Homeಕರ್ನಾಟಕಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ರಾಜ್ಯದ ವಿಧಾನಪರಿಷತ್ತಿನಲ್ಲಿ ಭೂಮಿ ಕಿತ್ತುಕೊಳ್ಳುವ ಈ ಮಸೂದೆ ಅಂಗೀಕಾರವಾಗಲು ಬಿಡಬಾರದು. ಮಂಡನೆ ಮಾಡಲೂ ಬಿಡಬಾರದು. ಅಲ್ಲಿ ಬಿಜೆಪಿಗೆ ಬಹುಮತವಿಲ್ಲ. ಹಾಗಾಗಿ ಜೆಡಿಎಸ್ ಸದಸ್ಯರು ಮತ್ತು ನಮ್ಮ ಪಕ್ಷದ ಸದಸ್ಯರೂ ಇದನ್ನು ವಿರೋಧಿಸಬೇಕು.

- Advertisement -
- Advertisement -

ಉಳುವವನೇ ಭೂಮಿಯ ಒಡೆಯ ಎಂದು ದೇವರಾಜ ಅರಸು ಕಾಲದಲ್ಲಿ ಕಾನೂನು ತರಲಾಯಿತು. ಆದರೆ ಈಗ ದುಡ್ಡಿದ್ದವನೇ ಭೂಮಿಯ ಒಡೆಯ ಎಂಬ ಕಾನೂನು ತರಲು ಹೊರಟಿದ್ದಾರೆ. ಇದನ್ನು ರೈತರ ಮಕ್ಕಳಾದ ನಾವು ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ರೈತ-ದಲಿತ-ಕಾರ್ಮಿಕ ಐಕ್ಯ ಹೋರಾಟದ ಜನತಾ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರೈತರು ಮಾತ್ರ ಭೂಮಿ ಕೊಳ್ಳಬಹುದು ಎಂಬ ಕಾನೂನು 1974ರಿಂದ ಜಾರಿಗೆ ಬಂದಿತು. ಭೂಮಿ ಕೊಳ್ಳುವ ಮೀತಿಯನ್ನೂ ನಿರ್ಧರಿಸಲಾಗಿತ್ತು. ಆದರೆ ಈಗಿನ ಸರ್ಕಾರ ಈ ಎರಡನ್ನೂ ತೆಗೆದುಹಾಕಿ, ಜಮೀನ್ದಾರಿ ಪದ್ಧತಿ ಮತ್ತೆ ಮುನ್ನೆಲೆಗೆ ಬರುವಂತೆ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಕೃಷಿ ವಲಯದಲ್ಲಿ ಆದಾಯ ಹೆಚ್ಚಾಗಿತ್ತು. ಕೈಗಾರಿಕಾ ವಲಯ ಮತ್ತು ಸೇವಾ ವಲಯಗಳ ಪಾಲು ಕಡಿಮೆಯಿತ್ತು. ಆದರೆ ಬರುಬರುತ್ತಾ ಕೃಷಿ ಆದಾಯ ಕಡಿಮೆಯಾಗಿ, ಕೈಗಾರಿಕಾ ಮತ್ತು ಸೇವಾ ವಲಯದ ಆದಾಯ ಹೆಚ್ಚಾಯಿತು. ಆದರೆ ಇಂದು ಎಲ್ಲದರ ಆದಾಯವೂ ಕಡಿಮೆಯಾಗಿದೆ ಇದಕ್ಕೆಲ್ಲ ಮೋದಿ ಸರ್ಕಾರದ ಅವೈಜ್ಞಾನಿಕ ನೀತಿಗಳೇ ಕಾರಣ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸಣ್ಣ ರೈತರು ತಮ್ಮ ಜಮೀನನ್ನು ಮಾರಿ, ಅದೇ ಜಮೀನಿನಲ್ಲಿ ಈಗ ಕೂಲಿ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಗಳು ನಿರ್ಮಾಣ ಆಗುವುದನ್ನು ತಡೆಯಬೇಕು. ಹಾಗಾಗಿ ಭೂಮಿಗಾಗಿನ ನಿಮ್ಮ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆಯೆಂದು ಅವರು ಘೋಷಿಸಿದರು.

ನರೇಂದ್ರಮೋದಿಯವರ ಆಡಳಿತದಲ್ಲಿ ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವದ ನಡುವೆ ಸಮರ ನಡೆಯುತ್ತಿದೆ. ನಮ್ಮ ಧ್ವನಿಯನ್ನು ದಮನಿಸಲು ಮೋದಿ ಸರ್ಕಾರ ಮುಂದಾಗಿದೆ. ರಾಜ್ಯಸಭೆಯ ಸದಸ್ಯರನ್ನು ಅಮಾನತುಗೊಳಿಸಿ ಮಸೂದೆ ಪಾಸು ಮಾಡುವ ಅಗತ್ಯವೇನಿತ್ತು ಎಂದು ಅವರು ಪ್ರಶ್ನಿಸಿದರು.

ರಾಜ್ಯದ ವಿಧಾನಪರಿಷತ್ತಿನಲ್ಲಿ ಭೂಮಿ ಕಿತ್ತುಕೊಳ್ಳುವ ಈ ಮಸೂದೆ ಅಂಗೀಕಾರವಾಗಲು ಬಿಡಬಾರದು. ಮಂಡನೆ ಮಾಡಲೂ ಬಿಡಬಾರದು. ಅಲ್ಲಿ ಬಿಜೆಪಿಗೆ ಬಹುಮತವಿಲ್ಲ. ಹಾಗಾಗಿ ಜೆಡಿಎಸ್ ಸದಸ್ಯರು ಮತ್ತು ನಮ್ಮ ಪಕ್ಷದ ಸದಸ್ಯರೂ ಇದನ್ನು ವಿರೋಧಿಸಬೇಕು ಎಂದು ಅವರು ಕರೆ ನೀಡಿದರು.

ಭೂಮಿಯ ಹಕ್ಕು ರೈತರದ್ದು .ಭೂಮಿಯ ಹಕ್ಕು ಕಾರ್ಮಿಕರದ್ದು, ದಲಿತರದ್ದು, ಬಡವರದ್ದು. ಯಾವತ್ತಿಗೂ ಭೂಮಿಯ ಹಕ್ಕನ್ನು ಬಿಟ್ಟುಕೊಡಬಾರದು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...