Homeಸಿನಿಮಾಕ್ರೀಡೆಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ಕೊರೊನಾ ವಾರಿಯರ್ಸ್ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಆರ್‌ಸಿಬಿ ಘೋಷಿಸಿತ್ತು. ಹಾಗೇಯೇ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂದು ಬರೆದ ಸಾಲುಗಳೊಂದಿಗೆ ಪಂದ್ಯಗಳಲ್ಲಿ ಕಣಕ್ಕೆ ಇಳಿಯುತ್ತಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಜನರ ಸಹಾಯಕ್ಕೆ ನಿಂತ ಕೊರೊನಾ ವಾರಿಯರ್ಸ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ವಿಶೇಷ ಗೌರವ ಸಲ್ಲಿಸುತ್ತಿದೆ. ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ ತಮ್ಮ ಹೆಸರಿಗೆ ಬದಲಾಗಿ ಕೊರೊನಾ ವಾರಿಯರ್ಸ್ ಹೆಸರಿರುವ ಜೆರ್ಸಿಗಳನ್ನು ತೊಟ್ಟು ಕಣಕ್ಕಿಳಿದಿದ್ದಾರೆ.

ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ, ಕೊರೊನಾ ಯೋಧರ ಶ್ರಮ ಮತ್ತು ತ್ಯಾಗವನ್ನು ಗೌರವಿಸುವುದಾಗಿ ಘೋಷಿಸಿತ್ತು. ಹಾಗೇಯೇ ತರಬೇತಿ ಸಮಯದಲ್ಲಿ ಮತ್ತು ಪಂದ್ಯಗಳ ಸಮಯದಲ್ಲೂ ತಮ್ಮ ಜರ್ಸಿಯ ಹಿಂಭಾಗದಲ್ಲಿ ‘ಮೈ ಕೋವಿಡ್ ಹೀರೋಸ್’ ಎಂಬ ಸಾಲುಗಳು ಇರಲಿವೆ ಎಂದು ಆರ್‌ಸಿಬಿ ಹೇಳಿತ್ತು.

ಇದನ್ನೂ ಓದಿ: ಕ್ರಿಕೆಟ್‌ ದಕ್ಷಿಣ ಆಫ್ರಿಕಾವನ್ನು ಅಮಾನತು ಮಾಡಿದ ದಕ್ಷಿಣ ಆಫ್ರಿಕಾ ಸರ್ಕಾರ

ಆರ್‌ಸಿಬಿ ಅಭಿಯಾನದ ಭಾಗವಾಗಿ ಸ್ಪೋಟಕ ಬ್ಯಾಟ್ಸ್‌ಮನ್ ಎಬಿಡಿ ಕೊರೊನಾ ವಾರಿಯರ್‌ ಪಾರಿತೋಶ್ ಪಂತ್ ಜೊತೆ ಮಾತನಾಡಿ ಅವರ ಕೆಲಸವನ್ನು ಗೌರವಿಸಲು, ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಮತ್ತು ತಮ್ಮ ಟ್ವಿಟ್ಟರ್‌ ಖಾತೆ, ಇನ್ಸ್‌ಸ್ಟ್ರಾಗ್ರಾಮ್ ಖಾತೆಯ ಹೆಸರನ್ನು ಪಾರಿತೋಷ್ ಪಂತ್ ಎಂದು ಬದಲಿಸಿದ್ದಾರೆ.

PC:DNA India

29 ವರ್ಷದ ಪಾರಿತೋಶ್ ಪಂತ್ ಮುಂಬೈನಲ್ಲಿ ಬಾರ್ಬಿಕ್ಯೂ ಕೆಫೆ ನಡೆಸುತ್ತಾರೆ. ಲಾಕ್‌ಡೌನ್ ಸಮಯದಲ್ಲಿ ಫೀಡಿಂಗ್ ಫ್ರಮ್ ಫಾರ್ ಮೂಲಕ ಬಡವರಿಗೆ ಮತ್ತು ಕೊರೊನಾದಿಂದ ಕೆಲಸ ಕಳೆದುಕೊಂಡ ಸಾವಿರಾರು ನಿರುದ್ಯೋಗಿಗಳಿಗೆ ಆಹಾರ ಒದಗಿಸಿದ್ದರು. ಇವರಿಗೆ ಗೌರವ ಸಲ್ಲಿಸಲು ಎಬಿಡಿ ತಮ್ಮ ಜರ್ಸಿ ಮೇಲೆ ಪಾರಿತೋಶ್ ಎಂದು ಬದಲಿಸಿದ್ದಾರೆ. ಜೊತೆಗೆ ಜರ್ಸಿ ಧರಿಸಿದ ಪೋಟೋ ಮತ್ತು ಪಾರಿತೋಶ್‌ಗೆ ಗೌರವ ಸಲ್ಲಿಸುವ ಸಾಲುಗಳನ್ನು ಬರೆದು ಟ್ವೀಟ್ ಮಾಡಿದ್ದಾರೆ

PC:Telegraph India
(ಕೊರೊನಾ ವಾರಿಯರ್‌ ಪಾರಿತೋಶ್ ಪಂತ್)

ಇದನ್ನೂ ಓದಿ:  ಬ್ಯಾಟ್ಸ್‌ಮನ್ ಎಬಿಡಿ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ ಕೆಫೆ ಮಾಲೀಕ ಪಾರಿತೋಶ್ ಪಂತ್ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

’ಈ ತಿಂಗಳ ಆರಂಭದಲ್ಲಿ ನಾನು ಎಬಿಡಿ ಅವರ ಜೊತೆಗೆ ವಿಡಿಯೋ ಮುಖಾಂತರ ಮಾತನಾಡಿದೆ. ಅವರು ನಮ್ಮ ಕೆಲಸವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ನಾವು ಮಾಡಿದ ಕೆಲಸವನ್ನು ವಿವರವಾಗಿ ಕೇಳಿದರು’ ಎಂದು ಪಾರಿತೋಶ್ ದಿ ಟೆಲಿಗ್ರಾಫ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನಮ್ಮ ಕೆಲಸದಲ್ಲಿ ಬಂದ ಸವಾಲುಗಳ ಬಗ್ಗೆ , ಅವುಗಳನ್ನು ನಾವು ಎದುರಿಸಿದ ಬಗ್ಗೆ ಕೇಳಿದರು. ನಾನು ಮತ್ತು ನಮ್ಮ ವಾಲೆಂಟಿಯರ್ಸ್ ಗೋವಂಡಿ ಕೊಳೆಗೆರಿಯಲ್ಲಿ ಕೆಲಸ ಮಾಡಿದ ರೀತಿಯನ್ನು ವಿವರಿಸಿದೆ. ಎಲ್ಲವನ್ನು ಕೇಳಿದ ಎಬಿಡಿ ನಿಮ್ಮ ಕಾರ್ಯ ಸ್ಪೂರ್ತಿದಾಯಕ ಮತ್ತು ಅದ್ಭುತ ಎಂದರು ಎಂದು ಪಾರಿತೋಶ್ ವಿವರಿಸಿದ್ದಾರೆ.

ಇನ್ನು ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ  ಶ್ರವಣದೋಷಿಯಾಗಿದ್ದರೂ ಜನರ ನೆರವಿಗಾಗಿ ನಿಂತ ಸಿಮ್ರನ್‌ಜೀತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಿಮ್ರನ್‌ಜೀತ್ ಎಂಬ ಜರ್ಸಿ ತೊಟ್ಟು ಪಂದ್ಯ ಆಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಹೆಸರನ್ನು ಸಿಮ್ರನ್‌ಜೀತ್ ಸಿಂಗ್ ಎಂದು ಬದಲಿಸಿದ್ದರು.

PC:Hindustan

ಸಿಮ್ರನ್‌ಜೀತ್ ಸಿಂಗ್ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ತಮ್ಮ ಇತರ ಶ್ರವಣದೋಷಿ ಸ್ನೇಹಿತರ ಜೊತೆಗೂಡಿ 98 ಸಾವಿರ ದೇಣಿಗೆ ಸಂಗ್ರಹಿಸಿ ಬಡವರಿಗೆ ನೆರವಾಗಿದ್ದರು ಎಂದು ಆರ್‌ಸಿಬಿ ಹೇಳಿದೆ.

ಆರ್‌ಸಿಬಿಯು ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 10 ರನ್‌ಗಳಿಂದ ಜಯಿಸಿದೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...