Homeಕರ್ನಾಟಕಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ದೇವರಾಜ ಅರಸುರವರು ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಯ ಕಣ್ಣು, ಮಿದುಳು, ಬಾಯಿ ಎಲ್ಲವನ್ನೂ ಕಿತ್ತುಕೊಂಡಾಗಿದೆ. ಈಗ ಜಠರಕ್ಕೆ ಕೈ ಹಾಕಿದೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೇ, ನಮಗೆ ಉಳಿಗಾಲವಿಲ್ಲ” ಎಂದು ಆರ್ ಮಾನಸಯ್ಯ ತಿಳಿಸಿದರು.

- Advertisement -
- Advertisement -

ಭೂಮಿಗಾಗಿನ ಈ ಹೋರಾಟ ಇಂದು ನಿನ್ನೆಯದಲ್ಲ. ಇದಕ್ಕೆ 100 ವರ್ಷಗಳ ಹೋರಾಟದ ಪರಂಪರೆಯಿದೆ. 1932 ರಲ್ಲಿ ಲಾಹೋರ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಭೂಸುಧಾರಣೆಯ ನಿರ್ಧಾರವನ್ನು ಕೈಗೊಂಡು, ಉಳುವವನೇ ಭೂ ಒಡೆಯ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಇಡೀ ಭೂಮಿಯನ್ನು ರಾಷ್ಟ್ರೀಕರಣಗೊಳಿಸಿ, ಬಡಜನರಿಗೆ ಸಮಾನವಾಗಿ ಹಂಚಬೇಕು ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅದಕ್ಕಾಗಿ ಇಂದಿಗೂ ಹೋರಾಟ ಮುಂದುವರೆದಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೂರ್ ಶ್ರೀಧರ್ ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಐಕ್ಯ ಹೋರಾಟದ ಎರಡನೇ ದಿನವಾದ ಇಂದು ಪರ್ಯಾಯ ಜನತಾ ಅಧಿವೇಶನದಲ್ಲಿ ಅವರು, ‘ರಾಜ್ಯದ ಬಡಜನರ ಭೂಮಿ ಮತ್ತು ವಸತಿ ಸಮಸ್ಯೆ’ ಎಂಬ ವಿಷಯದ ಕುರಿತು ಮಾತನಾಡಿದರು.

“ಇಂದು ಅಥವಾ ನಾಳೆಯೊಳಗೆ ಭೂಸುಧಾರಣಾ ತಿದ್ದುಪಡಿ ಕಾಯ್ದೆಯಂತಹ ಬಡಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲು ಸರ್ಕಾರ ಹೊರಟಿದೆ. ಆದರೆ ವಿರೋಧ ಪಕ್ಷಗಳು ಇದನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿವೆ. ಜೊತೆಗೆ ಈ ಕಾಯ್ದೆಗಳನ್ನು ಜಾರಿಗೆ ತರಕೂಡದು ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಾವು ಪರ್ಯಾಯ ಅಧಿವೇಶನ ನಡೆಸುತ್ತಿದ್ದೇವೆ. ಹಾಗಾಗಿ ಇದು ಅತ್ಯಂತ ಮಹತ್ವವುಳ್ಳದ್ದಾಗಿದೆ” ಎಂದು ನೂರ್ ಶ್ರೀಧರ್ ಹೇಳಿದ್ದಾರೆ.

ಸಂವಿಧಾನದಲ್ಲಿ ದೇಶದ ಬಡವರಿಗೆ ಭೂಮಿ ನೀಡಬೇಕು ಎಂದು ಹೇಳಲಾಗಿದೆ. ಪ್ರತಿ ಕುಟುಂಬಕ್ಕೆ ಶಕ್ತ್ಯಾನುಸಾರ ಭೂಮಿ ಕೊಡಬೇಕು ಎಂಬ ವಿಷಯವನ್ನು ಸಂವಿಧಾನದಲ್ಲಿ ಸೇರಿಸಲಾಗಿದೆ. ಆದರೆ ಆಳುವ ಸರ್ಕಾರಗಳ ಹುನ್ನಾರದಿಂದ ಇದು ಇಂದಿಗೂ ನೆರೆವೇರಲ್ಲ. ಆದರೂ  ಭೂಮಿ ಬಂಡವಾಳಶಾಹಿಗಳ ಕೈಗೆ ಹೋಗಬಾರದು ಎಂದು ನಿರ್ಣಯಿಸಲಾಗಿತ್ತು. ಇದರ ನಂತರ ದೇಶದಾದ್ಯಂತ ಸಾಕಷ್ಟು ಹೋರಾಟ ನಡೆದು, ದೇವರಾಜ ಅರಸು ಕಾಲದಲ್ಲಿ ಭೂ ಸುಧಾರಣೆಗಳ ಪರ್ವ ಆರಂಭವಾಯಿತು ಎಂದರು.

ಅರಸುರವರ ಕಾಲದಲ್ಲಿ ಎರಡು ಪ್ರಮುಖ ವಿಷಯಗಳನ್ನು ಜಾರಿಗೆ ತರಬೇಕು ಎಂದು ಯೋಜನೆ ರೂಪಿಸಲಾಯಿತು. ಮೊದಲನೆಯದು, ಗೇಣಿಪದ್ದತಿಯನ್ನ ರದ್ದು ಮಾಡಿ, ಉಳುವವನಿಗೆ ಭೂಮಿ ನೀಡಬೇಕು ಎನ್ನುವುದು. ಎರಡನೆಯದು ಭೂ ಒಡೆತನಕ್ಕೆ ಮಿತಿಯನ್ನು ತಂದು, ಹೆಚ್ಚುವರಿ ಭೂಮಿ ವಶಪಡಿಸಿಕೊಂಡು ಇಲ್ಲದವರಿಗೆ ಕೊಡಬೇಕು ಎಂಬುದು. ಆದರೆ ಮೊದಲನೆಯದು ಸ್ವಲ್ಪಮಟ್ಟಿಗೆ ಯಶಸ್ವಿಯಾಯಿತು. ಹಾಗಾಗಿ ಇತರೆ ಹಿಂದುಳಿದವರಿಗೆ ಸ್ವಲ್ಪ ಭೂಮಿ ಸಿಕ್ಕಿತು. ಎರಡನೆಯದು ಯಶಸ್ವಿಯಾಗಲಿಲ್ಲ. ಹಾಗಾಗಿ ದಲಿತರಿಗೆ, ಆದಿವಾಸಿಗಳಿಗೆ ಭೂಮಿ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಭೂ ಸುಧಾರಣಾ ಚಳುವಳಿಯಲ್ಲಿದ್ದ ಕಾಗೋಡು ತಿಮ್ಮಪ್ಪರವರಿಂದಲೂ ಜನರಿಗೆ ಭೂಮಿ ಕೊಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಈ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಆರಂಭವಾಯಿತು. ಇದಕ್ಕೆ ಎಚ್.ಎಸ್ ದೊರೆಸ್ವಾಮಿಯವರು ನೇತೃತ್ವ ವಹಿಸಿದರು. 2016ರಲ್ಲಿ ಅಂದು ಈ ಹೋರಾಟ ನಡೆದಿದ್ದು, ಬಿಜೆಪಿ ಪಕ್ಷದ ವಿರುದ್ದವಲ್ಲ, ಬದಲಿಗೆ ಕಾಂಗ್ರೆಸ್ ಸರ್ಕಾರದ ವಿರುದ್ದ. ನಮ್ಮ ಹೋರಾಟ ಯಾವುದೇ ಪಕ್ಷದ ವಿರುದ್ಧವಲ್ಲ. ಜನವಿರೋಧಿ ನೀತಿಯ ವಿರುದ್ದ. ಆದರೂ ಇಂದು ನಾವು ಹೋರಾಟ ಮಾಡುತ್ತಿರುವುದು ಕಾಂಗ್ರೆಸ್ ಪರ ಎಂದು ಹಲವರು ಬಿಂಬಿಸುತ್ತಿದ್ದಾರೆ. ನಾವು ಯಾವಾಗಲೂ ಆಳುವವರ ವಿರುದ್ಧವೇ ಹೊರತು ಪರವಲ್ಲ ಎಂಬುದಕ್ಕೆ ನಮ್ಮ ಹಿಂದಿನ ಮತ್ತು ಇಂದಿನ ಹೋರಾಟಗಳೇ ಸಾಕ್ಷಿ ಎಂದರು.

ಇಂದು ನಾವು 4 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜನತಾ ಅಧಿವೇಶನದ ಮೂಲಕ ಒತ್ತಾಯಿಸುತ್ತೇವೆ. ಬಡವರಿಗೆ ಭೂಮಿ ಮತ್ತು ಪಟ್ಟಾ ನೀಡಬೇಕು, ಭೂಮಿಯ ಲೆಕ್ಕ ಮಾಡಿ, ಹೆಚ್ಚುವರಿ ಭೂಮಿಯನ್ನು ವಶಪಡಿಸಿಕೊಂಡು ಬಡವರಿಗೆ ಹಂಚಬೇಕು. ಭೂಮಿಗಾಗಿ ಹೊಸ ಅರ್ಜಿ ಹಾಕಲು ಅವಕಾಶ ಮಾಡಿಕೊಡಬೇಕು ಮತ್ತು ಭೂಮಿ ವಸತಿ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಸ್ಸು ಪಡೆಯಬೇಕು” ಎಂದು ಒತ್ತಾಯಿಸಿದರು.

ಜನತಾ ಅಧಿವೇಶನದಲ್ಲಿ ಹಿರಿಯ ಕಾರ್ಮಿಕ ಮುಖಂಡರಾದ ಆರ್‌.ಮಾನಸಯ್ಯನವರು “ಕಂದಾಯ ಭೂಮಿ ಮತ್ತು ಬಗರ್ ಹುಕುಂ ಸಮಸ್ಯೆ” ಎಂಬ ವಿಷಯದ ಕುರಿತು ಮಾತನಾಡಿ “ಸರ್ಕಾರ ಈಗ ಭೂಮಿ ಖಾಸಗೀಕರಣ ಮಾಡಲು ಹೊರಟಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕರ್ನಾಟಕದ ಸಮಸ್ತ ಭೂಮಿಯನ್ನು ಉಳಿಸದ ಹೊರತು, ನಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರೀ ಉದ್ಯಮಗಳ ಖಾಸಗೀಕರಣ ಆಯ್ತು, ವಿಮಾನ ನಿಲ್ದಾಣದ ಖಾಸಗೀಕರಣ ಆಯ್ತು, ರೈಲು ಖಾಗೀಕರಣ ಆಯ್ತು. ಈಗ ಸರ್ಕಾರ ಭೂಮಿಯ ಖಾಸಗೀಕರಣ ಮಾಡಲು ಹೊರಟಿದೆ. ಎಲ್ಲರಿಗೂ ಸೇರಿದ ಭೂಮಿಯನ್ನು ಕೆಲವೇ ಜನರ ಕೈಗೆ ಕೊಡಲು ಕಾನೂನು ಮಾಡುತ್ತಿರುವ ಸರ್ಕಾರದ ಮತ್ತು ಆಳುವ ವರ್ಗದ ನೀಚಾತಿ ನೀಚ ಕೆಲಸ ಇದು” ಎಂದು ಕಿಡಿಕಾರಿದರು.

ನಮಗೆ ಭೂಮಿಯೆಂದರೆ ನಮಗೆ ಕೇವಲ ನಿವೇಶನವಲ್ಲ, ಹೊಲವಲ್ಲ, ಮನೆಯಲ್ಲ, ಅದು ನಮ್ಮ ಬದುಕು. ಹಾಗಾಗಿ ಈ ಹೋರಾಟ ರೈತಾಪಿ ವರ್ಗಕ್ಕೆ ಸ್ವಾತಂತ್ರ ಚಳುವಳಿ ಇದ್ದಂತೆ. ರೈತರಿಗೆ ಸ್ವಾತಂತ್ರ ಚಳುವಳಿಯೆಂದರೆ ಭೂ ಚಳುವಳಿಯೇ ಆಗಿದೆ. ಸ್ವಾತಂತ್ರ ಎಂದರೆ ಏನು, ರೈತರಿಗೆ ಭೂಮಿ ಸಿಗುವುದೇ ಅಲ್ಲವೇ” ಎಂದು ಅವರು ಹೇಳಿದರು.

ದೇವರಾಜ ಅರಸುರವರು ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಯ ಕಣ್ಣು, ಮಿದುಳು, ಬಾಯಿ ಎಲ್ಲವನ್ನೂ ಕಿತ್ತುಕೊಂಡಾಗಿದೆ. ಈಗ ಜಠರಕ್ಕೆ ಕೈ ಹಾಕಿದೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೇ, ನಮಗೆ ಉಳಿಗಾಲವಿಲ್ಲ” ಎಂದು ಆರ್ ಮಾನಸಯ್ಯ ತಿಳಿಸಿದರು.

ಜನತಾ ಅಧಿವೇಶನದ ಸ್ಥಳಕ್ಕೆ ಮಾಜಿ ಸಚಿವರುಗಳಾದ ಹೆಚ್.ಡಿ.ರೇವಣ್ಣ, ಡಿ ಆರ್ ಪಾಟೀಲ್ ಮತ್ತು ಬಿ ಆರ್ ಪಾಟೀಲ್ ಭೇಟಿ ನೀಡಿ
ರೈತ ವಿರೋಧಿ ಸುಗ್ರೀವಾಜ್ಞೆಗಳ‌ ವಿರುದ್ದ ಸದನದಲ್ಲಿ‌ ಮಾತನಾಡುವುದಾಗಿ ಹಾಗೂ ಈ ಹೋರಾಟದಲ್ಲಿ ಜೊತೆಗೂಡುವುದಾಗಿ ಭರವಸೆ ನೀಡಿದರು.


ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...