Homeಚಳವಳಿರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಇಂದು ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸದಸ್ಯರು ಬೆಂಗಳೂರು ರೈಲು ನಿಲ್ದಾಣದಿಂದ ಹೊರಟು ಫ್ರೀಡಂ ಪಾರ್ಕ್‌ವರೆಗೆ ದೊಡ್ಡಮಟ್ಟದ ರ್‍ಯಾಲಿ ನಡೆಸಿ, ನಂತರ ಅಲ್ಲಿಯೇ ಅನಿರ್ಧಿಷ್ಟಾವಧಿ ಧರಣಿ ನಡೆಸಲಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜ್ಯದ ಹಲವು ಸಂಘಟನೆಗಳು ಇಂದು ಬೆಂಗಳೂರಿನಲ್ಲಿ ಐಕ್ಯ ಹೋರಾಟವನ್ನು ಹಮ್ಮಿಕೊಂಡಿವೆ. ರಾಜ್ಯ ಸರ್ಕಾರ ಈ ಕೂಡಲೇ ರೈತವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯದಿದ್ದರೆ, ಮುಖ್ಯಮಂತ್ರಿ ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ ಎಂದು ರೈತಸಂಘದ ರಾಜ್ಯಾದ್ಯಕ್ಷರಾದ ಬಡಗಲಪುರ ನಾಗೇಂದ್ರ ಸವಾಲು ಹಾಕಿದ್ದಾರೆ.

ಇಂದಿನಿಂದ ಕರ್ನಾಟಕ ವಿಧಾನಸಭಾ ಅಧಿವೇಶನ ಆರಂಭವಾಗಲಿದ್ದು, ಸರ್ಕಾರ ಇಲ್ಲಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಜೊತೆಗೆ ಈಗಾಗಲೇ ಸುಗ್ರೀವಾಜ್ಞೆ ಮೂಲಕ ತಂದಿರುವ ಕೆಲವು ಮಸೂದೆಗಳಿಗೆ ಅಧಿಕೃತವಾಗಿ ಅಂಗೀಕಾರ ಪಡೆಯುವ ಸಾಧ್ಯತೆಯಿದೆ. ಇದರಲ್ಲಿ ಕೃಷಿ ಸಂಬಂಧಿತ ಮಸೂದೆಗಳೂ ಸೇರಿದ್ದು, ಅವುಗಳು ರೈತವಿರೋಧಿಯಾಗಿವೆ ಎಂದು ರಾಜ್ಯದಾದ್ಯಂತ ಇರುವ ರೈತ, ದಲಿತ, ಕಾರ್ಮಿಕ ಮತ್ತು ಇತರ ಸಂಘಟನೆಗಳು ಒಟ್ಟಾಗಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ಇಂದು ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸದಸ್ಯರು ಬೆಂಗಳೂರು ರೈಲು ನಿಲ್ದಾಣದಿಂದ ಹೊರಟು ಫ್ರೀಡಂ ಪಾರ್ಕ್‌ವರೆಗೆ ದೊಡ್ಡಮಟ್ಟದ ರ್‍ಯಾಲಿ ನಡೆಸಿ, ನಂತರ ಅಲ್ಲಿಯೇ ಅನಿರ್ಧಿಷ್ಟಾವಧಿ ಧರಣಿ ಮಾಡುತ್ತೇವೆ ಎಂದು ರೈತಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

“ಸರ್ಕಾರ ಭೂಸುಧಾರಣೆ ಕಾಯ್ದೆಗಳಿಗೆ ತಿದ್ದುಪಡಿ ತಂದು ಅವುಗಳನ್ನು ರೈತವಿರೋಧಿ ಕಾಯ್ದೆಗಳನ್ನಾಗಿ ಮಾಡಲು ಹೊರಟಿದೆ. ಇದರ ಮೂಲಕ ಕಾರ್ಪೋರೇಟ್ ಕುಳಗಳಿಗೆ ಅನುಕೂಲ ಮಾಡಿಕೊಟ್ಟು, ರೈತರನ್ನು ಅವರ ಗುಲಾಮರಾಗುವಂತೆ ಮಾಡಲಾಗುತ್ತಿದೆ. ಕೊರೊನಾ ಸಂಕಷ್ಟದ ನಡುವೆ ಈ ಕಾಯ್ದೆಗಳಿಗೆ ತಿದ್ದುಪಡಿ ತರುವ ಅಗತ್ಯವೇನಿತ್ತು. ಭೂ ಒಡೆತನ, ಎಪಿಎಂಸಿ, ವಿದ್ಯುತ್ ಖಾಸಗೀಕರಣ ಮುಂತಾದ ಕಾಯ್ದೆಗಳ ತಿದ್ದುಪಡಿಗೆ ಸುಗ್ರೀವಾಜ್ಞೆ ತರಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನಾಡಿನ ರೈತ, ದಲಿತ ಮತ್ತು ಕಾರ್ಮಿಕ ಸಮುದಾಯವನ್ನು ಎದುರು ಹಾಕಿಕೊಂಡಿದೆ. ಈಗ ತಿದ್ದುಪಡಿ ಕಾಯ್ದೆಗಳನ್ನು ಈ ಕೂಡಲೇ ವಾಪಸ್ಸು ಪಡೆಯದಿದ್ದರೇ, ಯಡಿಯೂರಪ್ಪನವರ ಕುರ್ಚಿಯನ್ನು ಅವರು ಹೇಗೆ ಉಳಿಸಿಕೊಳ್ಳುತ್ತಾರೆ ನೋಡೋಣ. ರಾಜ್ಯದ ರೈತರು ದಲಿತರು ಕಾರ್ಮಿಕರನ್ನು ಎದುರು ಹಾಕಿಕೊಂಡು ಯಾವ ಸರ್ಕಾರವೂ ಉಳಿಯಲು ಸಾಧ್ಯವಿಲ್ಲ. ಹಾಗಾಗಿ ಸರ್ಕಾರ ಅಧಿವೇಶನದಲ್ಲಿ ರೈತಪರವಾದ ನಿಲುವಿಗೆ ಬರದಿದ್ದರೆ ಖಂಡಿತವಾಗಿಯೂ ನಾವು ಅವರನ್ನು ಕುರ್ಚಿಯಿಂದ ಇಳಿಸುತ್ತೇವೆ” ಎಂದು ಹೇಳಿದರು.

ಈಗಾಗಲೇ ನೂರಾರು ರೈತರು, ಭೂಹೀನರು, ಹೋರಾಟಗಾರರು ರೈಲು ನಿಲ್ದಾಣದ ಬಳಿ ಸೇರುತ್ತಿದ್ದು, ಇನ್ನೇನು ಕೆಲವೇ ನಿಮಿಷಗಳಲ್ಲಿ ರ್‍ಯಾಲಿ ಹೊರಡಲಿದೆ.

ಇದನ್ನೂ ಓದಿ:ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ ಖಂಡಿಸಿ‘#KisanVirodhiNarendraModi’ ಟ್ರೆಂಡ್

ಈ ಅನಿರ್ಧಿಷ್ಟಾವಧಿ ಧರಣಿಯಲ್ಲಿ ಜನತಾಧಿವೇಶನ ನಡೆಸಿ, ಚರ್ಚೆ ಸಂವಾದಗಳನ್ನು ಹಮ್ಮಿಕೊಳ್ಳಲಾಗಿದೆ. ಈ ರಾಜ್ಯದ 39 ಸಂಘಟನೆಗಳ ಹೋರಾಟಗಾರರು ಸೇರಿದಂತೆ, ಸ್ವರಾಜ್ ಇಂಡಿಯಾ ಪಕ್ಷದ ಮುಖಂಡರಾದ ಯೋಗೇಂದ್ರ ಯಾದವ್, ಹೋರಾಟಗಾರರು ಮತ್ತು ಸಾಹಿತಿಗಳಾದ ದೇವನೂರು ಮಹಾದೇವ, ವಿಶ್ರಾಂತ ನ್ಯಾ. ಎಚ್.ಎನ್.ನಾಗಮೋಹನದಾಸ್, ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಡಾ.ಅಶೋಕ್ ದಾವಲೆ, ನೂರ್ ಶ್ರೀಧರ್, ಎಸ್.ಆರ್.ಹಿರೇಮಠ್, ಶಿವಕುಮಾರ್ ಕಕ್ಕಾಚಿ, ಮೈಕೆಲ್ ಬಿ.ಫರ್ನಾಂಡೀಸ್ ಸೇರಿಂದಂತೆ ಹಲವಾರು ಚಿಂತಕರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.


ಇದನ್ನೂ ಓದಿ: ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ಎರಡು ಕೃಷಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...