Homeಮುಖಪುಟನ.1ರಿಂದ ಪದವಿ ಕಾಲೇಜು ಆರಂಭ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್

ನ.1ರಿಂದ ಪದವಿ ಕಾಲೇಜು ಆರಂಭ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್

ಈ ವೇಳಾಪಟ್ಟಿಯ ಪ್ರಕಾರ ನವೆಂಬರ್ 1 ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, 2021ರ ಆಗಸ್ಟ್‌ 30ಕ್ಕೆ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ. 

- Advertisement -
- Advertisement -

ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷದ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿದೆ. ನವೆಂಬರ್ 1ರಿಂದ ಪದವಿ ಕಾಲೇಜುಗಳು ಆರಂಭವಾಗಲಿವೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಲ್ ನಿಶಾಂಕ್ ಟ್ವೀಟ್ ಮಾಡಿದ್ದು, ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ.

ಈ ವೇಳಾಪಟ್ಟಿಯ ಪ್ರಕಾರ ನವೆಂಬರ್ 1 ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, 2021ರ ಆಗಸ್ಟ್‌ 30ಕ್ಕೆ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ. ಮೊದಲ ಸೆಮಿಸ್ಟರ್ ಪರೀಕ್ಷೆಗಳು 2021ರ ಮಾರ್ಚ್ 8 ರಿಂದ 26ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ ಆರಂಭವಾಗಲಿದ್ದು, ಆಗಸ್ಟ್‌ನಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರಿಷ್ಕೃತ ವೇಳಾಪಟ್ಟಿಯನ್ನು ಹಂಚಿಕೊಂಡಿರುವ ಶಿಕ್ಷಣ ಸಚಿವರು ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದಾರೆ. ’ಲಾಕ್ ಡೌನ್ ಮತ್ತು ಅದಕ್ಕೆ ಸಂಬಂಧಿತ ಅಂಶಗಳಿಂದಾಗಿ ಪೋಷಕರು ಎದುರಿಸುತ್ತಿರುವ ಹಣಕಾಸಿನ ಹೊರೆ ತಪ್ಪಿಸಲು, ನವೆಂಬರ್ 30 ರವರೆಗೆ ವಿದ್ಯಾರ್ಥಿಗಳ ಪ್ರವೇಶ ರದ್ದತಿ / ವಲಸೆ ಮುಂತಾದವುಗಳ ಸಂದರ್ಭದಲ್ಲಿ ವಿದ್ಯಾರ್ಥಿ ಕಟ್ಟಿದ ಶುಲ್ಕವನ್ನು ಪೂರ್ಣ ಮರುಪಾವತಿ ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ಯುಜಿಸಿ ಏಪ್ರಿಲ್ 29ರಂದು ಬಿಡುಗಡೆ ಮಾಡಿದ್ದ ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್‌ 1ರಿಂದ ಪದವಿ ಕಾಲೇಜುಗಳು ಆರಂಭವಾಗಬೇಕಿತ್ತು. ಜುಲೈನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್‌ಆರ್‌ಡಿ) ಕಾಲೇಜುಗಳ ವೇಳಾಪಟ್ಟಿಯ ದಿನಾಂಕ ಪರಿಷ್ಕರಿಸಿ, ವಿಶ್ವವಿದ್ಯಾನಿಲಯಗಳಲ್ಲಿ ಸೆಮಿಸ್ಟರ್ / ಅಂತಿಮ ವರ್ಷದ ಪರೀಕ್ಷೆಗಳನ್ನು ಸೆಪ್ಟೆಂಬರ್ ಅಂತ್ಯದ ವೇಳೆಗೆ ನಡೆಸಲಾಗುವುದು ಎಂದು ತಿಳಿಸಿತ್ತು.

“ಕೊನೆಯ ಸೆಮಿಸ್ಟರ್ ಅನ್ನು 2020 ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಆಫ್‌ಲೈನ್ (ಪೆನ್ ಮತ್ತು ಪೇಪರ್) ಅಥವಾ ಆನ್‌ಲೈನ್ ಅಥವಾ ‌ಎರಡು (ಆನ್‌ಲೈನ್ + ಆಫ್‌ಲೈನ್) ವಿಧಾನದಲ್ಲಾದರೂ ನಡೆಸಲಾಗುವುದು” ಎಂದು ಯುಜಿಸಿ ಪತ್ರವೊಂದರಲ್ಲಿ ತಿಳಿಸಿದೆ. ಸದ್ಯ ಸೆಪ್ಟಂಬರ್‌ 1ಕ್ಕೆ ಆರಂಭವಾಗಬೇಕಿದ್ದ ಪದವಿ ತರಗತಿಗಳನ್ನು ನವೆಂಬರ್‌ 1ಕ್ಕೆ ಮುಂದೂಡಿದೆ.

ರಾಜ್ಯದಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸೆಪ್ಟೆಂಬರ್ 21ರಿಂದ ಹಿನ್ನೆಲೆ ಶಾಲೆ ಮತ್ತು ಪಿಯು ಕಾಲೇಜುಗಳನ್ನು ರೀಓಪನ್ ಮಾಡುವ ನಿರ್ಧಾರವನ್ನು ವಾಪಾಸ್ ತೆಗೆದುಕೊಳ್ಳಲಾಗಿದೆ.


ಇದನ್ನೂ ಓದಿ: ಶಾಲಾ ಶುಲ್ಕ ಮನ್ನಾ ಮಾಡುವ ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...