Homeಮುಖಪುಟಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

"ನೀವು ನನ್ನನ್ನು ಅಮಾನತ್ತು ಮಾಡಬಹುದು. ಆದರೆ ನಿಶಬ್ದಗೊಳಿಸಲು ಸಾಧ್ಯವಿಲ್ಲ" ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

8 ಸಂಸದರ ಮೇಲಿನ ಒಂದು ವಾರದವರೆಗಿನ ಸಂಸತ್ ಅಧಿವೇಶನದಿಂದ ಅಮಾನತ್ತು ಶಿಕ್ಷೆ ರದ್ದುಗೊಳಿಸುವುದು ಸೇರಿದಂತೆ ಪ್ರಮುಖ ಮೂರು ಬೇಡಿಕೆಗಳನ್ನು ಸಭಾಪತಿಗಳು ಈಡೇರಿಸುವವರೆಗೂ ರಾಜ್ಯಸಭಾ ಅಧಿವೇಶನದಿಂದ ದೂರು ಉಳಿಯುವುದಾಗಿ ಪ್ರತಿಪಕ್ಷಗಳು ನಿರ್ಧರಿಸಿವೆ. ರಾಜ್ಯಸಭಾ ವಿರೋಧ ಪಕ್ಷದ ಮುಖಂಡ ಗುಲಾಮ್ ನಬಿ ಅಜಾದ್‌ರವರ ಈ ತೀರ್ಮಾನಕ್ಕೆ ಆಪ್, ತೃಣಮೂಲ ಕಾಂಗ್ರೆಸ್, ಸಿಪಿಎಂ ಸೇರಿದಂತೆ ಹಲವು ಪ್ರತಿಪಕ್ಷಗಳು ದನಿಗೂಡಿಸಿವೆ.

ಮೂರು ಪ್ರಮುಖ ಬೇಡಿಕೆಗಳು

  1. 8 ಸಂಸದರ ಮೇಲಿನ ಒಂದು ವಾರಗಳ ಅಮಾನತ್ತು ಶಿಕ್ಷೆಯನ್ನು ರದ್ದುಗೊಳಿಸುವುದು.
  2. ರೈತರ ಬೆಳೆಗಳಿಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ನಿಗಧಿಗೊಳಿಸಬೇಕು. ಬೆಲೆ ನಿಗಧಿ ಮಾಡುವಾಗ ಎಂ.ಎಸ್ ಸ್ವಾಮಿನಾಥನ್‌ರವರ ಆಯೋಗದ ವರದಿಗಳನ್ನು ಜಾರಿಗೊಳಿಸಬೇಕು. ಈ ಬೆಲೆಗಿಂತ ಕಡಿಮೆ ದರಕ್ಕೆ ಯಾವುದೇ ಖಾಸಗಿ ಕಂಪನಿಗಳು ಕೊಳ್ಳಲು ಅವಕಾಶನೀಡಬಾರದು.
  3. ಸರ್ಕಾರದ ಫುಡ್‌ ಕಾರ್ಪೋರೇಷನ್ ಆಫ್ ಇಂಡಿಯಾ ನೇರವಾಗಿ ರೈತರ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಕೊಂಡುಕೊಳ್ಳಬೇಕು.

ಭಾನುವಾರ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಮಂಡಿಸುವಾಗ ಪ್ರತಿಪಕ್ಷಗಳು ಹಲವು ಸದಸ್ಯರು ಗದ್ದಲವೆಬ್ಬಿಸಿದ್ದರು. ಮಸೂದೆಯ ಕರಡುಪ್ರತಿಗಳನ್ನು ಹರಿಯಲು ಮುಂದಾಗಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ 8 ಜನ ಸಂಸದರನ್ನ ಒಂದು ವಾರದ ಮಟ್ಟಿಗೆ ಸದನದಿಂದ ಅಮಾನತ್ತು ಮಾಡಲಾಗಿದೆ. ಇದನ್ನು ವಿರೋಧಿಸಿ ಆ 8 ಜನ ಸಂಸದರು ಸೋಮವಾರ ರಾತ್ರಿಯಿಡೀ ಸಂಸದ್ ಭವನದ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಮಂಗಳವಾರ ಬೆಳಿಗ್ಗೆಯೇ ಧರಣಿ ನಿರತರ ಬಳಿಗೆ ಟೀ ವಿತರಿಸಲು ಸ್ವತಃ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ತೆರಳಿದ್ದಾರೆ. ಆದರೆ ಧರಣಿ ನಿರತ ಸಂಸದರು ಟೀ ತೆಗೆದುಕೊಳ್ಳಲು ನಿರಾಕರಿಸಿ ಹರಿವಂಶ್‌ರವರನ್ನು ರೈತವಿರೋಧಿ ಎಂದು ಕರೆದಿದ್ದಾರೆ. ಇದರಿಂದ ನೊಂದುಕೊಂಡ ಉಪಸಭಾಪತಿಗಳು ಒಂದು ದಿನದ ಕಾಲ ಉಪವಾಸ ವ್ರತ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಹರಿವಂಶ್ ಬೆಂಬಲಕ್ಕೆ ನಿಂತಿರುವ ಪ್ರಧಾನಿ ಮೋದಿಯವರು “ವಯಕ್ತಿಕವಾಗಿ ತಮ್ಮ ಮೇಲೆ ದಾಳಿ ನಡೆಸಿದವರೆಗೆ ಟೀ ಕೊಡಲು ಮುಂದಾಗಿರುವ ಅವರ ವಿಶಾಲ ಹೃದಯದ ನಿಲುವನ್ನು ಬೆಂಬಲಿಸುತ್ತೇನೆ’ ಎಂದಿದ್ದಾರೆ.

ಉಪಸಭಾಪತಿಗಳು ರೈತವಿರೋಧಿ ಮಸೂದೆಗಳನ್ನು ಜಾರಿಗೊಳಿಸಲು ಆಡಳಿತ ಸರ್ಕಾರಕ್ಕೆ ಪ್ರಜಾಪ್ರಭುತ್ವ ವಿರೋಧಿಯಾಗಿ ಸಹಾಯ ಮಾಡಿದ್ದಾರೆ. ಮೂರು ದಿನಗಳ ಕಾಲ ಆ ಮಸೂದೆಗಳ ಬಗೆಗೆ ಚರ್ಚೆ ನಡೆಸಬೇಕೆಂದು ಮನವಿಯನ್ನು ತಳ್ಳಿಹಾಕಿದ್ದಾರೆ. ಅಲ್ಲದೇ ನೇರ ಮತದಾನಕ್ಕೆ ಒತ್ತಾಯಿಸಿದ ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿ ಧ್ವನಿಮತದ ಮೂಲಕ ಮಸೂದೆ ಜಾರಿ ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

“ನೀವು ನನ್ನನ್ನು ಅಮಾನತ್ತು ಮಾಡಬಹುದು. ಆದರೆ ನಿಶಬ್ದಗೊಳಿಸಲು ಸಾಧ್ಯವಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಇಂದು ಪ್ರತಿಪಕ್ಷಗಳ ಗೈರುಹಾಜರಿಯ ನಡುವೆಯೂ ಸದನ ಆರಂಭವಾಗಿದ್ದು, ಮತ್ತೊಂದು ಕೃಷಿ ಮಸೂದೆಯ ಮಂಡನೆಗೆ ಸಿದ್ಧತೆ ನಡೆದಿದೆ ಎನ್ನಲಾಗಿದೆ.


ಇದನ್ನೂ ಓದಿ; ಅಹೋರಾತ್ರಿ ಪ್ರತಿಭಟನೆ ನಡೆಸಿದ ಅಮಾನತುಗೊಂಡ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...