Homeಚಳವಳಿಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ...

ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

- Advertisement -
- Advertisement -

ಮಳೆ, ಚಳಿ, ಬಿಸಿಲು ಏನೇ ಇರಲಿ ಅಥವಾ ಕೊರೊನಾದಂತಹ ದೊಡ್ಡ ದೊಡ್ಡ ಸಾಂಕ್ರಾಮಿಕ ರೋಗಗಳೆ ಬರಲಿ ಇವರು ಮಾತ್ರ ತಮ್ಮ ಕೆಲಸ ನಿಲ್ಲಿಸುವುದಿಲ್ಲ.. ಮನೆಯೊಳಗೆ ಬೆಚ್ಚಗೆ ಮಲಗುವುದಿಲ್ಲ..ಅದೆಂತಹದ್ದೇ ಪರಿಸ್ಥಿತಿಯಿರಲಿ ಕೈಯಲ್ಲಿ ಪೊರಕೆ ಹಿಡಿದು ರಸ್ತೆಗೆ ಇಳಿಯುತ್ತಾರೆ. ಒಂದು ದಿನ ಇವರ್‍ಯಾರೂ ಕೆಲಸ ಮಾಡದಿದ್ದರೇ, ಬೀದಿಗಿಳಿಯದಿದ್ದರೇ ನಾವ್ಯಾರೂ ರಸ್ತೆಗಳಲ್ಲಿ, ಮಾರ್ಕೆಟ್‌ಗಳಲ್ಲಿ, ಬಸ್ ನಿಲ್ದಾಣಗಳ್ಲಲಿ ಓಡಾಡಲು ಸಾಧ್ಯವೇ ಇಲ್ಲ. ಹೌದು ಇವರೇ ನಮ್ಮ ನಗರಗಳನ್ನು ಸ್ವಚ್ಛಗೊಳಿಸಿ ನಮಗಾಗಿ ತಮ್ಮ ಸುರಕ್ಷತೆಯನ್ನೂ ಬದಿಗಿಟ್ಟ ಪೌರಕಾರ್ಮಿಕರು. ಅರ್ಥಾಥ್ ಸಾಮಾಜಿಕ ವೈದ್ಯರು.

ನಮ್ಮ ನಗರಗಳು, ನಮ್ಮ ಮನೆಯ ಬೀದಿಗಳು, ನಾವು ಓಡಾಡುವ ಸ್ಥಳಗಳು ಸ್ವಚ್ಛವಾಗಿರಲು ಇವರೇ ಪ್ರಮುಖ ಕಾರಣಕರ್ತರು. ಇಂದು ಇವರ ದಿನ. ಅಂದರೆ ಪೌರಕಾರ್ಮಿಕರ ದಿನ. ಈ ದಿನದ ನೆಪದಲ್ಲೊಮ್ಮೆ ಇವರನ್ನ ನೆನಪಿಸಿಕೊಳ್ಳುವ..

ನಾವು ಗಣೇಶ ಹಬ್ಬ, ದೀಪಾವಳಿ ಮಾಡಿ ರಸ್ತೆಗಳಲ್ಲಿ ಕಸ ಎಸೆದು ಮನೆಗೆ ಹೋಗುತ್ತಿವೆ. ಬೆಳಗ್ಗೆ ಆ ಕಸ ಕಾಣಿಸುವುದಿಲ್ಲ ಎಂದರೇ ಅದಕ್ಕೆ ಇವರೆ ಕಾರಣ. ನಾವು ಕೆಲಸಕ್ಕೆ ಹೋಗುತ್ತೇವೆ, ನಮಗೆ ವಾರದ ರಜೆ, ಹಬ್ಬಗಳ ರಜೆ ಎಂಬ ಸವಲತ್ತುಗಳು ಇವೆ ಅಲ್ಲವೇ? ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆಯಾದ್ರೂ ಇರುತ್ತೆ ಅಲ್ಲವೇ.. ಆದ್ರೆ ವಿಪರ್ಯಾಸ ನೋಡಿ ಇವರ್‍ಯಾರಿಗೂ ರಜೆ ಎಂಬುದೇ ಇಲ್ಲ..ರಜೆ ಬೇಕಿದ್ದರೇ ಸಂಬಳ ಕೇಳೋ ಹಾಗಿಲ್ಲ ಅಷ್ಟೆ..

ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರ ಪರಿಸ್ಥಿತಿ ಹೇಗಿರುತ್ತೇ ಗೊತ್ತಿದ್ಯಾ..? ಬೆಳಗ್ಗೆ 5-6 ಗಂಟೆಗೆ ಕೆಲಸಕ್ಕೆ ಹಾಜರಾಗುವ ಇವರಿಗೆ ಕುಡಿಯಲು ನೀರು, ಬಳಸಲು ಶೌಚಾಲಯ, ಬಟ್ಟೆ ಬದಲಿಸಲು ಒಂದು ಪುಟ್ಟ ಕೊಠಡಿ ಸಹ ಇರಲ್ಲ. ಅದರಲ್ಲೂ ಮಹಿಳಾ ಪೌರಕಾರ್ಮಿಕರ ಪರಿಸ್ಥಿತಿ ಊಹಿಸಲಸಾಧ್ಯ..

PC: eesanje

ಆಶ್ಚರ್ಯದ ವಿಷಯವೆಂದರೇ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನ ಇದೆ ಎಂಬುದೇ ಒಂದು ನಗೆಪಾಟಿಲಿನ ಸಂಗತಿ ಎಂದರೆ ನೀವು ನಂಬಲೇಬೇಕು. ನಮಗೆ ಅಂತಾ ದಿನ ಇದ್ಯಾ ಎಂದು ಕೇಳುತ್ತಾರೆ ಈ ಕಾರ್ಮಿಕರು. ಹಾಗಾದ್ರೆ ಈ ಪೌರಕಾರ್ಮಿಕ ಸಂಘಟನೆ ಮುಖಂಡರು ಏನಂತಾರೆ.. ನೀವೇ ಓದಿ

ಈ ಕುರಿತು ನಾನುಗೌರಿ.ಕಾಂ ಎಐಸಿಸಿಟಿಯು ನೇತೃತ್ವದ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾರವರನ್ನು ಮಾತನಾಡಿಸಿತು. “ಪೌರಕಾರ್ಮಿಕರ ದಿನಾಚರಣೆ ಅಂದ್ರೆ ನಮಗೆ ಆಶ್ಚರ್ಯ ಆಗ್ತದೆ. ದಿನ ಕೆಲಸ ಮಾಡಿ ಮನೆಗೆ ಹೋಗುವ ನಮ್ಮ ಕಾರ್ಮಿಕರಿಗೆ ಈ ದಿನವೆಲ್ಲಾ ಗೊತ್ತಿರುವುದಿಲ್ಲ. ಮೇ 1ರ ಕಾರ್ಮಿಕರ ದಿನಾಚರಣೆಯಷ್ಟೇ ನಮ್ಮ ಕಾರ್ಮಿಕರಿಗೆ ಗೊತ್ತಿರುವುದು. ಪೌರಕಾರ್ಮಿಕ ದಿನಾಚರಣೆಗಳು ನಮ್ಮ ಕಾರ್ಮಿಕರ ಬದುಕಿನಲ್ಲಿ ಯಾವ ಬದಲಾವಣೆಯನ್ನು ತಂದಿಲ್ಲ. ಪ್ರಧಾನಿಗಳು ಕಾರ್ಮಿಕರ ದಿನ ಅಂತಾ 4 ಜನ ಪೌರಕಾರ್ಮಿಕರ ಕಾಲು ತೊಳೆದರೆ, ನಾವು ದೇವರಾಗುವುದಿಲ್ಲ ಅಲ್ವಾ..?” ಎಂದು ಪ್ರಶ್ನಿಸುತ್ತಾರೆ.

ಕೊರೊನಾ ಸಮಯದಲ್ಲಿ ಪ್ರತಿದಿನ ಪೌರಕಾರ್ಮಿಕರಿಗೆ 100 ರೂಪಾಯಿ ಬಸ್ ಚಾರ್ಜ್‌ ಕೊಡುವುದಾಗಿ ಬಿಬಿಎಂಪಿ ಭರವಸೆ ನೀಡಿತ್ತು. ಆದ್ರೆ ಅದನ್ನೂ ಕೊಟ್ಟಿಲ್ಲ. ದಿನಪ್ರತಿ ದುಡಿಯುತ್ತಿರುವ ಪೌರಕಾರ್ಮಿಕರ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ. ನಾವು ಹಲವು ಬಾರಿ ಹೋರಾಟ ಮಾಡಿದ ಪರಿಣಾಮ ಕೇವಲ ಮಾಸ್ಕ್, ಸ್ಯಾನಿಟೈಜರ್‌ ಕೆಲವರಿಗೆ ಸಿಕ್ಕಿವೆ ಅಷ್ಟೇ. ಕೊರೊನಾ ಹಾಟ್‌ಸ್ಪಾಟ್‌ಗಳಲ್ಲೇ ಇವರಿಗೆ ಪಿಪಿಇ ಕಿಟ್ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರ್‌.ಟಿ.ನಗರದಲ್ಲಿ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುವ ಗಂಗಮ್ಮ ಹೇಳುತ್ತಾರೆ, “ಕೊರೊನಾ ಬಂದಾಗಿನಿಂದ ಎಲ್ಲರು ಭಯಪಟ್ತಿದ್ದಾರೆ. ಆದ್ರೆ ನಮಗೆ ಮಾಸ್ಕ್, ಸ್ಯಾನಿಟೈಜರ್‌, ಪಿಪಿಇ ಕಿಟ್ ಯಾವುದು ಸರಿಯಾಗಿ ಸಿಕ್ಕಿಲ್ಲ. ಕೊಡಿ ಅಂತಾ ಎಷ್ಟೋ ಬಾರಿ ಕೇಳಿದ್ರೂ ಬರಿ ಭರವಸೆ ನೀಡ್ತಾರೆ. ನಮಗೆ ಕೆಲಸ ಮಾಡುವ ಸ್ಥಳದಲ್ಲಿ ವಾಶ್‌ ರೂಂ ಇಲ್ಲ, ಬಟ್ಟೆ ಬದಲಿಸೋಕೆ ಸ್ಥಳ ಇರಲ್ಲ. ಒಂದು ದಿನ ಕೂಡ ರಜೆ ಇಲ್ಲದೆ ಕೆಲಸ ಮಾಡುವವರಿಗೆ ಯಾವ ಸೌಲಭ್ಯ ಕೂಡ ಇಲ್ಲ. ಒಂದು ದಿನ ರಜೆ ತಗೊಂಡರು ಆ ದಿನದ ಸಂಬಳ ಕಟ್ ಮಾಡ್ತಾರೆ ಎಂದು ನೋವು ತೋಡಿಕೊಳ್ಳುತ್ತಾರೆ ಗಂಗಮ್ಮ.

ಇದನ್ನೂ ಓದಿ: ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರೆಂದರೆ ಹಕ್ಕು ಇಲ್ಲದೆ ಇರುವ ಮನುಷ್ಯರು ಎಂದೇ ಅರ್ಥ ಎನ್ನುತ್ತಾರೆ ಗುತ್ತಿಗೆ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕಾಮ್ರೆಡ್ ಬಾಲನ್. ಮಹಿಳೆಯರ ಹಕ್ಕು, ಮಾನವ ಹಕ್ಕುಗಳು ಯಾವುದೂ ಇಲ್ಲದೆ ಬರುಕುತ್ತಿರುವ ಕಾರ್ಮಿಕರು ಇವರು. ಖಾಯಂ ನೌಕರರು ಮಾಡುವ ಕೆಲಸವೇ ಗುತ್ತಿಗೆ ನೌಕರರು ಮಾಡುತ್ತಾರೆ ಆದ್ರೆ ಸಂಬಳದಲ್ಲಿ ಮಾತ್ರ ತಾರತಮ್ಯ ಇದೆ. ಅವರನ್ನು ಖಾಯಂ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು. ಆದ್ರೆ ಸರ್ಕಾರ ಹೈಕೋರ್ಟ್ ಆದೇಶ ಕೂಡ ಜಾರಿಗೊಳಿಸಲಿಲ್ಲ. ದಿನಾಚರಣೆಗಳ ಬದಲು ಅವರಿಗೆ ಇರಲು ಮನೆ ಕೊಡಲಿ, ಅವರ ಕೆಲಸ ಖಾಯಂ ಮಾಡಲಿ, ಹೆರಿಗೆ ರಜೆ ನೀಡಲಿ ಎನ್ನುತ್ತಾರೆ ಕಾಮ್ರೆಡ್ ಬಾಲನ್.

ಇಡೀ ಸಮಾಜವೇ ಇವರನ್ನು ದೂರ ಇಟ್ಟಿದೆ. ಸಮಾಜದ ಜನ ಇವರನ್ನು ಮನುಷ್ಯರು ಎಂದೇ ಪರಿಗಣಿಸುವುದಿಲ್ಲ. 4 ಜನ ಪೌರಕಾರ್ಮಿಕರ ಕಾಲು ತೊಳೆದು ದಿನಾಚರಣೆ ಮಾಡಿದರೇ ಪ್ರತಿ ದಿನ ಹೊಲಸು ಗುಂಡಿಯಲ್ಲಿ ಬೀಳುವುದು ತಪ್ಪುತ್ತದೇಯೇ? ಅವರಿಗೆ ಸೂಕ್ತ ಸೌಲಭ್ಯ ನೀಡಲಿ ಸಾಕು. ಎಲ್ಲಾ ಮಹಿಳೆಯರಿಗೆ ಸಿಗುವ ಕನಿಷ್ಠ ಹೆರಿಗೆ ರಜೆ ಕೂಡ ಇವರಿಗೆ ಇಲ್ಲ. ಸರ್ಕಾರ ಮಾಡುವ ಇಂತಹ ದಿನಾಚರಣೆಗಳು ಬರಿ ಬೋಗಸ್ ಎಂದು ಬಾಲನ್ ಕಿಡಿಕಾರುತ್ತಾರೆ.

PC: ThePrint

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ಪೌರಕಾರ್ಮಿಕರ ದಿನದ ಶುಭಾಷಯ ತಿಳಿಸಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ ಎಂದಿದ್ದಾರೆ.

 

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಗುತ್ತಿಗೆದಾರರೂ ಕೂಡ ಗುತ್ತಿಗೆ ಕಾರ್ಮಿಕರಿಗೆ ಸರಿಯಾದ  ಆರೋಗ್ಯ ವ್ಯವಸ್ಥೆ ಮಾಡುವುದಿಲ್ಲ. ಇನ್ನೂ ಸರ್ಕಾರ ಕೊರೊನಾ ಕಾಲದಲ್ಲಿ ಸ್ವಚ್ಛತೆಗೆ ಪ್ರಾಧಾನ್ಯತೆ ನೀಡುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಗಮನ ಹರಿಸುತ್ತಿಲ್ಲ. ಇವರೆಗೆ 4 ಮಂದಿ ಪೌರಕಾರ್ಮಿಕರು ಕೊರೊನಾಗೆ ಬಲಿಯಾಗಿದ್ದಾರೆ. ಒಂದು ವರದಿಯ ಪ್ರಕಾರ ಪೌರಕಾರ್ಮಿಕರ ಸರಾಸರಿ ವಯಸ್ಸು 40 ವರ್ಷ ಎಂದು ಗುರುತಿಸಲಾಗಿದೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?


ಇದನ್ನೂ ಓದಿ: ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...