Homeಮುಖಪುಟನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ಇವರಿಬ್ಬರೂ ಅತ್ಯಂತ ಕಠಿಣ ತರಬೇತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ನೌಕಾಪಡೆಯ ಭಾಗವಾಗಲಿರುವ ಅತ್ಯಾಧುನಿಕ ಎಂಎಚ್-60 ಆರ್‌ ಹೆಲಿಕಾಪ್ಟರ್‌ಗಳನ್ನೂ ಈ ಮಹಿಳಾ ಅಧಿಕಾರಿಗಳು ನಿರ್ವಹಿಸಲಿದ್ದಾರೆ.

- Advertisement -
- Advertisement -

ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಇಬ್ಬರು ಮಹಿಳೆಯರನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆಗೆ ನಿಯೋಜನೆ ಮಾಡಲಾಗಿದೆ. ನೌಕಾಪಡೆಯ ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಮತ್ತು ಸಬ್ ಲೆಫ್ಟಿನೆಂಟ್ ರಿತಿ ಸಿಂಗ್‌ ಯುದ್ಧನೌಕೆಯ ಕರ್ತವ್ಯಕ್ಕೆ ನಿಯೋಜನೆಗೊಂಡ ಮೊಟ್ಟ ಮೊದಲ ಮಹಿಳೆಯರಾಗಿದ್ದಾರೆ.

ನೌಕಾಪಡೆಯಲ್ಲಿ ಹಲವು ಮಹಿಳಾ ಅಧಿಕಾರಿಗಳಿದ್ದರೂ ಸಹ ಯುದ್ಧನೌಕೆಯಲ್ಲಿ ಮಹಿಳೆಯರಿರಲಿಲ್ಲ. ಬಾತ್‌ರೂಂ ವ್ಯವಸ್ಥೆ, ಕ್ವಾರ್ಟರ್‌‌ಗಳಲ್ಲಿ ಖಾಸಗಿತನನದ ಕೊರತೆ ಇತ್ಯಾದಿ ಕಾರಣಗಳಿಂದ ಮಹಿಳೆಯರನ್ನು ಯುದ್ಧನೌಕೆಗೆ ನಿಯೋಜಿಸುತ್ತಿರಲಿಲ್ಲ. ಆದರೆ ನೌಕಾಪಡೆ ಇದೀಗ ಐತಿಹಾಸಿಕ ಕ್ರಮ ಕೈಗೊಂಡು ಇಬ್ಬರು ಮಹಿಳಾ ಅಧಿಕಾರಿಗಳನ್ನು ನಿಯೋಜಿಸಿದೆ.

ಇವರಿಬ್ಬರೂ ಅತ್ಯಂತ ಕಠಿಣ ತರಬೇತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ನೌಕಾಪಡೆಯ ಭಾಗವಾಗಲಿರುವ ಅತ್ಯಾಧುನಿಕ ಎಂಎಚ್-60 ಆರ್‌ ಹೆಲಿಕಾಪ್ಟರ್‌ಗಳನ್ನೂ ಈ ಮಹಿಳಾ ಅಧಿಕಾರಿಗಳು ನಿರ್ವಹಿಸಲಿದ್ದಾರೆ. ಕ್ಷಿಪಣಿ ಮತ್ತು ಟಾರ್ಪೆಡೊಗಳ ಮೂಲಕ ಶತ್ರುದೇಶದ ಯುದ್ಧನೌಕೆ, ಜಲಾಂತರ್ಗಾಮಿಗಳನ್ನೂ ನಾಶಪಡಿಸುವ ಸಾಮರ್ಥ್ಯ ಈ ಹೆಲಿಕಾಪ್ಟರ್‌ಗೆ ಇದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ 1,350 ಕೋಟಿ  ರೂ. ಆರ್ಥಿಕ ಪ್ಯಾಕೇಜ್ ಘೋಷಣೆ

ಇಬ್ಬರಿಗೂ ಕೊಚ್ಚಿಯಲ್ಲಿ ಐಎನ್‌ಎಸ್ ಗರುಡಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬ್ಸರ್ವರ್ಸ್​  ಆಗಿ ಗ್ರಾಜುಯೇಟ್ ಆಗಿದ್ದಕ್ಕೆ ವಿಂಗ್ಸ್ ನೀಡಿ ಅಭಿನಂದಿಸಲಾಗಿದೆ.

‘ನಮಗೆ ಪುರುಷ ಸಿಬ್ಬಂದಿಗೆ ಸರಿಸಮನಾದ, ಅತ್ಯಂತ ಕಠಿಣ ತರಬೇತಿ ಸಿಕ್ಕಿತ್ತು. ಎಂಥದ್ದೇ ಒತ್ತಡವನ್ನೂ ನಾವು ನಿಭಾಯಿಸಬಲ್ಲೆವು’ ಎಂದು ಈ ಮಹತ್ತರ ನಿಯೋಜನೆಯ ಭಾಗವಾಗಿರುವ ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ನಮ್ಮನ್ನು ಇಲ್ಲಿ ಸಮಾನವಾಗಿ ಪರಿಗಣಿಸಲಾಗಿದೆ. ನಮ್ಮ ಪುರುಷ ಸಿಬ್ಬಂದಿ ಯಾವ ತರಬೇತಿಯನ್ನು ಪಡೆದರು, ನಾವು ಅದೇ ತರಬೇತಿ ಪಡೆದೆವು. ಇದು ಒಂದು ದೊಡ್ಡ ಜವಾಬ್ದಾರಿ, ಸವಾಲಿನ ಕೆಲಸ. ನಾವು ಅದನ್ನು ಎದುರು ನೋಡುತ್ತಿದ್ದೇವೆ “ಎಂದು ಗಾಜಿಯಾಬಾದ್ ಮೂಲದ ಸಬ್ ಲೆಫ್ಟಿನೆಂಟ್ ತ್ಯಾಗಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ: ಖಂಡಿಸಿ ‘#KisanVirodhiNarendraModi’ ಟ್ವೀಟಾಂದೋಲನ

ನೌಕಾಪಡೆ ಯುದ್ಧನೌಕೆಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ನೇಮಿಸಿದ್ದು, ಭಾರತೀಯ ಸೇನೆಯಲ್ಲಿ ಮಹಿಳೆಯರು ಪುರುಷರ ಸಮಾನವಾಗಿ ಕೆಲಸ ನಿರ್ವಹಿಸುವಂತಾಗುತ್ತಿದೆ.

ನೌಕಾಪಡೆಯಿಂದ ಇಬ್ಬರ ನಿಯೋಜನೆ ಹೊರಬಿದ್ದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಇಬ್ಬರಿಗೂ ಶುಭಕೋರಿದ್ದಾರೆ.


ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...