Homeಮುಖಪುಟಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತರುತ್ತಿರುವ ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು ರೈತರ ಗುರುತನ್ನೇ ಅಳಿಸಿಹಾಕಲಿವೆ. ಹಳ್ಳಿಗಳಲ್ಲಿ ರೈತರನ್ನು ಅವರದೇ ಭೂಮಿಯಲ್ಲಿ ಕೂಲಿಕಾರರನ್ನಾಗಿಸುವ ಅಥವಾ ರೈತರನ್ನು ನಾಶಗೊಳಿಸುವ, ಅವರನ್ನು ನಗರಗಳಿಗೆ ದೂಡುವ ಈ ಸುಗ್ರೀವಾಜ್ಞೆಗಳನ್ನು ಯಾವ ಬೆಲೆ ತೆತ್ತಾದರೂ ಸರಿಯೇ ತಡೆಯಬೇಕಾಗಿದೆ ಎಂದು ಜಸ್ಟೀಸ್ ನಾಗಮೋಹನ್ ದಾಸ್ ತಿಳಿಸಿದ್ದಾರೆ.

ರೈತ-ದಲಿತ-ಕಾರ್ಮಿಕರ ಐಕ್ಯಹೋರಾಟದ ಅಂಗವಾಗಿ ನಡೆದ ಜನತಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಅಲ್ಪ ಸ್ವಲ್ಪ ಭೂಮಿ ಹೊಂದಿರುವ ರೈತರನ್ನು ಅವರ ಜಮೀನಿನಿಂದ ಒಕ್ಕಲೆಬ್ಬಿಸಿ ಅವರನ್ನು ಅದೇ ಜಮೀನಿನಲ್ಲಿ ಕೂಲಿಕಾರರನ್ನಾಗಿ ಮಾಡುವ ಉದ್ದೇಶದಿಂದಲೇ ಸರ್ಕಾರ ಈ ಸುಗ್ರಿವಾಜ್ಞೆಗಳನ್ನು ತರುತ್ತಿದೆ ಎಂದು ಅಸಮಾನಧಾನ ವ್ಯಕ್ತಪಡಿಸಿದರು.

ಹಿರಿಯ ಹೋರಾಟಗಾರ ಎಸ್‌.ಆರ್ ಹಿರೇಮಠ್ ಮಾತನಾಡಿ “ಸಾಲಮನ್ನಾ, ಬೆಂಬಲ ಬೆಲೆ ಯಂತಹ ಪರಿಹಾರಗಳು ರೈತರಿಗೆ ತಾತ್ಕಾಲಿಕ ಪರಿಹಾರಗಳಷ್ಟೆ. ಆದರೆ ತಾನು ಬೆಳೆದ ಬೆಲೆ ನಿಗಧಿ ಮಾಡುವಂತಹ ದೀರ್ಘಕಾಲಿಕ ಪರಿಹಾರವೊಂದನ್ನು ನಾವು ಕಂಡುಕೊಳ್ಳಬೇಕು ಎಂದರು.

ಮೊದಲನೆಯದಾಗಿ, ನಾವು ನಮ್ಮ ಭೂಮಿಯನ್ನು ಯಾವುದೇ ಕಾರಣಕ್ಕೂ ಕಾರ್ಪೋರೇಟ್ ಕಂಪನಿಗಳಿಗೆ ಬಿಟ್ಟುಕೊಡಬಾರದು. ಎರಡನೆಯದಾಗಿ ಭೂ ಬಳಕೆ ನೀತಿಯನ್ನು ಜಾರಿಗೆ ತರುವಂತೆ ಒತ್ತಾಯಿಸುವುದು. ಮೂರನೆಯದಾಗಿ, ಉಳುವವನೇ ಭೂಮಿಯ ಒಡೆಯ ಎನ್ನುವುದು ರಾಷ್ಟ್ರೀಐ ಅಜೆಂಡಾ ಆಗಬೇಕು. ಕೊನೆಯದಾಗಿ, ಬಹುರಾಷ್ಟ್ರೀಯ ಕಂಪನಿ ಅಥವಾ ಕಾರ್ಪೋರೇಟ್ ಕಂಪನಿಗಳನ್ನು ತೊಲಗಿಸಿ ಸಂಪೂರ್ಣ ಸಹಕಾರೀ ವ್ಯವಸ್ಥೆ ಬರುವಂತೆ ಒತ್ತಾಯಿಸಬೇಕು ಎಂದರು.

ಕನಿಷ್ಟ ರೈತರೊಂದಿಗೆ ಸಣ್ಣ ಚರ್ಚೆ ನಡೆಸದೇ ಈ ರೈತವಿರೋಧಿ ಸುಗ್ರೀವಾಜ್ಞೆಗಳನ್ನು ಸರ್ಕಾರ ಜಾರಿಗೊಳಿಸುತ್ತಿರುವುದು ನಾಚಿಕೆಗೇಡು. ನಾವೆಲ್ಲರೂ ಒಟ್ಟಾಗಿ ಈ ಸುಗ್ರೀವಾಜ್ಞೆಗಳನ್ನು ಕಸದ ಬುಟ್ಟಿಗೆ ಎಸೆಯುವ ಕಾಲ ಬಂದಿದೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅಭಿಪ್ರಾಯಪಟ್ಟರು.


ಇದನ್ನೂ ಓದಿ: ರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...