Homeಕರ್ನಾಟಕಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

ಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

ಇಂದು ಪ್ರತಿಭಟನೆ ಮಾಡಲು ಆಯಾ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಅಲ್ಲಲ್ಲಿಯೇ ಬಲವಂತವಾಗಿ ತಡೆದು, ಬಂಧಿಸಲಾಗಿದೆ.

- Advertisement -
- Advertisement -

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಆದರೆ ಪ್ರತಿಭಟನೆಗೆ ಪೊಲೀಸರು ಅಡ್ಡಿ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ತೆರಳಿದ್ದ ಆಶಾ ಕಾರ್ಯಕರ್ತರನ್ನು ತುಮಕೂರು, ಮಂಡ್ಯ, ಮದ್ದೂರಿನಲ್ಲಿ ತಡೆಹಿಡಿಯಲಾಗಿದೆ ಎಂದು ದೂರಿದ್ದಾರೆ.

12,000 ರೂ. ಮಾಸಿಕ ಗೌರವಧನ ನಿಗದಿ, ಬಾಕಿಯಿರುವ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಆರಂಭಿಸಿರುವ ಆಶಾ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದರೆ ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಹತ್ತಿಕ್ಕುತ್ತಿದೆ ಎಂದು ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘವು ಪ್ರತಿಭಟನೆಯ ನೇತೃತ್ವ ವಹಿಸಿದೆ. ಜುಲೈನಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ನೀಡಿದ್ದ ಭರವಸೆಗಳು ಈಡೇರದ ಕಾರಣ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?


“ನಮ್ಮನ್ನು ಸಾಂಕ್ರಾಮಿಕ ರೋಗದ ಮುಂಚೂಣಿಯ ಯೋಧರು ಎಂದು ಕರೆಯಲಾಗುತ್ತದೆ. ಆದರೆ ಯಾವುದೇ ಸುರಕ್ಷತೆಯಿಲ್ಲದೆ ಕರ್ತವ್ಯಕ್ಕೆ ಹೋಗುತ್ತಿದ್ದೇವೆ. ನಮಗೆ ಪಿಪಿಇ ಕಿಟ್‌ಗಳು ಬೇಕು. ಕನಿಷ್ಠ 12,000 ರೂ.ಗಳ ಸ್ಥಿರ ವೇತನವನ್ನು ನಾವು ಕೋರುತ್ತಿದ್ದೇವೆ. ಆದರೆ ಸರ್ಕಾರ ಸ್ಪಂದಿಸಿಲ್ಲ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರ ಅಳಲು

ಎಷ್ಟು ಹೋರಾಡಿದರೂ ನಮ್ಮತ್ತ ತಿರುಗಿ ನೋಡದ ಸರ್ಕಾರ.. ನೀವಾದರೂ ನಮ್ಮೊಡನೆ ದನಿಯೆತ್ತಿ

Posted by Naanu Gauri on Wednesday, September 23, 2020

“ಪ್ರಸ್ತುತ ಆಶಾ ಕಾರ್ಯಕರ್ತರಿಗೆ ಮಾಸಿಕ 6,000 ರೂ.ಗಳ ಗೌರವಧನ ನೀಡಲಾಗುತ್ತಿದೆ. ಕೊರೊನಾ ಸಾಂಕ್ರಮಿಕ ಪ್ರಾರಂಭವಾದಾಗ ಸರ್ಕಾರ 3 ಸಾವಿರ ರೂ. ಗಳ ಪ್ರೋತ್ಸಾಹ ಧನ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಇದುವರೆಗೂ ನೀಡಿಲ್ಲ. ನಮ್ಮನ್ನು ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಎಂದು ಹೆಸರಿಗೆ ಕರೆದು ನಮಗಾಗಿ ಚಪ್ಪಾಳೆ ತಟ್ಟಿದ್ದು ಮಾತ್ರವೇ ಬಂತು. ಆದರೆ ಸರ್ಕಾರ ನಮ್ಮ ಯಾವ ಬೇಡಿಕೆಯನ್ನು ಈಡೇರಿಸದೇ ಸಂಕಷ್ಟಕ್ಕೆ ನೂಕಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಾ.ನಾಗಲಕ್ಷ್ಮಿ ಹೇಳಿದ್ದಾರೆ

ಆಶಾ ಕಾರ್ಯಕರ್ತೆಯರ ವೇತನವನ್ನು 12 ಸಾವಿರಕ್ಕೆ ಹೆಚ್ಚಳ ಮಾಡಿ ಎಂಬ ಬೇಡಿಕೆಯೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಿನ್ನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದೆ. ಇಂದು ಜಿಲ್ಲಾ ಘಟಕಗಳ ಮುಖಂಡರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಇಂದು ಪ್ರತಿಭಟನೆ ಮಾಡಲು ಆಯಾ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಅಲ್ಲಲ್ಲಿಯೇ ಬಲವಂತವಾಗಿ ತಡೆದು, ಬಂಧನದ ಭೀತಿಯನ್ನು ಸರ್ಕಾರ ಒಡ್ಡುತ್ತಿದೆ. ಇದೇ ಏನು ಸರ್ಕಾರದ ಧೋರಣೆ. ಥೂ, ನಾಚಿಕೆಯಾಗಬೇಕು ಈ ಸರ್ಕಾರಕ್ಕೆ” ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಕಾರ್ಯದರ್ಶಿಗಳಾದ ಕೆ.ಉಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಸರ್ಕಾರದ ವಿರುದ್ಧ ಗುಡುಗಿದ ಆಶಾ ಕಾರ್ಯಕರ್ತರು: ನಾಳೆ ಬೆಂಗಳೂರು ಚಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...