Homeಮುಖಪುಟಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

"ನೀವು ನನ್ನನ್ನು ಅಮಾನತ್ತು ಮಾಡಬಹುದು. ಆದರೆ ನಿಶಬ್ದಗೊಳಿಸಲು ಸಾಧ್ಯವಿಲ್ಲ" ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

8 ಸಂಸದರ ಮೇಲಿನ ಒಂದು ವಾರದವರೆಗಿನ ಸಂಸತ್ ಅಧಿವೇಶನದಿಂದ ಅಮಾನತ್ತು ಶಿಕ್ಷೆ ರದ್ದುಗೊಳಿಸುವುದು ಸೇರಿದಂತೆ ಪ್ರಮುಖ ಮೂರು ಬೇಡಿಕೆಗಳನ್ನು ಸಭಾಪತಿಗಳು ಈಡೇರಿಸುವವರೆಗೂ ರಾಜ್ಯಸಭಾ ಅಧಿವೇಶನದಿಂದ ದೂರು ಉಳಿಯುವುದಾಗಿ ಪ್ರತಿಪಕ್ಷಗಳು ನಿರ್ಧರಿಸಿವೆ. ರಾಜ್ಯಸಭಾ ವಿರೋಧ ಪಕ್ಷದ ಮುಖಂಡ ಗುಲಾಮ್ ನಬಿ ಅಜಾದ್‌ರವರ ಈ ತೀರ್ಮಾನಕ್ಕೆ ಆಪ್, ತೃಣಮೂಲ ಕಾಂಗ್ರೆಸ್, ಸಿಪಿಎಂ ಸೇರಿದಂತೆ ಹಲವು ಪ್ರತಿಪಕ್ಷಗಳು ದನಿಗೂಡಿಸಿವೆ.

ಮೂರು ಪ್ರಮುಖ ಬೇಡಿಕೆಗಳು

  1. 8 ಸಂಸದರ ಮೇಲಿನ ಒಂದು ವಾರಗಳ ಅಮಾನತ್ತು ಶಿಕ್ಷೆಯನ್ನು ರದ್ದುಗೊಳಿಸುವುದು.
  2. ರೈತರ ಬೆಳೆಗಳಿಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ನಿಗಧಿಗೊಳಿಸಬೇಕು. ಬೆಲೆ ನಿಗಧಿ ಮಾಡುವಾಗ ಎಂ.ಎಸ್ ಸ್ವಾಮಿನಾಥನ್‌ರವರ ಆಯೋಗದ ವರದಿಗಳನ್ನು ಜಾರಿಗೊಳಿಸಬೇಕು. ಈ ಬೆಲೆಗಿಂತ ಕಡಿಮೆ ದರಕ್ಕೆ ಯಾವುದೇ ಖಾಸಗಿ ಕಂಪನಿಗಳು ಕೊಳ್ಳಲು ಅವಕಾಶನೀಡಬಾರದು.
  3. ಸರ್ಕಾರದ ಫುಡ್‌ ಕಾರ್ಪೋರೇಷನ್ ಆಫ್ ಇಂಡಿಯಾ ನೇರವಾಗಿ ರೈತರ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಕೊಂಡುಕೊಳ್ಳಬೇಕು.

ಭಾನುವಾರ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಮಂಡಿಸುವಾಗ ಪ್ರತಿಪಕ್ಷಗಳು ಹಲವು ಸದಸ್ಯರು ಗದ್ದಲವೆಬ್ಬಿಸಿದ್ದರು. ಮಸೂದೆಯ ಕರಡುಪ್ರತಿಗಳನ್ನು ಹರಿಯಲು ಮುಂದಾಗಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ 8 ಜನ ಸಂಸದರನ್ನ ಒಂದು ವಾರದ ಮಟ್ಟಿಗೆ ಸದನದಿಂದ ಅಮಾನತ್ತು ಮಾಡಲಾಗಿದೆ. ಇದನ್ನು ವಿರೋಧಿಸಿ ಆ 8 ಜನ ಸಂಸದರು ಸೋಮವಾರ ರಾತ್ರಿಯಿಡೀ ಸಂಸದ್ ಭವನದ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಮಂಗಳವಾರ ಬೆಳಿಗ್ಗೆಯೇ ಧರಣಿ ನಿರತರ ಬಳಿಗೆ ಟೀ ವಿತರಿಸಲು ಸ್ವತಃ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ತೆರಳಿದ್ದಾರೆ. ಆದರೆ ಧರಣಿ ನಿರತ ಸಂಸದರು ಟೀ ತೆಗೆದುಕೊಳ್ಳಲು ನಿರಾಕರಿಸಿ ಹರಿವಂಶ್‌ರವರನ್ನು ರೈತವಿರೋಧಿ ಎಂದು ಕರೆದಿದ್ದಾರೆ. ಇದರಿಂದ ನೊಂದುಕೊಂಡ ಉಪಸಭಾಪತಿಗಳು ಒಂದು ದಿನದ ಕಾಲ ಉಪವಾಸ ವ್ರತ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಹರಿವಂಶ್ ಬೆಂಬಲಕ್ಕೆ ನಿಂತಿರುವ ಪ್ರಧಾನಿ ಮೋದಿಯವರು “ವಯಕ್ತಿಕವಾಗಿ ತಮ್ಮ ಮೇಲೆ ದಾಳಿ ನಡೆಸಿದವರೆಗೆ ಟೀ ಕೊಡಲು ಮುಂದಾಗಿರುವ ಅವರ ವಿಶಾಲ ಹೃದಯದ ನಿಲುವನ್ನು ಬೆಂಬಲಿಸುತ್ತೇನೆ’ ಎಂದಿದ್ದಾರೆ.

ಉಪಸಭಾಪತಿಗಳು ರೈತವಿರೋಧಿ ಮಸೂದೆಗಳನ್ನು ಜಾರಿಗೊಳಿಸಲು ಆಡಳಿತ ಸರ್ಕಾರಕ್ಕೆ ಪ್ರಜಾಪ್ರಭುತ್ವ ವಿರೋಧಿಯಾಗಿ ಸಹಾಯ ಮಾಡಿದ್ದಾರೆ. ಮೂರು ದಿನಗಳ ಕಾಲ ಆ ಮಸೂದೆಗಳ ಬಗೆಗೆ ಚರ್ಚೆ ನಡೆಸಬೇಕೆಂದು ಮನವಿಯನ್ನು ತಳ್ಳಿಹಾಕಿದ್ದಾರೆ. ಅಲ್ಲದೇ ನೇರ ಮತದಾನಕ್ಕೆ ಒತ್ತಾಯಿಸಿದ ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿ ಧ್ವನಿಮತದ ಮೂಲಕ ಮಸೂದೆ ಜಾರಿ ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

“ನೀವು ನನ್ನನ್ನು ಅಮಾನತ್ತು ಮಾಡಬಹುದು. ಆದರೆ ನಿಶಬ್ದಗೊಳಿಸಲು ಸಾಧ್ಯವಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಇಂದು ಪ್ರತಿಪಕ್ಷಗಳ ಗೈರುಹಾಜರಿಯ ನಡುವೆಯೂ ಸದನ ಆರಂಭವಾಗಿದ್ದು, ಮತ್ತೊಂದು ಕೃಷಿ ಮಸೂದೆಯ ಮಂಡನೆಗೆ ಸಿದ್ಧತೆ ನಡೆದಿದೆ ಎನ್ನಲಾಗಿದೆ.


ಇದನ್ನೂ ಓದಿ; ಅಹೋರಾತ್ರಿ ಪ್ರತಿಭಟನೆ ನಡೆಸಿದ ಅಮಾನತುಗೊಂಡ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...