Homeಚಳವಳಿಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೃಷಿ ಮಸೂದೆ ವಿರೋಧಿಸಿ ಒಂದಾದ 31 ರೈತ ಸಂಘಟನೆಗಳು: ಸೆ.25ರಂದು ಪಂಜಾಬ್ ಬಂದ್‌ಗೆ ಕರೆ

ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

- Advertisement -
- Advertisement -

ಪಂಜಾಬ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಡೊಡ್ಡ-ಸಣ್ಣ ಸೇರಿದಂತೆ 31 ರೈತ ಸಂಘಟನೆಗಳು ಒಟ್ಟುಗೂಡಿವೆ. ತಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಸೆಪ್ಟಂಬರ್ 25ರಂದು ಬೃಹತ್ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಈ ರೈತ ಸಂಘಟನೆಗಳು ಸಹ ವಿಭಿನ್ನ ಸೈದ್ಧಾಂತಿಕ ನಿಲುವುಗಳನ್ನು ಹೊಂದಿವೆ. ಆದರೂ ಕೇಂದ್ರ ಸರ್ಕಾರ ತರಲೊರಟಿರುವ ಮೂರು ಕೃಷಿ ಮಸೂದೆಗಳು ಈ ಸಂಘಟನೆಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದುಗೂಡುವಂತೆ ಮಾಡಿವೆ. ಅವರೆಲ್ಲರೂ ಕೇಂದ್ರದ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂಬ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

31 ರೈತ ಸಂಘಟನೆಗಳಲ್ಲಿ ಉತ್ತರ ಪ್ರದೇಶದ ರೈತನಾಯಕ ಮಹೇಂದ್ರ ಸಿಂಗ್ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಅತಿ ದೊಡ್ಡ ಸಂಘಟನೆಯಾಗಿದೆ. ಪಂಜಾಬ್‌ನಲ್ಲಿ ಅದನ್ನು ಅಜ್ಮೀರ್ ಸಿಂಗ್ ಲಾಕೋವಾಲ್ ಮುನ್ನೆಡೆಸುತ್ತಿದ್ದಾರೆ. ಇದೇ ಸಂಘಟನೆಯಿಂದ ವಿಘಟಿತರಾದ ಹಲವಾರು ಸಣ್ಣ ರೈತ ಸಂಘಗಳು ಸಹ ಪಂಜಾಬ್‌ ಬಂದ್‌ಗೆ ಬೆಂಬಲ ನೀಡಿವೆ.

31 ಸಂಘಟನೆಗಳಲ್ಲಿ ಕನಿಷ್ಟ 18 ಸಂಘಟನೆಗಳು ರಾಜ್ಯಾದ್ಯಂತ ತಮ್ಮ ಪ್ರಭಾವವನ್ನು ಹೊಂದಿವೆ ಎಂದು ಹೇಳಲಾಗುತ್ತಿದೆ. ಇವು ಪ್ರತಿ ತಾಲ್ಲೂಕು, ಜಿಲ್ಲಾ, ರಾಜ್ಯ ಘಟಕಗಳಿಗೂ ಪ್ರಜಾತಾಂತ್ರಿಕ ರೀತಿಯ ಚುನಾವಣೆ ನಡೆಸಿ ಪದಾಧಿಕಾರಿಗಳನ್ನು ನೇಮಿಸಿಕೊಂಡಿವೆ. 10000 ದಿಂದ 1 ಲಕ್ಷದವರೆಗೂ ಸದಸ್ಯತ್ವ ಹೊಂದಿವೆ ಎನ್ನಲಾಗಿದೆ. ಇನ್ನುಳಿದ ರೈತ ಸಂಘಟನೆಗಳು ಸಣ್ಣ ಸಂಘಟನೆಗಳಾಗಿದ್ದು ಒಂದೆರೆಡು ಜಿಲ್ಲೆಗಳಲ್ಲಿ ಮಾತ್ರ ತಮ್ಮ ಪ್ರಭಾವ ಹೊಂದಿವೆ.

ಈ ರೈತ ಸಂಘಟನೆಗಳು ಅಕಾಲಿ ದಳ, ಕಾಂಗ್ರೆಸ್, ಆಪ್, ಎಡಪಕ್ಷಗಳು ಸೇರಿದಂತೆ ಹಲವು ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡಿವೆ. ಆದರೂ ಈ ಬಾರಿ ಅವರೆಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ಒಟ್ಟಾಗಿವೆ. ಸೆಪ್ಟಂಬರ್ 25ರ ಪಂಜಾಬ್ ಬಂದ್ ಅವರ ಮೊದಲ ಒಕ್ಕೂಟದ ಹೋರಾಟವಾದರೆ ನಂತರವೂ ಸಹ ಕೃಷಿ ಮತ್ತು ರೈತರ ವಿಚಾರದಲ್ಲಿ ಒಗ್ಗೂಡಿ ಹೋರಾಡುತ್ತೇವೆ ಎಂದು ಬಿಕೆಯು ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೋಖ್ರಿಕಾಲನ್ ಹೇಳಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯುನಿಯನ್ ಪಂಜಾಬ್‌ನ ಡಾ.ದರ್ಶನ್ ಪಾಲ್ ಮಾತನಾಡಿ “ನಾವು ಈ ಮೊದಲು ಆಲ್ ಇಂಡಿಯಾ ಕಿಸಾನ್ ಸಂಘರ್ಷ ಕೋಆರ್ಡಿನೇಷನ್ ಸಮಿತಿಯ (ಎಐಕೆಎಸ್‌ಸಿಸಿ) ಭಾಗವಾಗಿದ್ದೆವು. ಇದು ದೇಶದ ಸುಮಾರು 250ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟವಾಗಿದೆ. ಈಗ ಪಂಜಾಬ್‌ನಲ್ಲಿಯೂ ಸಹ 31 ರೈತ ಸಂಘಟನೆಗಳು ಒಂದೂಗೂಡಿರುವುದು ಸಕರಾತ್ಮಕ ಬೆಳವಣಿಗೆಯಾಗಿದ್ದು ನಾವೆಲ್ಲರೂ ಸೇರಿ ಹೋರಾಟ ಮುನ್ನೆಡೆಸುತ್ತೇವೆ” ಎಂದಿದ್ದಾರೆ.

ಹರಿಯಾಣದಲ್ಲಿ ರೈತರ ಬೃಹತ್ ಪ್ರತಿಭಟನೆ

ಈ ಮೊದಲು ಸಹ ಎಐಕೆಎಸ್‌ಸಿಸಿ ನೇತೃತ್ವದಲ್ಲಿ ದೇಶಾದ್ಯಂತ ಜಾಥಾ ನಡೆಸಿ ಬೃಹತ್ ಹೋರಾಟ ನಡೆಸಿದ್ದೇವೆ. ಆದರೆ ರಾಜ್ಯದಲ್ಲಿ ನಾವು ಬಿಡಿ ಬಿಡಿಯಾಗಿಯೇ ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ರಾಜ್ಯದಲ್ಲಿಯೂ ಸಹ ರೈತಸಂಘಟನೆಗಳು ಒಗ್ಗೂಡಿರುವುದರಿಂದ ಹೆಚ್ಚಿನ ಬಲಬಂದಿದೆ. ಜೊತೆಗೂಡಿ ಹೋರಾಡುವುದಕ್ಕೆ ಖುಷಿಯಾಗುತ್ತಿದೆ ಎಂದಿದ್ದಾರೆ.

ಇನ್ನು ಹರಿಯಾಣದಲ್ಲಿಯೂ ಸಹ ಅಲ್ಲಿನ ರೈತಸಂಘಟನೆಗಳು ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ವಿರುದ್ಧ ತಿರುಗಿಬಿದ್ದಿವೆ. ನಿನ್ನೆ 50 ಸಾವಿರಕ್ಕೂ ಹೆಚ್ಚು ರೈತರು ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೃಹತ್ ಹೋರಾಟ ನಡೆಸಿದ್ದಾರೆ. 

ಅದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ರೈತ-ದಲಿತ-ಕಾರ್ಮಿಕ ಸಂಘಟನೆಗಳು ಒಟ್ಟುಗೂಡಿ ಮೂರು ದಿನದಿಂದ ಐಕ್ಯ ಹೋರಾಟ ನಡೆಸುತ್ತಿವೆ. ರೈತಸಂಘಟನೆಗಳು, ಭೂಹೀನರು, ಎಡಪಕ್ಷಗಳು ಕಾರ್ಮಿಕ ಸಂಘಟನೆಗಳು ಜೊತೆಸೇರಿ ಪರ್ಯಾಯ ಜನತಾ ಅಧಿವೇಶನ ನಡೆಸುತ್ತಿವೆ.


ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...