Homeಮುಖಪುಟಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

ಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

ರಿಯಾ ಚಕ್ರವರ್ತಿಯ ಪ್ರಾಥಮಿಕ ತನಿಖೆಯ ಸಮಯದಲ್ಲಿ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರ ಕೆಲವು ನಟರ ಹೆಸರುಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಸಹಜ ಸಾವಿನ ತನಿಖೆ ಜೊತೆಗೆ ಡ್ರಗ್ಸ್ ಕೇಸ್ ಕೂಡ ಸೇರಿಕೊಂಡಿದ್ದು, ಈ ಸಂಬಂಧ ನಟಿ ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌ರನ್ನು ಈ ವಾರ ವಿಚಾರಣೆಗೆ ಕರೆಯಬಹುದು ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ. ತನ್ನ ಗೆಳೆಯ ಸುಶಾಂತ್ ಸಿಂಗ್ ರಜಪೂತ್‌ಗೆ ಡ್ರಗ್ಸ್ ಒದಗಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ಪ್ರಶ್ನಿಸುವಾಗ ಅವರ ಇವರ ಹೆಸರುಗಳು ಕೇಳಿಬಂದಿವೆ ಎಂದು ವರದಿಯಾಗಿದೆ.

ನಟಿ ರಿಯಾ ಚಕ್ರವರ್ತಿಯ ಮೊಬೈಲ್ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಸಂದೇಶದ ಆಧಾರದ ಮೇಲೆ ಫೆಡರಲ್ ಏಜೆನ್ಸಿ ಮೊದಲ ಪ್ರಕರಣ ನೋಂದಾಯಿಸಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಈ ನಟಿಯರಿಗೆ ಸಮನ್ಸ್ ನೀಡಬಹುದು ಎಂದು ಮೂಲಗಳು ತಿಳಿಸಿವೆ.

PC: Hindustan Times

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಇನ್ನು 59 ಗ್ರಾಂ ಗಾಂಜಾ ವಶಪಡಿಸಿಕೊಂಡ ಆಧಾರದ ಮೇಲೆ ಏಜೆನ್ಸಿ ಎರಡನೇ ಪ್ರಕರಣವನ್ನು ದಾಖಲಿಸಿದೆ. ಇದರಲ್ಲಿ ರಿಯಾ ಚಕ್ರವರ್ತಿ ಸೇರಿದಂತೆ 15ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಯಲ್ಲದೆ, ಈ ತಿಂಗಳ ಆರಂಭದಲ್ಲಿ ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ರಜಪೂತ್ ಅವರ ಇಬ್ಬರು ಉದ್ಯೋಗಿಗಳು ಮತ್ತು ಬಾಲಿವುಡ್ ಜೊತೆ ಸಂಬಂಧ ಹೊಂದಿರುವ ಡ್ರಗ್ಸ್ ಮಾರಾಟಗಾರರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಗೆ ಸೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಬೈಕುಲಾ ಜೈಲಿನಲ್ಲಿ ಇರಿಸಲಾಗಿದೆ.

“ರಿಯಾ ಚಕ್ರವರ್ತಿಯ ಮೊಬೈಲ್‌ನಿಂದ ಮರುಪಡೆಯಲಾದ ವಾಟ್ಸಾಪ್ ಸಂದೇಶಗಳ ಆಧಾರದ ಮೇಲೆ ನೋಂದಾಯಿಸಲಾದ ಮೊದಲ ಪ್ರಕರಣದ ಪ್ರಾಥಮಿಕ ತನಿಖೆಯ ಸಮಯದಲ್ಲಿ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರ ಕೆಲವು ನಟರ ಹೆಸರುಗಳು ಬಂದಿವೆ. ಇಬ್ಬರೂ ಈ ವಾರ ತನಿಖೆಗೆ ಬರಲು ಶೀಘ್ರದಲ್ಲೇ ಸಮನ್ಸ್ ನೀಡಲಾಗುವುದು  ಎಂದು ತನಿಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ನಟಿ ಶ್ರದ್ಧಾ ಕಪೂರ್,‌ ‍ಸುಶಾಂತ್‌ ಸಿಂಗ್ ರಜಪೂತ್ ಅವರ ಲೋನಾವ್ಲಾ ಫಾರ್ಮ್ ಹೌಸ್‌ನಲ್ಲಿ ನಡೆದ ಚಿಚ್ಚೋರೆ ಚಿತ್ರದ ಯಶಸ್ಸಿನ ಪಾಟಿಯಲ್ಲಿ ಭಾಗವಹಿಸಿದ್ದರು. ಪ್ರಕರಣದಲ್ಲಿ ನಟಿ ರಾಕುಲ್ ಪ್ರೀತ್ ಹೆಸರು ಕೂಡ ಕೇಳಿಬಂದಿತ್ತು.

PC: Hamara Photo

34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ತನ್ನ ಅಪಾರ್ಟ್ಮೆಂಟ್‌ನಲ್ಲಿ  ಶವವಾಗಿ ಪತ್ತೆಯಾಗಿದ್ದರು. ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯಗಳು ನಡೆಸುತ್ತಿವೆ. ಅಸಹಜ ಸಾವು ಪ್ರಕರಣಕ್ಕೆ ಡ್ರಗ್ಸ್ ಕೇಸ್ ಕೂಡ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...