರಾದೇಶಿಕ ಪಕ್ಷವಾಗಿರುವ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಮುಖ್ಯಸ್ಥ ಮತ್ತು ಸಂಸದರಾಗಿರುವ ಫಾರುಕ್‌ ಅಬ್ದುಲ್ಲಾ ಅವರನ್ನು ಕೇಂದ್ರ ಸರ್ಕಾರ ಕಳೆದ ವರ್ಷ ಜಮ್ಮುಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ನ್ನು ರದ್ದುಗೊಳಿಸಿದ ನಂತರ ಗೃಹ ಬಂಧನದಲ್ಲಿ ಇಡಲಾಗಿತ್ತು. ತಿಂಗಳ ಹಿಂದೆ ಅವರನ್ನು ಗೃಹ ಬಂಧನದಿಂದ ಮುಕ್ತಗೊಳಿಸಲಾಗಿತ್ತು.


ಇದನ್ನೂ ಓದಿ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಒಂದುಗೂಡಿದ ಆರು ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...