Homeಕರ್ನಾಟಕರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ಈ ಸಂದರ್ಭದಲ್ಲಿ, "ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ" ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.

- Advertisement -
- Advertisement -

“ಈ ಸರ್ಕಾರವು ರೈತ, ದಲಿತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಈ ನಾಡಿನ ರೈತರು, ಕಾರ್ಮಿಕರು ಮತ್ತು ದಲಿತರನ್ನು ಕಾರ್ಪೋರೇಟ್ ಗಳಿಗೆ, ಕೈಗಾರಿಕೆಗಳಿಗೆ ಜೀತ ಮಾಡುವ ಗುಲಾಮರನ್ನಾಗಿಸುವ ಹುನ್ನಾರ ಮಾಡುತ್ತಿದೆ ಎಂದು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ ಆರೋಪಿಸಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟದ ಪರ್ಯಾಯ ಜನತಾ ಅಧಿವೇಶನದ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು, “ಕೊರೋನಾಗಿಂತ ದೊಡ್ಡ ಆತಂಕವನ್ನು ಸರ್ಕಾರ ನಮ್ಮ ಮುಂದಿಟ್ಟಿದೆ. ಜನವಿರೋಧಿ ಕಾನೂನುಗಳನ್ನು ನೀವು ಚರ್ಚಿಸಬಾರದು, ವಿರೋಧಿಸಬಾರದು ಎಂಬ ಕಾರಣಕ್ಕೆ ಸುಗ್ರೀವಾಜ್ಞೆಗಳನ್ನು ತಂದು ಮಸೂದೆಗಳನ್ನು ಜಾರಿಗೊಳಿಸಲು ಹೊರಟಿದೆ” ಎಂದು ಆರೋಪಿಸಿದ್ದಾರೆ.

“ಕೊರೊನಾದ ಆತಂಕದ ನಡುವೆ ಈ ಮೂರೂ (ರೈತ, ದಲಿತ, ಕಾರ್ಮಿಕ) ಕೈಗಳು ಸೇರಿವೆ. ಈ ಬಾರಿ ಅವು ಒಟ್ಟು ಸೇರಿರುವುದಷ್ಟೇ ಅಲ್ಲದೇ ತಮ್ಮ ಕೈಗಳಲ್ಲಿ ತಂತಿ ಬೇಲಿಯನ್ನು ಹಿಡಿದುಕೊಂಡಿವೆ. ಈ ತಂತಿಬೇಲಿ ರಕ್ಷಣೆಯ ಸಂಕೇತವಾಗಿದೆ. ಈ ಮೂರೂ ಕೈಗಳು ಇಂದು ಸೇರಿ ಇಡೀ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತಿವೆ. ಈ ರಕ್ಷಣೆಗಾಗಿ ಇಂದು ಎಲ್ಲಾ ಹೋರಾಟಗಾರರೂ ಇಲ್ಲಿ ಸೇರಿದ್ದೀವಿ. ‌ಹಾಗಾಗಿ ಇದು ಅತ್ಯಂತ ಮಹತ್ವದ ದಿನವಾಗಿದೆ. ಈ ದಿನದಂದು ನಮ್ಮ ಪೂರ್ವಜರು ನಮ್ಮ ಒಳಿತಿಗಾಗಿ ಒಂದಾಗಿದ್ದರು ಎಂದು, ನಮ್ಮ ಮುಂದಿನ ಪೀಳಿಗೆಯವರು ನಮ್ಮನ್ನು ನೆನಪಿಕೊಳ್ಳಲಿದ್ದಾರೆ” ಎಂದು ಪ್ರಕಾಶ್ ಕಮ್ಮರಡಿ ಅಭಿಪ್ರಾಯಪಟ್ಟರು.

‘ಭೂ ಸುಧಾರಣೆ, ಎಪಿಎಂಸಿ ಮತ್ತು ಕಾರ್ಮಿಕ ಭದ್ರತೆಯಂತಹ ಕಾಯ್ದೆಗಳಿಗೆ ಸರ್ಕಾರ ತಿದ್ದುಪಡಿ ಮಾಡುತ್ತಿದೆ. ಇದನ್ನು ಚರ್ಚೆ ಮಾಡದೇ ಜಾರಿಗೆ ತರುವ ಅಗತ್ಯವೇನಿತ್ತು? ಆತುರ ಬೇಡ, ಚರ್ಚಿಸಿದ ನಂತರ ಜಾರಿಗೆ ತನ್ನಿ. ಅಂಬೇಡ್ಕರ್ ಆಶಯದ ಸಂಸತ್ತು ಇದೆ. ಇಂತಹ ನೀಚ ಕೆಲಸಗಳಿಂದ ಅದನ್ನು ಅಪವಿತ್ರ ಮಾಡಬೇಡಿ. ಯಾವುದೇ ಕಾನೂನ್ನಾದರೂ ಚರ್ಚಿಸಿ ಜಾರಿ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ಜನತಾ ಅಧಿವೇಶನದ ಉದ್ಘಾಟನೆಯನ್ನು, ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರಾಧ್ಯಕ್ಷರಾದ ಯೋಗೇಂದ್ರ ಯಾದವ್‌ರವರು ಕಾಗೋಡು ಹೋರಾಟದ ನೆನಪಿನಲ್ಲಿ ಮಡಿಕೆಯಲ್ಲಿರುವ ಪವಿತ್ರ ಮಣ್ಣನ್ನು ಯುವ ರೈತರಿಗೆ ನೀಡುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ, “ನಮ್ಮ ಪೂರ್ವಿಕರ ರಕ್ತ ಮತ್ತು ಬೆವರಿನಿಂದ ಮಿಂದಿರುವ ಈ ಪವಿತ್ರ ಮಣ್ಣನ್ನು ಕಳ್ಳ ಖದೀಮರ ಪಾಲಾಗಲು ಬಿಡುವುದಿಲ್ಲ” ಎಂದು ಭೂ ಸ್ವಾಧೀನ ಕಾಯ್ದೆಯನ್ನು ವಿರೋಧಿಸುವ ಪ್ರತಿಜ್ಞೆ ಮಾಡಿದರು.


ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...