Homeಕರ್ನಾಟಕಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ದೇವರಾಜ ಅರಸುರವರು ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಯ ಕಣ್ಣು, ಮಿದುಳು, ಬಾಯಿ ಎಲ್ಲವನ್ನೂ ಕಿತ್ತುಕೊಂಡಾಗಿದೆ. ಈಗ ಜಠರಕ್ಕೆ ಕೈ ಹಾಕಿದೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೇ, ನಮಗೆ ಉಳಿಗಾಲವಿಲ್ಲ” ಎಂದು ಆರ್ ಮಾನಸಯ್ಯ ತಿಳಿಸಿದರು.

- Advertisement -
- Advertisement -

ಭೂಮಿಗಾಗಿನ ಈ ಹೋರಾಟ ಇಂದು ನಿನ್ನೆಯದಲ್ಲ. ಇದಕ್ಕೆ 100 ವರ್ಷಗಳ ಹೋರಾಟದ ಪರಂಪರೆಯಿದೆ. 1932 ರಲ್ಲಿ ಲಾಹೋರ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಭೂಸುಧಾರಣೆಯ ನಿರ್ಧಾರವನ್ನು ಕೈಗೊಂಡು, ಉಳುವವನೇ ಭೂ ಒಡೆಯ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಇಡೀ ಭೂಮಿಯನ್ನು ರಾಷ್ಟ್ರೀಕರಣಗೊಳಿಸಿ, ಬಡಜನರಿಗೆ ಸಮಾನವಾಗಿ ಹಂಚಬೇಕು ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅದಕ್ಕಾಗಿ ಇಂದಿಗೂ ಹೋರಾಟ ಮುಂದುವರೆದಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೂರ್ ಶ್ರೀಧರ್ ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಐಕ್ಯ ಹೋರಾಟದ ಎರಡನೇ ದಿನವಾದ ಇಂದು ಪರ್ಯಾಯ ಜನತಾ ಅಧಿವೇಶನದಲ್ಲಿ ಅವರು, ‘ರಾಜ್ಯದ ಬಡಜನರ ಭೂಮಿ ಮತ್ತು ವಸತಿ ಸಮಸ್ಯೆ’ ಎಂಬ ವಿಷಯದ ಕುರಿತು ಮಾತನಾಡಿದರು.

“ಇಂದು ಅಥವಾ ನಾಳೆಯೊಳಗೆ ಭೂಸುಧಾರಣಾ ತಿದ್ದುಪಡಿ ಕಾಯ್ದೆಯಂತಹ ಬಡಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲು ಸರ್ಕಾರ ಹೊರಟಿದೆ. ಆದರೆ ವಿರೋಧ ಪಕ್ಷಗಳು ಇದನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿವೆ. ಜೊತೆಗೆ ಈ ಕಾಯ್ದೆಗಳನ್ನು ಜಾರಿಗೆ ತರಕೂಡದು ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಾವು ಪರ್ಯಾಯ ಅಧಿವೇಶನ ನಡೆಸುತ್ತಿದ್ದೇವೆ. ಹಾಗಾಗಿ ಇದು ಅತ್ಯಂತ ಮಹತ್ವವುಳ್ಳದ್ದಾಗಿದೆ” ಎಂದು ನೂರ್ ಶ್ರೀಧರ್ ಹೇಳಿದ್ದಾರೆ.

ಸಂವಿಧಾನದಲ್ಲಿ ದೇಶದ ಬಡವರಿಗೆ ಭೂಮಿ ನೀಡಬೇಕು ಎಂದು ಹೇಳಲಾಗಿದೆ. ಪ್ರತಿ ಕುಟುಂಬಕ್ಕೆ ಶಕ್ತ್ಯಾನುಸಾರ ಭೂಮಿ ಕೊಡಬೇಕು ಎಂಬ ವಿಷಯವನ್ನು ಸಂವಿಧಾನದಲ್ಲಿ ಸೇರಿಸಲಾಗಿದೆ. ಆದರೆ ಆಳುವ ಸರ್ಕಾರಗಳ ಹುನ್ನಾರದಿಂದ ಇದು ಇಂದಿಗೂ ನೆರೆವೇರಲ್ಲ. ಆದರೂ  ಭೂಮಿ ಬಂಡವಾಳಶಾಹಿಗಳ ಕೈಗೆ ಹೋಗಬಾರದು ಎಂದು ನಿರ್ಣಯಿಸಲಾಗಿತ್ತು. ಇದರ ನಂತರ ದೇಶದಾದ್ಯಂತ ಸಾಕಷ್ಟು ಹೋರಾಟ ನಡೆದು, ದೇವರಾಜ ಅರಸು ಕಾಲದಲ್ಲಿ ಭೂ ಸುಧಾರಣೆಗಳ ಪರ್ವ ಆರಂಭವಾಯಿತು ಎಂದರು.

ಅರಸುರವರ ಕಾಲದಲ್ಲಿ ಎರಡು ಪ್ರಮುಖ ವಿಷಯಗಳನ್ನು ಜಾರಿಗೆ ತರಬೇಕು ಎಂದು ಯೋಜನೆ ರೂಪಿಸಲಾಯಿತು. ಮೊದಲನೆಯದು, ಗೇಣಿಪದ್ದತಿಯನ್ನ ರದ್ದು ಮಾಡಿ, ಉಳುವವನಿಗೆ ಭೂಮಿ ನೀಡಬೇಕು ಎನ್ನುವುದು. ಎರಡನೆಯದು ಭೂ ಒಡೆತನಕ್ಕೆ ಮಿತಿಯನ್ನು ತಂದು, ಹೆಚ್ಚುವರಿ ಭೂಮಿ ವಶಪಡಿಸಿಕೊಂಡು ಇಲ್ಲದವರಿಗೆ ಕೊಡಬೇಕು ಎಂಬುದು. ಆದರೆ ಮೊದಲನೆಯದು ಸ್ವಲ್ಪಮಟ್ಟಿಗೆ ಯಶಸ್ವಿಯಾಯಿತು. ಹಾಗಾಗಿ ಇತರೆ ಹಿಂದುಳಿದವರಿಗೆ ಸ್ವಲ್ಪ ಭೂಮಿ ಸಿಕ್ಕಿತು. ಎರಡನೆಯದು ಯಶಸ್ವಿಯಾಗಲಿಲ್ಲ. ಹಾಗಾಗಿ ದಲಿತರಿಗೆ, ಆದಿವಾಸಿಗಳಿಗೆ ಭೂಮಿ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಭೂ ಸುಧಾರಣಾ ಚಳುವಳಿಯಲ್ಲಿದ್ದ ಕಾಗೋಡು ತಿಮ್ಮಪ್ಪರವರಿಂದಲೂ ಜನರಿಗೆ ಭೂಮಿ ಕೊಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಈ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಆರಂಭವಾಯಿತು. ಇದಕ್ಕೆ ಎಚ್.ಎಸ್ ದೊರೆಸ್ವಾಮಿಯವರು ನೇತೃತ್ವ ವಹಿಸಿದರು. 2016ರಲ್ಲಿ ಅಂದು ಈ ಹೋರಾಟ ನಡೆದಿದ್ದು, ಬಿಜೆಪಿ ಪಕ್ಷದ ವಿರುದ್ದವಲ್ಲ, ಬದಲಿಗೆ ಕಾಂಗ್ರೆಸ್ ಸರ್ಕಾರದ ವಿರುದ್ದ. ನಮ್ಮ ಹೋರಾಟ ಯಾವುದೇ ಪಕ್ಷದ ವಿರುದ್ಧವಲ್ಲ. ಜನವಿರೋಧಿ ನೀತಿಯ ವಿರುದ್ದ. ಆದರೂ ಇಂದು ನಾವು ಹೋರಾಟ ಮಾಡುತ್ತಿರುವುದು ಕಾಂಗ್ರೆಸ್ ಪರ ಎಂದು ಹಲವರು ಬಿಂಬಿಸುತ್ತಿದ್ದಾರೆ. ನಾವು ಯಾವಾಗಲೂ ಆಳುವವರ ವಿರುದ್ಧವೇ ಹೊರತು ಪರವಲ್ಲ ಎಂಬುದಕ್ಕೆ ನಮ್ಮ ಹಿಂದಿನ ಮತ್ತು ಇಂದಿನ ಹೋರಾಟಗಳೇ ಸಾಕ್ಷಿ ಎಂದರು.

ಇಂದು ನಾವು 4 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜನತಾ ಅಧಿವೇಶನದ ಮೂಲಕ ಒತ್ತಾಯಿಸುತ್ತೇವೆ. ಬಡವರಿಗೆ ಭೂಮಿ ಮತ್ತು ಪಟ್ಟಾ ನೀಡಬೇಕು, ಭೂಮಿಯ ಲೆಕ್ಕ ಮಾಡಿ, ಹೆಚ್ಚುವರಿ ಭೂಮಿಯನ್ನು ವಶಪಡಿಸಿಕೊಂಡು ಬಡವರಿಗೆ ಹಂಚಬೇಕು. ಭೂಮಿಗಾಗಿ ಹೊಸ ಅರ್ಜಿ ಹಾಕಲು ಅವಕಾಶ ಮಾಡಿಕೊಡಬೇಕು ಮತ್ತು ಭೂಮಿ ವಸತಿ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಸ್ಸು ಪಡೆಯಬೇಕು” ಎಂದು ಒತ್ತಾಯಿಸಿದರು.

ಜನತಾ ಅಧಿವೇಶನದಲ್ಲಿ ಹಿರಿಯ ಕಾರ್ಮಿಕ ಮುಖಂಡರಾದ ಆರ್‌.ಮಾನಸಯ್ಯನವರು “ಕಂದಾಯ ಭೂಮಿ ಮತ್ತು ಬಗರ್ ಹುಕುಂ ಸಮಸ್ಯೆ” ಎಂಬ ವಿಷಯದ ಕುರಿತು ಮಾತನಾಡಿ “ಸರ್ಕಾರ ಈಗ ಭೂಮಿ ಖಾಸಗೀಕರಣ ಮಾಡಲು ಹೊರಟಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕರ್ನಾಟಕದ ಸಮಸ್ತ ಭೂಮಿಯನ್ನು ಉಳಿಸದ ಹೊರತು, ನಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರೀ ಉದ್ಯಮಗಳ ಖಾಸಗೀಕರಣ ಆಯ್ತು, ವಿಮಾನ ನಿಲ್ದಾಣದ ಖಾಸಗೀಕರಣ ಆಯ್ತು, ರೈಲು ಖಾಗೀಕರಣ ಆಯ್ತು. ಈಗ ಸರ್ಕಾರ ಭೂಮಿಯ ಖಾಸಗೀಕರಣ ಮಾಡಲು ಹೊರಟಿದೆ. ಎಲ್ಲರಿಗೂ ಸೇರಿದ ಭೂಮಿಯನ್ನು ಕೆಲವೇ ಜನರ ಕೈಗೆ ಕೊಡಲು ಕಾನೂನು ಮಾಡುತ್ತಿರುವ ಸರ್ಕಾರದ ಮತ್ತು ಆಳುವ ವರ್ಗದ ನೀಚಾತಿ ನೀಚ ಕೆಲಸ ಇದು” ಎಂದು ಕಿಡಿಕಾರಿದರು.

ನಮಗೆ ಭೂಮಿಯೆಂದರೆ ನಮಗೆ ಕೇವಲ ನಿವೇಶನವಲ್ಲ, ಹೊಲವಲ್ಲ, ಮನೆಯಲ್ಲ, ಅದು ನಮ್ಮ ಬದುಕು. ಹಾಗಾಗಿ ಈ ಹೋರಾಟ ರೈತಾಪಿ ವರ್ಗಕ್ಕೆ ಸ್ವಾತಂತ್ರ ಚಳುವಳಿ ಇದ್ದಂತೆ. ರೈತರಿಗೆ ಸ್ವಾತಂತ್ರ ಚಳುವಳಿಯೆಂದರೆ ಭೂ ಚಳುವಳಿಯೇ ಆಗಿದೆ. ಸ್ವಾತಂತ್ರ ಎಂದರೆ ಏನು, ರೈತರಿಗೆ ಭೂಮಿ ಸಿಗುವುದೇ ಅಲ್ಲವೇ” ಎಂದು ಅವರು ಹೇಳಿದರು.

ದೇವರಾಜ ಅರಸುರವರು ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಯ ಕಣ್ಣು, ಮಿದುಳು, ಬಾಯಿ ಎಲ್ಲವನ್ನೂ ಕಿತ್ತುಕೊಂಡಾಗಿದೆ. ಈಗ ಜಠರಕ್ಕೆ ಕೈ ಹಾಕಿದೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೇ, ನಮಗೆ ಉಳಿಗಾಲವಿಲ್ಲ” ಎಂದು ಆರ್ ಮಾನಸಯ್ಯ ತಿಳಿಸಿದರು.

ಜನತಾ ಅಧಿವೇಶನದ ಸ್ಥಳಕ್ಕೆ ಮಾಜಿ ಸಚಿವರುಗಳಾದ ಹೆಚ್.ಡಿ.ರೇವಣ್ಣ, ಡಿ ಆರ್ ಪಾಟೀಲ್ ಮತ್ತು ಬಿ ಆರ್ ಪಾಟೀಲ್ ಭೇಟಿ ನೀಡಿ
ರೈತ ವಿರೋಧಿ ಸುಗ್ರೀವಾಜ್ಞೆಗಳ‌ ವಿರುದ್ದ ಸದನದಲ್ಲಿ‌ ಮಾತನಾಡುವುದಾಗಿ ಹಾಗೂ ಈ ಹೋರಾಟದಲ್ಲಿ ಜೊತೆಗೂಡುವುದಾಗಿ ಭರವಸೆ ನೀಡಿದರು.


ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...