Homeಮುಖಪುಟರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

ಡೆರೆಕ್​  ಒಬ್ರಯನ್, ಸಂಜಯ್​ ಸಿಂಗ್​, ರಾಜೀವ್ ಸತವ್, ಕೆ.ಕೆ.ರಾಗೇಶ್​​, ರಿಪುನ್ ಬೋರಾ, ಡೋಲಾ ಸೇನ್, ಸಯ್ಯದ್ ನಾಸೀರ್‌ ಹುಸೇನ್,  ಎಳಮಾರನ್ ಕರೀಂ ಅಮಾನತುಗೊಂಡ ಸಂಸದರಾಗಿದ್ದಾರೆ.

- Advertisement -
- Advertisement -

ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ಗದ್ದಲ ಮಾಡಿದ್ದ 8 ಸಂಸದರನ್ನು ಒಂದು ವಾರಗಳ ಮಟ್ಟಿಗೆ ಅಮಾನತು ಮಾಡಲಾಗಿದೆ. ನಿನ್ನೆ ತೃಣಮೂಲ ಕಾಂಗ್ರೆಸ್​​ನ ಡೆರೆಕ್​ ಒಬ್ರಯನ್ ಹಾಗೂ ಇನ್ನಿತರೆ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಮಸೂದೆ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಡೆರೆಕ್​  ಒಬ್ರಯನ್, ಸಂಜಯ್​ ಸಿಂಗ್​, ರಾಜೀವ್ ಸತವ್, ಕೆ.ಕೆ.ರಾಗೇಶ್​​, ರಿಪುನ್ ಬೋರಾ, ಡೋಲಾ ಸೇನ್, ಸಯ್ಯದ್ ನಾಸೀರ್‌ ಹುಸೇನ್, ಎಳಮಾರನ್ ಕರೀಂ ಅಮಾನತುಗೊಂಡ ಸಂಸದರಾಗಿದ್ದಾರೆ. ರಾಜ್ಯಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅಶಿಸ್ತಿನ ನಡವಳಿಕೆ ಎಂದು ಅಮಾನತು ಮಾಡಿ ಸದನದಿಂದ ಹೊರನಡೆಯಲು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ಎರಡು ಕೃಷಿ ಮಸೂದೆ ಅಂಗೀಕಾರ

ನಿನ್ನೆ ಕೃಷಿ ಮಸೂದೆಗೆ ಧ್ವನಿಮತದಿಂದ ಅಂಗೀಕಾರ ಪಡೆಯಲು ಸರಕಾರ ನಿರ್ಧರಿಸಿದೆ ಎಂದು ರಾಜ್ಯಸಭೆಯ ಉಪಾಧ್ಯಕ್ಷರು ಘೋಷಿಸಿದಾಗ ಸದನದಲ್ಲಿ ಗದ್ದಲ ಎಬ್ಬಿಸಿದ ವಿರೋಧ ಪಕ್ಷಗಳು, ತಾವು ಸದನದಲ್ಲೇ ಉಪಸ್ಥಿತರಿದ್ದು ಭೌತಿಕ ಮತದಾನದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಬೇಕು ಎಂದು ಪಟ್ಟುಹಿಡಿದವು.

ಇದನ್ನು ನಿರಾಕರಿಸಿದ್ದಕ್ಕೆ ಸದನದ ಬಾವಿಗೆ ಬಂದ ತೃಣಮೂಲ ಪಕ್ಷದ ಸದಸ್ಯ ಡೆರೆಕ್ ಒಬ್ರೆಯನ್ ಸ್ಫೀಕರ್‌ ಟೇಬಲ್ ಮೇಲಿದ್ದ ರೂಲ್​​ ಬುಕ್​ ಹರಿಯಲು ಮುಂದಾಗಿದ್ದರು. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಘೋಷಣೆಗಳನ್ನ ಕೂಗಿದ್ರು. ವಿಪಕ್ಷಗಳು ಕೆಲ ಕಾಲ ಸದನದಲ್ಲಿ ಧರಣಿ ಕುಳಿತಿದ್ದರು.

ಇದರ ನಡುವೆಯೂ ವಿವಾದಿತ ಕೃಷಿ ಮಸೂದೆಗಳ ಕುರಿತು ಚರ್ಚೆಗೆ ಅವಕಾಶ ನೀಡದೆ ಅಂಗೀಕರಿಸಲು ಸಹಕರಿಸಿದ ಆರೋಪದ ಕಾರಣಕ್ಕಾಗಿ ಉಪಸಭಾಪತಿ ಹರಿವಂಶ್ ವಿರುದ್ಧ ಪ್ರತಿಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ, ಭಾರತ ಕಮ್ಯೂನಿಸ್ಟ್ ಪಕ್ಷ, ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ರಾಷ್ಟ್ರೀಯ ಕಾಂಗ್ರೆಸ್ ಪಕ್ಷ, ರಾಷ್ಟ್ರೀಯ ಜನತಾ ದಳ, ನ್ಯಾಷನಲ್ ಕಾನ್ಫರೆನ್ಸ್, ದ್ರಾವಿಡ ಮುನ್ನೇತ್ರ ಕಜಗಂ, ಆಮ್ ಆದ್ಮಿ ಪಕ್ಷಗಳು ಅವಿಶ್ವಾಸ ಗೊತ್ತುವಳಿ ನೋಟಿಸ್ ನೀಡಿವೆ.

ನಿನ್ನೆ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆಯ ನಡುವೆ ಎರಡು ಕೃಷಿ ಸಂಬಂಧಿ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಇಂದು ಮೂರನೇ ಮಸೂದೆ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಸದ್ಯ ಅಮಾನತುಗೊಂಡ 8 ಸದಸ್ಯರ ಅಮಾನತಿನ ವಿರುದ್ಧ ಮತ್ತೆ ಇಂದು ಪ್ರತಿಭಟನೆ ಶುರುವಾಗಿದೆ.


ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ: ಖಂಡಿಸಿ ‘#KisanVirodhiNarendraModi’ ಟ್ವೀಟಾಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...