Homeಸುಳ್ಳಪ್ಪೋ ಸುಳ್ಳುಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

ಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

- Advertisement -
- Advertisement -

ಚುನಾವಣೆ ಸಮರದಲ್ಲಿ ಸುಳ್ಳು ಸಹಜ. ಆದರೆ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಮಾಣ ಹೆಚ್ಚಾದಂತೆಲ್ಲ ಸುಳ್ಳುಗಳ ಮಹಾಪೂರವೇ ಹರಿದು ಬರುತ್ತಿದ್ದು ರಾಜಕೀಯ, ಏಧರ್ಮಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪರೀಕ್ಷಿಸದೇ ನಂಬುವಂತೆಯೇ ಇಲ್ಲ.
ಅದಿರಲಿ, ಸರ್ಕಾರವೇ ಇಂತಹ ಫೇಕ್ ಫ್ಯಾಕ್ಟರಿಗಳನ್ನು ಪೋಷಿಸತೊಡಗಿದರೆ, ದೇಶದ ಪ್ರಧಾನಿಯೇ ಇಂತಹ ಸುಳ್ ಕಾರ್ಖಾನೆಗಳನ್ನು ಪ್ರಮೋಟ್ ಮಾಡತೊಡಗಿದರೆ ಅದಕ್ಕಿಂತ ನಾಚಿಕೆಗೇಡು ಬೇರೆನಿದೆ?
ಕಳೆದ ತಿಂಗಳು ಸಮರ್ಥ ಬನ್ಸಾಲ್ ಎಂಬ ಪರ್ತಕರ್ತರು ಈ ಫೇಕ್ ಫ್ಯಾಕ್ಟರಿಗಳ ಕುರಿತು ಒಂದು ತನಿಖಾ ವರದಿ ಪ್ರಕಟಿಸಿದರು. ಹೆಚ್ಚುತ್ತಿರುವ ಫೇಕ್ ಸ್ಟೋರಿಗಳು ಮತ್ತು ಸರ್ಕಾರದ ನಡುವೆ ಲಿಂಕ್ ಇರುವುದನ್ನು ಅವರು ಎಳೆಎಳೆಯಾಗಿ ತೋರಿಸಿದ್ದರು. ಪ್ರಧಾನಿಯ ನಮೋ ಆ್ಯಪ್ ಮೂಲಕ ಸುಳ್ಳು ಸುದ್ದಿಗಳು, ಕುಚೋದ್ಯಗಳು ಹರಿದಾಡುವುದನ್ನು ಬನ್ಸಾಲ್ ತೋರಿಸಿದರು.
ನಮೋ ಆ್ಯಪ್‍ನ ‘ಮೈ ನೆಟ್‍ವರ್ಕ್’ ವಿಭಾಗದಲ್ಲಿ 15 ಪ್ರಮೋಟೆಡ್ ಅಕೌಂಟುಗಳಿವೆ, ಅದರಲ್ಲಿ ಫೇಕ್ ಫ್ಯಾಕಟ್ರಿ ಎಂದೇ ಕುಖ್ಯಾತಿ ಪಡೆದಿರುವ ‘ದಿ ಇಂಡಿಯನ್ ಐ’ ಕೂಡ ಇದೆ. ಬಳಕೆದಾರರು ಇದನ್ನು ಫಾಲೋ ಮಾಡದೇ ಇದ್ದಾಗಲೂ ಇದರ ಪೋಸ್ಟ್‍ಗಳು ಅವರ ‘ಮೈ ನೆಟ್‍ವರ್ಕ್’ ಫೀಡರ್‍ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ.

ಕೇಜ್ರಿವಾಲಾ ದೇಶದ್ರೋಹಿಯಂತೆ!
ಫೇಸ್‍ಬುಕ್ ಪೇಜ್, ಟ್ವಿಟರ್, ವೆಬ್‍ಸೈಟ್- ಹೀಗೆ ಸಾಮಾಜಿಕ ಜಾಲತಾಣದ ಎಲ್ಲ ಸ್ತರಗಳಲ್ಲೂ ಇರುವ ‘ದಿ ಇಂಡಿಯನ್ ಐ’ ಎಂತಹ ಕುಚೋದ್ಯ ಮಾಡುತ್ತದೆ ಎಂಬುದಕ್ಕೆ ಈ ಉದಾಹರಣೆ ನೋಡಿ. ವಿರೋಧ ಪಕ್ಷಗಳ ಮಹಾಘಟಬಂಧನ್ ಸಮಾವೇಶದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರು ಪಾಕಿಸ್ತಾನದ ಪರ ಮಾತಾಡಿದರು ಎಂದು ಈ ಇಂಡಿಯನ್ ಐ ಸುಳ್ ಸುದ್ದಿ ಹರಡಿತ್ತು. ‘ಮತ್ತೆ ಮೋದಿ ಅಧಿಕಾರಕ್ಕೆ ಬಂದರೆ ಪಾಕಿಸ್ತಾನಕ್ಕೆ ತೊಂದರೆ’ ಎಂಬರ್ಥದಲ್ಲಿ ಕೇಜ್ರಿವಾಲ ಮಾತಾಡಿದರು ಎಂದಿತ್ತು. ಅದಕ್ಕಾಗಿ ಅವರನ್ನು ದೇಶದ್ರೋಹಿ ಎಂದು ‘ಆರ್ಡರ್’ ಅನ್ನೂ ಪಾಸ್ ಮಾಡಿಬಿಟ್ಟಿತ್ತು.
ಆದರೆ ಆಗಲೇ ಅಲ್ಟ್‍ನ್ಯೂಸ್ ಇಂಡಿಯನ್ ಐ ಹಾಕಿರುವ ವಿಡಿಯೋ ತಿರುಚಿದ್ದು ಎಂದು ಸಾಬೀತು ಮಾಡಿತ್ತು. ‘ಮೋದಿ ಮತ್ತು ಶಾ ಮತ್ತೆ ಅಧಿಕಾರಕ್ಕೆ ಬಂದರೆ ದೇಶ ಉಳಿಯಲಾರದು’ ಎಂಬ ಕೇಜ್ರಿವಾಲರ ಮಾತನ್ನು ತಿರುಚಲಾಗಿತ್ತು. ‘ದೇಶ’ ಎಂದಿರುವಲ್ಲಿ ‘ಪಾಕಿಸ್ತಾನ’ ಎಂದು ಸೇರಿಸಲಾಗಿತ್ತು! ಇಂತಹ ಅನಾಹುತ ಮಾಡುವ ಗುಂಪಿಗೆ ನರೇಂದ್ರ ಮೋದಿಯವರ ಆ್ಯಪ್ ಸಪೋರ್ಟು ಮಾಡುತ್ತಿದೆ.
ಗುಜರಾತ್ ಲಿಂಕ್
ಅಲ್ಟ್‍ನ್ಯೂಸ್ ಕಳೆದ ಸೆಪ್ಟೆಂಬರ್‍ನಲ್ಲಿ ಈ ಇಂಡಿಯನ್ ಐಗಿರುವ ಗುಜರಾತ್ ಲಿಂಕನ್ನು ಬಯಲು ಮಾಡಿತ್ತು. ಗುಜರಾತ್ ಮೂಲದ ಸಿಲ್ವರ್ ಟಚ್ ಟೆಕ್ನಾಲಜೀಸ್ ಕಂಪನಿಗೂ ಇದಕ್ಕೂ ಸಂಬಂಧವಿದೆ. ಈ ಸಿಲ್ವರ್ ಟಚ್ ಟೆಕ್ನಾಲಜಿ ಸಂಸ್ಥೆಯೇ ನಮೋ ಆ್ಯಪ್ ರೂಪಿಸಿದೆ! ಈ ಕಂಪನಿಯ ಸರ್ವರ್‍ಗಳ ಮೂಲಕವೇ ಇಂಡಿಯನ್ ಐ ಹಾಸ್ಟ್ ಮಾಡಲಾಗುತ್ತಿತ್ತು. ಅಲ್ಟ್‍ನ್ಯೂಸ್ ತನಿಖೆಯ ನಂತರ ಇಂಡಿಯನ್ ಐ ಐಪಿ ಅಡ್ರೆಸ್ ಬದಲು ಮಾಡಲಾಗಿತು.
ಇದೇ ಇಂಡಿಯನ್ ಐ ಕೊಲ್ಕೊತ್ತಾದ ಮಹಾಘಟಬಂಧನ್ ರ್ಯಾಲಿಯಲ್ಲಿ ಯಾರೊಬ್ಬರೂ ‘ಭಾರತ್ ಮಾತಾ ಕಿ ಜೈ’ ಅನ್ನಲಿಲ್ಲ ಎಂದು ಸುಳ್ಳು ಹರಡಿತ್ತು. ಇದನ್ನೇ ಅಮಿತ್ ಶಾ ತಮ್ಮ ಭಾಷಣಗಳಲ್ಲಿ ಹೇಳಿದ್ದರು. ಆದರೆ ರ್ಯಾಲಿಯ ಕೊನೆಯಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ವಂದೇ ಮಾತರಂ ಘೋಷಣೆಗಳನ್ನು ಹೇಳಿದ್ದು ವಿಡಿಯೋದಲ್ಲಿ ಸ್ಪಷ್ಟವಾಗಿದೆ.
ಹೀಗೆ ಬರೀ ಸುಳ್ಳು, ಕುಚೋದ್ಯವನ್ನೇ ಮಾಡುವ ಇಂತಹ ನೂರಾರು ಗುಂಪುಗಳಿವೆ. ಆದರೆ, ಪ್ರಧಾನಿಯವರ ನಮೋ ಆ್ಯಪ್ ಇಂಥವನ್ನು ಬೆಂಬಲಿಸುತ್ತದೆ ಎನ್ನುವ ವಿಷಯ ಅಸಹ್ಯಕರವಾದುದು.
ಪ್ರಧಾನಿಯೇ ಒಬ್ಬ ಮಹಾ ಸುಳ್ಳುಗಾರನಾಗಿರುವಾಗ, ಸುಳ್ಳುಗಲೇ ಅವರ ಬಂಡವಾಳವಾಗಿರುವಾಗ ಇಂಥದ್ದೆಲ್ಲ ನಡೆಯದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...