Homeಕರ್ನಾಟಕಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

ಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

ಇಂದು ಪ್ರತಿಭಟನೆ ಮಾಡಲು ಆಯಾ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಅಲ್ಲಲ್ಲಿಯೇ ಬಲವಂತವಾಗಿ ತಡೆದು, ಬಂಧಿಸಲಾಗಿದೆ.

- Advertisement -
- Advertisement -

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಆದರೆ ಪ್ರತಿಭಟನೆಗೆ ಪೊಲೀಸರು ಅಡ್ಡಿ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ತೆರಳಿದ್ದ ಆಶಾ ಕಾರ್ಯಕರ್ತರನ್ನು ತುಮಕೂರು, ಮಂಡ್ಯ, ಮದ್ದೂರಿನಲ್ಲಿ ತಡೆಹಿಡಿಯಲಾಗಿದೆ ಎಂದು ದೂರಿದ್ದಾರೆ.

12,000 ರೂ. ಮಾಸಿಕ ಗೌರವಧನ ನಿಗದಿ, ಬಾಕಿಯಿರುವ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಆರಂಭಿಸಿರುವ ಆಶಾ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದರೆ ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಹತ್ತಿಕ್ಕುತ್ತಿದೆ ಎಂದು ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘವು ಪ್ರತಿಭಟನೆಯ ನೇತೃತ್ವ ವಹಿಸಿದೆ. ಜುಲೈನಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ನೀಡಿದ್ದ ಭರವಸೆಗಳು ಈಡೇರದ ಕಾರಣ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?


“ನಮ್ಮನ್ನು ಸಾಂಕ್ರಾಮಿಕ ರೋಗದ ಮುಂಚೂಣಿಯ ಯೋಧರು ಎಂದು ಕರೆಯಲಾಗುತ್ತದೆ. ಆದರೆ ಯಾವುದೇ ಸುರಕ್ಷತೆಯಿಲ್ಲದೆ ಕರ್ತವ್ಯಕ್ಕೆ ಹೋಗುತ್ತಿದ್ದೇವೆ. ನಮಗೆ ಪಿಪಿಇ ಕಿಟ್‌ಗಳು ಬೇಕು. ಕನಿಷ್ಠ 12,000 ರೂ.ಗಳ ಸ್ಥಿರ ವೇತನವನ್ನು ನಾವು ಕೋರುತ್ತಿದ್ದೇವೆ. ಆದರೆ ಸರ್ಕಾರ ಸ್ಪಂದಿಸಿಲ್ಲ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರ ಅಳಲು

ಎಷ್ಟು ಹೋರಾಡಿದರೂ ನಮ್ಮತ್ತ ತಿರುಗಿ ನೋಡದ ಸರ್ಕಾರ.. ನೀವಾದರೂ ನಮ್ಮೊಡನೆ ದನಿಯೆತ್ತಿ

Posted by Naanu Gauri on Wednesday, September 23, 2020

“ಪ್ರಸ್ತುತ ಆಶಾ ಕಾರ್ಯಕರ್ತರಿಗೆ ಮಾಸಿಕ 6,000 ರೂ.ಗಳ ಗೌರವಧನ ನೀಡಲಾಗುತ್ತಿದೆ. ಕೊರೊನಾ ಸಾಂಕ್ರಮಿಕ ಪ್ರಾರಂಭವಾದಾಗ ಸರ್ಕಾರ 3 ಸಾವಿರ ರೂ. ಗಳ ಪ್ರೋತ್ಸಾಹ ಧನ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಇದುವರೆಗೂ ನೀಡಿಲ್ಲ. ನಮ್ಮನ್ನು ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಎಂದು ಹೆಸರಿಗೆ ಕರೆದು ನಮಗಾಗಿ ಚಪ್ಪಾಳೆ ತಟ್ಟಿದ್ದು ಮಾತ್ರವೇ ಬಂತು. ಆದರೆ ಸರ್ಕಾರ ನಮ್ಮ ಯಾವ ಬೇಡಿಕೆಯನ್ನು ಈಡೇರಿಸದೇ ಸಂಕಷ್ಟಕ್ಕೆ ನೂಕಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಾ.ನಾಗಲಕ್ಷ್ಮಿ ಹೇಳಿದ್ದಾರೆ

ಆಶಾ ಕಾರ್ಯಕರ್ತೆಯರ ವೇತನವನ್ನು 12 ಸಾವಿರಕ್ಕೆ ಹೆಚ್ಚಳ ಮಾಡಿ ಎಂಬ ಬೇಡಿಕೆಯೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಿನ್ನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದೆ. ಇಂದು ಜಿಲ್ಲಾ ಘಟಕಗಳ ಮುಖಂಡರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಇಂದು ಪ್ರತಿಭಟನೆ ಮಾಡಲು ಆಯಾ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಅಲ್ಲಲ್ಲಿಯೇ ಬಲವಂತವಾಗಿ ತಡೆದು, ಬಂಧನದ ಭೀತಿಯನ್ನು ಸರ್ಕಾರ ಒಡ್ಡುತ್ತಿದೆ. ಇದೇ ಏನು ಸರ್ಕಾರದ ಧೋರಣೆ. ಥೂ, ನಾಚಿಕೆಯಾಗಬೇಕು ಈ ಸರ್ಕಾರಕ್ಕೆ” ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಕಾರ್ಯದರ್ಶಿಗಳಾದ ಕೆ.ಉಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಸರ್ಕಾರದ ವಿರುದ್ಧ ಗುಡುಗಿದ ಆಶಾ ಕಾರ್ಯಕರ್ತರು: ನಾಳೆ ಬೆಂಗಳೂರು ಚಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...