Homeಮುಖಪುಟಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

"ನೀವು ನನ್ನನ್ನು ಅಮಾನತ್ತು ಮಾಡಬಹುದು. ಆದರೆ ನಿಶಬ್ದಗೊಳಿಸಲು ಸಾಧ್ಯವಿಲ್ಲ" ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

8 ಸಂಸದರ ಮೇಲಿನ ಒಂದು ವಾರದವರೆಗಿನ ಸಂಸತ್ ಅಧಿವೇಶನದಿಂದ ಅಮಾನತ್ತು ಶಿಕ್ಷೆ ರದ್ದುಗೊಳಿಸುವುದು ಸೇರಿದಂತೆ ಪ್ರಮುಖ ಮೂರು ಬೇಡಿಕೆಗಳನ್ನು ಸಭಾಪತಿಗಳು ಈಡೇರಿಸುವವರೆಗೂ ರಾಜ್ಯಸಭಾ ಅಧಿವೇಶನದಿಂದ ದೂರು ಉಳಿಯುವುದಾಗಿ ಪ್ರತಿಪಕ್ಷಗಳು ನಿರ್ಧರಿಸಿವೆ. ರಾಜ್ಯಸಭಾ ವಿರೋಧ ಪಕ್ಷದ ಮುಖಂಡ ಗುಲಾಮ್ ನಬಿ ಅಜಾದ್‌ರವರ ಈ ತೀರ್ಮಾನಕ್ಕೆ ಆಪ್, ತೃಣಮೂಲ ಕಾಂಗ್ರೆಸ್, ಸಿಪಿಎಂ ಸೇರಿದಂತೆ ಹಲವು ಪ್ರತಿಪಕ್ಷಗಳು ದನಿಗೂಡಿಸಿವೆ.

ಮೂರು ಪ್ರಮುಖ ಬೇಡಿಕೆಗಳು

  1. 8 ಸಂಸದರ ಮೇಲಿನ ಒಂದು ವಾರಗಳ ಅಮಾನತ್ತು ಶಿಕ್ಷೆಯನ್ನು ರದ್ದುಗೊಳಿಸುವುದು.
  2. ರೈತರ ಬೆಳೆಗಳಿಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ನಿಗಧಿಗೊಳಿಸಬೇಕು. ಬೆಲೆ ನಿಗಧಿ ಮಾಡುವಾಗ ಎಂ.ಎಸ್ ಸ್ವಾಮಿನಾಥನ್‌ರವರ ಆಯೋಗದ ವರದಿಗಳನ್ನು ಜಾರಿಗೊಳಿಸಬೇಕು. ಈ ಬೆಲೆಗಿಂತ ಕಡಿಮೆ ದರಕ್ಕೆ ಯಾವುದೇ ಖಾಸಗಿ ಕಂಪನಿಗಳು ಕೊಳ್ಳಲು ಅವಕಾಶನೀಡಬಾರದು.
  3. ಸರ್ಕಾರದ ಫುಡ್‌ ಕಾರ್ಪೋರೇಷನ್ ಆಫ್ ಇಂಡಿಯಾ ನೇರವಾಗಿ ರೈತರ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಕೊಂಡುಕೊಳ್ಳಬೇಕು.

ಭಾನುವಾರ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಮಂಡಿಸುವಾಗ ಪ್ರತಿಪಕ್ಷಗಳು ಹಲವು ಸದಸ್ಯರು ಗದ್ದಲವೆಬ್ಬಿಸಿದ್ದರು. ಮಸೂದೆಯ ಕರಡುಪ್ರತಿಗಳನ್ನು ಹರಿಯಲು ಮುಂದಾಗಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ 8 ಜನ ಸಂಸದರನ್ನ ಒಂದು ವಾರದ ಮಟ್ಟಿಗೆ ಸದನದಿಂದ ಅಮಾನತ್ತು ಮಾಡಲಾಗಿದೆ. ಇದನ್ನು ವಿರೋಧಿಸಿ ಆ 8 ಜನ ಸಂಸದರು ಸೋಮವಾರ ರಾತ್ರಿಯಿಡೀ ಸಂಸದ್ ಭವನದ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಮಂಗಳವಾರ ಬೆಳಿಗ್ಗೆಯೇ ಧರಣಿ ನಿರತರ ಬಳಿಗೆ ಟೀ ವಿತರಿಸಲು ಸ್ವತಃ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ತೆರಳಿದ್ದಾರೆ. ಆದರೆ ಧರಣಿ ನಿರತ ಸಂಸದರು ಟೀ ತೆಗೆದುಕೊಳ್ಳಲು ನಿರಾಕರಿಸಿ ಹರಿವಂಶ್‌ರವರನ್ನು ರೈತವಿರೋಧಿ ಎಂದು ಕರೆದಿದ್ದಾರೆ. ಇದರಿಂದ ನೊಂದುಕೊಂಡ ಉಪಸಭಾಪತಿಗಳು ಒಂದು ದಿನದ ಕಾಲ ಉಪವಾಸ ವ್ರತ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಹರಿವಂಶ್ ಬೆಂಬಲಕ್ಕೆ ನಿಂತಿರುವ ಪ್ರಧಾನಿ ಮೋದಿಯವರು “ವಯಕ್ತಿಕವಾಗಿ ತಮ್ಮ ಮೇಲೆ ದಾಳಿ ನಡೆಸಿದವರೆಗೆ ಟೀ ಕೊಡಲು ಮುಂದಾಗಿರುವ ಅವರ ವಿಶಾಲ ಹೃದಯದ ನಿಲುವನ್ನು ಬೆಂಬಲಿಸುತ್ತೇನೆ’ ಎಂದಿದ್ದಾರೆ.

ಉಪಸಭಾಪತಿಗಳು ರೈತವಿರೋಧಿ ಮಸೂದೆಗಳನ್ನು ಜಾರಿಗೊಳಿಸಲು ಆಡಳಿತ ಸರ್ಕಾರಕ್ಕೆ ಪ್ರಜಾಪ್ರಭುತ್ವ ವಿರೋಧಿಯಾಗಿ ಸಹಾಯ ಮಾಡಿದ್ದಾರೆ. ಮೂರು ದಿನಗಳ ಕಾಲ ಆ ಮಸೂದೆಗಳ ಬಗೆಗೆ ಚರ್ಚೆ ನಡೆಸಬೇಕೆಂದು ಮನವಿಯನ್ನು ತಳ್ಳಿಹಾಕಿದ್ದಾರೆ. ಅಲ್ಲದೇ ನೇರ ಮತದಾನಕ್ಕೆ ಒತ್ತಾಯಿಸಿದ ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿ ಧ್ವನಿಮತದ ಮೂಲಕ ಮಸೂದೆ ಜಾರಿ ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

“ನೀವು ನನ್ನನ್ನು ಅಮಾನತ್ತು ಮಾಡಬಹುದು. ಆದರೆ ನಿಶಬ್ದಗೊಳಿಸಲು ಸಾಧ್ಯವಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಇಂದು ಪ್ರತಿಪಕ್ಷಗಳ ಗೈರುಹಾಜರಿಯ ನಡುವೆಯೂ ಸದನ ಆರಂಭವಾಗಿದ್ದು, ಮತ್ತೊಂದು ಕೃಷಿ ಮಸೂದೆಯ ಮಂಡನೆಗೆ ಸಿದ್ಧತೆ ನಡೆದಿದೆ ಎನ್ನಲಾಗಿದೆ.


ಇದನ್ನೂ ಓದಿ; ಅಹೋರಾತ್ರಿ ಪ್ರತಿಭಟನೆ ನಡೆಸಿದ ಅಮಾನತುಗೊಂಡ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...