Homeಚಳವಳಿಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ...

ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

- Advertisement -
- Advertisement -

ಮಳೆ, ಚಳಿ, ಬಿಸಿಲು ಏನೇ ಇರಲಿ ಅಥವಾ ಕೊರೊನಾದಂತಹ ದೊಡ್ಡ ದೊಡ್ಡ ಸಾಂಕ್ರಾಮಿಕ ರೋಗಗಳೆ ಬರಲಿ ಇವರು ಮಾತ್ರ ತಮ್ಮ ಕೆಲಸ ನಿಲ್ಲಿಸುವುದಿಲ್ಲ.. ಮನೆಯೊಳಗೆ ಬೆಚ್ಚಗೆ ಮಲಗುವುದಿಲ್ಲ..ಅದೆಂತಹದ್ದೇ ಪರಿಸ್ಥಿತಿಯಿರಲಿ ಕೈಯಲ್ಲಿ ಪೊರಕೆ ಹಿಡಿದು ರಸ್ತೆಗೆ ಇಳಿಯುತ್ತಾರೆ. ಒಂದು ದಿನ ಇವರ್‍ಯಾರೂ ಕೆಲಸ ಮಾಡದಿದ್ದರೇ, ಬೀದಿಗಿಳಿಯದಿದ್ದರೇ ನಾವ್ಯಾರೂ ರಸ್ತೆಗಳಲ್ಲಿ, ಮಾರ್ಕೆಟ್‌ಗಳಲ್ಲಿ, ಬಸ್ ನಿಲ್ದಾಣಗಳ್ಲಲಿ ಓಡಾಡಲು ಸಾಧ್ಯವೇ ಇಲ್ಲ. ಹೌದು ಇವರೇ ನಮ್ಮ ನಗರಗಳನ್ನು ಸ್ವಚ್ಛಗೊಳಿಸಿ ನಮಗಾಗಿ ತಮ್ಮ ಸುರಕ್ಷತೆಯನ್ನೂ ಬದಿಗಿಟ್ಟ ಪೌರಕಾರ್ಮಿಕರು. ಅರ್ಥಾಥ್ ಸಾಮಾಜಿಕ ವೈದ್ಯರು.

ನಮ್ಮ ನಗರಗಳು, ನಮ್ಮ ಮನೆಯ ಬೀದಿಗಳು, ನಾವು ಓಡಾಡುವ ಸ್ಥಳಗಳು ಸ್ವಚ್ಛವಾಗಿರಲು ಇವರೇ ಪ್ರಮುಖ ಕಾರಣಕರ್ತರು. ಇಂದು ಇವರ ದಿನ. ಅಂದರೆ ಪೌರಕಾರ್ಮಿಕರ ದಿನ. ಈ ದಿನದ ನೆಪದಲ್ಲೊಮ್ಮೆ ಇವರನ್ನ ನೆನಪಿಸಿಕೊಳ್ಳುವ..

ನಾವು ಗಣೇಶ ಹಬ್ಬ, ದೀಪಾವಳಿ ಮಾಡಿ ರಸ್ತೆಗಳಲ್ಲಿ ಕಸ ಎಸೆದು ಮನೆಗೆ ಹೋಗುತ್ತಿವೆ. ಬೆಳಗ್ಗೆ ಆ ಕಸ ಕಾಣಿಸುವುದಿಲ್ಲ ಎಂದರೇ ಅದಕ್ಕೆ ಇವರೆ ಕಾರಣ. ನಾವು ಕೆಲಸಕ್ಕೆ ಹೋಗುತ್ತೇವೆ, ನಮಗೆ ವಾರದ ರಜೆ, ಹಬ್ಬಗಳ ರಜೆ ಎಂಬ ಸವಲತ್ತುಗಳು ಇವೆ ಅಲ್ಲವೇ? ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆಯಾದ್ರೂ ಇರುತ್ತೆ ಅಲ್ಲವೇ.. ಆದ್ರೆ ವಿಪರ್ಯಾಸ ನೋಡಿ ಇವರ್‍ಯಾರಿಗೂ ರಜೆ ಎಂಬುದೇ ಇಲ್ಲ..ರಜೆ ಬೇಕಿದ್ದರೇ ಸಂಬಳ ಕೇಳೋ ಹಾಗಿಲ್ಲ ಅಷ್ಟೆ..

ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರ ಪರಿಸ್ಥಿತಿ ಹೇಗಿರುತ್ತೇ ಗೊತ್ತಿದ್ಯಾ..? ಬೆಳಗ್ಗೆ 5-6 ಗಂಟೆಗೆ ಕೆಲಸಕ್ಕೆ ಹಾಜರಾಗುವ ಇವರಿಗೆ ಕುಡಿಯಲು ನೀರು, ಬಳಸಲು ಶೌಚಾಲಯ, ಬಟ್ಟೆ ಬದಲಿಸಲು ಒಂದು ಪುಟ್ಟ ಕೊಠಡಿ ಸಹ ಇರಲ್ಲ. ಅದರಲ್ಲೂ ಮಹಿಳಾ ಪೌರಕಾರ್ಮಿಕರ ಪರಿಸ್ಥಿತಿ ಊಹಿಸಲಸಾಧ್ಯ..

PC: eesanje

ಆಶ್ಚರ್ಯದ ವಿಷಯವೆಂದರೇ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನ ಇದೆ ಎಂಬುದೇ ಒಂದು ನಗೆಪಾಟಿಲಿನ ಸಂಗತಿ ಎಂದರೆ ನೀವು ನಂಬಲೇಬೇಕು. ನಮಗೆ ಅಂತಾ ದಿನ ಇದ್ಯಾ ಎಂದು ಕೇಳುತ್ತಾರೆ ಈ ಕಾರ್ಮಿಕರು. ಹಾಗಾದ್ರೆ ಈ ಪೌರಕಾರ್ಮಿಕ ಸಂಘಟನೆ ಮುಖಂಡರು ಏನಂತಾರೆ.. ನೀವೇ ಓದಿ

ಈ ಕುರಿತು ನಾನುಗೌರಿ.ಕಾಂ ಎಐಸಿಸಿಟಿಯು ನೇತೃತ್ವದ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾರವರನ್ನು ಮಾತನಾಡಿಸಿತು. “ಪೌರಕಾರ್ಮಿಕರ ದಿನಾಚರಣೆ ಅಂದ್ರೆ ನಮಗೆ ಆಶ್ಚರ್ಯ ಆಗ್ತದೆ. ದಿನ ಕೆಲಸ ಮಾಡಿ ಮನೆಗೆ ಹೋಗುವ ನಮ್ಮ ಕಾರ್ಮಿಕರಿಗೆ ಈ ದಿನವೆಲ್ಲಾ ಗೊತ್ತಿರುವುದಿಲ್ಲ. ಮೇ 1ರ ಕಾರ್ಮಿಕರ ದಿನಾಚರಣೆಯಷ್ಟೇ ನಮ್ಮ ಕಾರ್ಮಿಕರಿಗೆ ಗೊತ್ತಿರುವುದು. ಪೌರಕಾರ್ಮಿಕ ದಿನಾಚರಣೆಗಳು ನಮ್ಮ ಕಾರ್ಮಿಕರ ಬದುಕಿನಲ್ಲಿ ಯಾವ ಬದಲಾವಣೆಯನ್ನು ತಂದಿಲ್ಲ. ಪ್ರಧಾನಿಗಳು ಕಾರ್ಮಿಕರ ದಿನ ಅಂತಾ 4 ಜನ ಪೌರಕಾರ್ಮಿಕರ ಕಾಲು ತೊಳೆದರೆ, ನಾವು ದೇವರಾಗುವುದಿಲ್ಲ ಅಲ್ವಾ..?” ಎಂದು ಪ್ರಶ್ನಿಸುತ್ತಾರೆ.

ಕೊರೊನಾ ಸಮಯದಲ್ಲಿ ಪ್ರತಿದಿನ ಪೌರಕಾರ್ಮಿಕರಿಗೆ 100 ರೂಪಾಯಿ ಬಸ್ ಚಾರ್ಜ್‌ ಕೊಡುವುದಾಗಿ ಬಿಬಿಎಂಪಿ ಭರವಸೆ ನೀಡಿತ್ತು. ಆದ್ರೆ ಅದನ್ನೂ ಕೊಟ್ಟಿಲ್ಲ. ದಿನಪ್ರತಿ ದುಡಿಯುತ್ತಿರುವ ಪೌರಕಾರ್ಮಿಕರ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ. ನಾವು ಹಲವು ಬಾರಿ ಹೋರಾಟ ಮಾಡಿದ ಪರಿಣಾಮ ಕೇವಲ ಮಾಸ್ಕ್, ಸ್ಯಾನಿಟೈಜರ್‌ ಕೆಲವರಿಗೆ ಸಿಕ್ಕಿವೆ ಅಷ್ಟೇ. ಕೊರೊನಾ ಹಾಟ್‌ಸ್ಪಾಟ್‌ಗಳಲ್ಲೇ ಇವರಿಗೆ ಪಿಪಿಇ ಕಿಟ್ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರ್‌.ಟಿ.ನಗರದಲ್ಲಿ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುವ ಗಂಗಮ್ಮ ಹೇಳುತ್ತಾರೆ, “ಕೊರೊನಾ ಬಂದಾಗಿನಿಂದ ಎಲ್ಲರು ಭಯಪಟ್ತಿದ್ದಾರೆ. ಆದ್ರೆ ನಮಗೆ ಮಾಸ್ಕ್, ಸ್ಯಾನಿಟೈಜರ್‌, ಪಿಪಿಇ ಕಿಟ್ ಯಾವುದು ಸರಿಯಾಗಿ ಸಿಕ್ಕಿಲ್ಲ. ಕೊಡಿ ಅಂತಾ ಎಷ್ಟೋ ಬಾರಿ ಕೇಳಿದ್ರೂ ಬರಿ ಭರವಸೆ ನೀಡ್ತಾರೆ. ನಮಗೆ ಕೆಲಸ ಮಾಡುವ ಸ್ಥಳದಲ್ಲಿ ವಾಶ್‌ ರೂಂ ಇಲ್ಲ, ಬಟ್ಟೆ ಬದಲಿಸೋಕೆ ಸ್ಥಳ ಇರಲ್ಲ. ಒಂದು ದಿನ ಕೂಡ ರಜೆ ಇಲ್ಲದೆ ಕೆಲಸ ಮಾಡುವವರಿಗೆ ಯಾವ ಸೌಲಭ್ಯ ಕೂಡ ಇಲ್ಲ. ಒಂದು ದಿನ ರಜೆ ತಗೊಂಡರು ಆ ದಿನದ ಸಂಬಳ ಕಟ್ ಮಾಡ್ತಾರೆ ಎಂದು ನೋವು ತೋಡಿಕೊಳ್ಳುತ್ತಾರೆ ಗಂಗಮ್ಮ.

ಇದನ್ನೂ ಓದಿ: ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರೆಂದರೆ ಹಕ್ಕು ಇಲ್ಲದೆ ಇರುವ ಮನುಷ್ಯರು ಎಂದೇ ಅರ್ಥ ಎನ್ನುತ್ತಾರೆ ಗುತ್ತಿಗೆ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕಾಮ್ರೆಡ್ ಬಾಲನ್. ಮಹಿಳೆಯರ ಹಕ್ಕು, ಮಾನವ ಹಕ್ಕುಗಳು ಯಾವುದೂ ಇಲ್ಲದೆ ಬರುಕುತ್ತಿರುವ ಕಾರ್ಮಿಕರು ಇವರು. ಖಾಯಂ ನೌಕರರು ಮಾಡುವ ಕೆಲಸವೇ ಗುತ್ತಿಗೆ ನೌಕರರು ಮಾಡುತ್ತಾರೆ ಆದ್ರೆ ಸಂಬಳದಲ್ಲಿ ಮಾತ್ರ ತಾರತಮ್ಯ ಇದೆ. ಅವರನ್ನು ಖಾಯಂ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು. ಆದ್ರೆ ಸರ್ಕಾರ ಹೈಕೋರ್ಟ್ ಆದೇಶ ಕೂಡ ಜಾರಿಗೊಳಿಸಲಿಲ್ಲ. ದಿನಾಚರಣೆಗಳ ಬದಲು ಅವರಿಗೆ ಇರಲು ಮನೆ ಕೊಡಲಿ, ಅವರ ಕೆಲಸ ಖಾಯಂ ಮಾಡಲಿ, ಹೆರಿಗೆ ರಜೆ ನೀಡಲಿ ಎನ್ನುತ್ತಾರೆ ಕಾಮ್ರೆಡ್ ಬಾಲನ್.

ಇಡೀ ಸಮಾಜವೇ ಇವರನ್ನು ದೂರ ಇಟ್ಟಿದೆ. ಸಮಾಜದ ಜನ ಇವರನ್ನು ಮನುಷ್ಯರು ಎಂದೇ ಪರಿಗಣಿಸುವುದಿಲ್ಲ. 4 ಜನ ಪೌರಕಾರ್ಮಿಕರ ಕಾಲು ತೊಳೆದು ದಿನಾಚರಣೆ ಮಾಡಿದರೇ ಪ್ರತಿ ದಿನ ಹೊಲಸು ಗುಂಡಿಯಲ್ಲಿ ಬೀಳುವುದು ತಪ್ಪುತ್ತದೇಯೇ? ಅವರಿಗೆ ಸೂಕ್ತ ಸೌಲಭ್ಯ ನೀಡಲಿ ಸಾಕು. ಎಲ್ಲಾ ಮಹಿಳೆಯರಿಗೆ ಸಿಗುವ ಕನಿಷ್ಠ ಹೆರಿಗೆ ರಜೆ ಕೂಡ ಇವರಿಗೆ ಇಲ್ಲ. ಸರ್ಕಾರ ಮಾಡುವ ಇಂತಹ ದಿನಾಚರಣೆಗಳು ಬರಿ ಬೋಗಸ್ ಎಂದು ಬಾಲನ್ ಕಿಡಿಕಾರುತ್ತಾರೆ.

PC: ThePrint

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ಪೌರಕಾರ್ಮಿಕರ ದಿನದ ಶುಭಾಷಯ ತಿಳಿಸಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ ಎಂದಿದ್ದಾರೆ.

 

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಗುತ್ತಿಗೆದಾರರೂ ಕೂಡ ಗುತ್ತಿಗೆ ಕಾರ್ಮಿಕರಿಗೆ ಸರಿಯಾದ  ಆರೋಗ್ಯ ವ್ಯವಸ್ಥೆ ಮಾಡುವುದಿಲ್ಲ. ಇನ್ನೂ ಸರ್ಕಾರ ಕೊರೊನಾ ಕಾಲದಲ್ಲಿ ಸ್ವಚ್ಛತೆಗೆ ಪ್ರಾಧಾನ್ಯತೆ ನೀಡುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಗಮನ ಹರಿಸುತ್ತಿಲ್ಲ. ಇವರೆಗೆ 4 ಮಂದಿ ಪೌರಕಾರ್ಮಿಕರು ಕೊರೊನಾಗೆ ಬಲಿಯಾಗಿದ್ದಾರೆ. ಒಂದು ವರದಿಯ ಪ್ರಕಾರ ಪೌರಕಾರ್ಮಿಕರ ಸರಾಸರಿ ವಯಸ್ಸು 40 ವರ್ಷ ಎಂದು ಗುರುತಿಸಲಾಗಿದೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?


ಇದನ್ನೂ ಓದಿ: ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...