Homeಸಿನಿಮಾಕ್ರೀಡೆಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಆರ್‌ಸಿಬಿ ಘೋಷಿಸಿತ್ತು. ಹಾಗೇಯೇ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂದು ಬರೆದ ಸಾಲುಗಳೊಂದಿಗೆ ಪಂದ್ಯಗಳಲ್ಲಿ ಕಣಕ್ಕೆ ಇಳಿಯುತ್ತಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಜನರ ಸಹಾಯಕ್ಕೆ ನಿಂತ ಕೊರೊನಾ ವಾರಿಯರ್ಸ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ವಿಶೇಷ ಗೌರವ ಸಲ್ಲಿಸುತ್ತಿದೆ. ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ ತಮ್ಮ ಹೆಸರಿಗೆ ಬದಲಾಗಿ ಕೊರೊನಾ ವಾರಿಯರ್ಸ್ ಹೆಸರಿರುವ ಜೆರ್ಸಿಗಳನ್ನು ತೊಟ್ಟು ಕಣಕ್ಕಿಳಿದಿದ್ದಾರೆ.

ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ, ಕೊರೊನಾ ಯೋಧರ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಘೋಷಿಸಿತ್ತು. ಹಾಗೇಯೇ ತರಬೇತಿ ಸಮಯದಲ್ಲಿ ಮತ್ತು ಪಂದ್ಯಗಳ ಸಮಯದಲ್ಲೂ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂಬ ಸಾಲುಗಳು ಇರಲಿವೆ ಎಂದು ಆರ್‌ಸಿಬಿ ಹೇಳಿತ್ತು.

ಇದನ್ನೂ ಓದಿ: ಕ್ರಿಕೆಟ್‌ ದಕ್ಷಿಣ ಆಫ್ರಿಕಾವನ್ನು ಅಮಾನತು ಮಾಡಿದ ದಕ್ಷಿಣ ಆಫ್ರಿಕಾ ಸರ್ಕಾರ

ಆರ್‌ಸಿಬಿ ಅಭಿಯಾನದ ಭಾಗವಾಗಿ ಸ್ಪೋಟಕ ಬ್ಯಾಟ್ಸ್‌ಮನ್ ಎಬಿಡಿ ಕೊರೊನಾ ವಾರಿಯರ್‌ ಪಾರಿತೋಶ್ ಪಂತ್ ಜೊತೆ ಮಾತನಾಡಿ ಅವರ ಕೆಲಸವನ್ನು ಗೌರವಿಸಲು, ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಮತ್ತು ತಮ್ಮ ಟ್ವಿಟ್ಟರ್‌ ಖಾತೆ, ಇನ್ಸ್‌ಸ್ಟ್ರಾಗ್ರಾಮ್ ಖಾತೆಯ ಹೆಸರನ್ನು ಪಾರಿತೋಷ್ ಪಂತ್ ಎಂದು ಬದಲಿಸಿದ್ದಾರೆ.

PC:DNA India

29 ವರ್ಷದ ಪಾರಿತೋಶ್ ಪಂತ್ ಮುಂಬೈನಲ್ಲಿ ಬಾರ್ಬಿಕ್ಯೂ ಕೆಫೆ ನಡೆಸುತ್ತಾರೆ. ಲಾಕ್‌ಡೌನ್ ಸಮಯದಲ್ಲಿ ಫೀಡಿಂಗ್ ಫ್ರಮ್ ಫಾರ್ ಮೂಲಕ ಬಡವರಿಗೆ ಮತ್ತು ಕೊರೊನಾದಿಂದ ಕೆಲಸ ಕಳೆದುಕೊಂಡ ಸಾವಿರಾರು ನಿರುದ್ಯೋಗಿಗಳಿಗೆ ಆಹಾರ ಒದಗಿಸಿದ್ದರು. ಇವರಿಗೆ ಗೌರವ ಸಲ್ಲಿಸಲು ಎಬಿಡಿ ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಬದಲಿಸಿದ್ದಾರೆ. ಜೊತೆಗೆ ಜರ್ಸಿ ಧರಿಸಿದ ಪೋಟೋ ಮತ್ತು ಪಾರಿತೋಶ್‌ಗೆ ಗೌರವ ಸಲ್ಲಿಸುವ ಸಾಲುಗಳನ್ನು ಬರೆದು ಟ್ವೀಟ್ ಮಾಡಿದ್ದಾರೆ

PC:Telegraph India
(ಕೊರೊನಾ ವಾರಿಯರ್‌ ಪಾರಿತೋಶ್ ಪಂತ್)

ಇದನ್ನೂ ಓದಿ:  ಬ್ಯಾಟ್ಸ್‌ಮನ್ ಎಬಿಡಿ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ ಕೆಫೆ ಮಾಲೀಕ ಪಾರಿತೋಶ್ ಪಂತ್ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

’ಈ ತಿಂಗಳ ಆರಂಭದಲ್ಲಿ ನಾನು ಎಬಿಡಿ ಅವರ ಜೊತೆಗೆ ವಿಡಿಯೋ ಮುಖಾಂತರ ಮಾತನಾಡಿದೆ. ಅವರು ನಮ್ಮ ಕೆಲಸವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ನಾವು ಮಾಡಿದ ಕೆಲಸವನ್ನು ವಿವರವಾಗಿ ಕೇಳಿದರು’ ಎಂದು ಪಾರಿತೋಶ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಮ್ಮ ಕೆಲಸದಲ್ಲಿ ಬಂದ ಸವಾಲುಗಳ ಬಗ್ಗೆ , ಅವುಗಳನ್ನು ನಾವು ಎದುರಿಸಿದ ಬಗ್ಗೆ ಕೇಳಿದರು. ನಾನು ಮತ್ತು ನಮ್ಮ ವಾಲೆಂಟಿಯರ್ಸ್ ಗೋವಂಡಿ ಕೊಳೆಗೆರಿಯಲ್ಲಿ ಕೆಲಸ ಮಾಡಿದ ರೀತಿಯನ್ನು ವಿವರಿಸಿದೆ. ಎಲ್ಲವನ್ನು ಕೇಳಿದ ಎಬಿಡಿ ನಿಮ್ಮ ಕಾರ್ಯ ಸ್ಪೂರ್ತಿದಾಯಕ ಮತ್ತು ಅದ್ಭುತ ಎಂದರು ಎಂದು ಪಾರಿತೋಶ್ ವಿವರಿಸಿದ್ದಾರೆ.

ಇನ್ನು ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ  ಶ್ರವಣದೋಷಿಯಾಗಿದ್ದರೂ ಜನರ ನೆರವಿಗಾಗಿ ನಿಂತ ಸಿಮ್ರನ್‌ಜೀತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಿಮ್ರನ್‌ಜೀತ್ ಎಂಬ ಜರ್ಸಿ ತೊಟ್ಟು ಪಂದ್ಯ ಆಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಹೆಸರನ್ನು ಸಿಮ್ರನ್‌ಜೀತ್ ಸಿಂಗ್ ಎಂದು ಬದಲಿಸಿದ್ದರು.

PC:Hindustan

ಸಿಮ್ರನ್‌ಜೀತ್ ಸಿಂಗ್ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ತಮ್ಮ ಇತರ ಶ್ರವಣದೋಷಿ ಸ್ನೇಹಿತರ ಜೊತೆಗೂಡಿ 98 ಸಾವಿರ ದೇಣಿಗೆ ಸಂಗ್ರಹಿಸಿ ಬಡವರಿಗೆ ನೆರವಾಗಿದ್ದರು ಎಂದು ಆರ್‌ಸಿಬಿ ಹೇಳಿದೆ.

ಆರ್‌ಸಿಬಿಯು ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 10 ರನ್‌ಗಳಿಂದ ಜಯಿಸಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...