Homeಕರ್ನಾಟಕಉತ್ತರ ಕನ್ನಡ: ವಿಭಿನ್ನ ಜನ - ಜಾತಿ: ವೈವಿದ್ಯ ಭಾಷೆ

ಉತ್ತರ ಕನ್ನಡ: ವಿಭಿನ್ನ ಜನ – ಜಾತಿ: ವೈವಿದ್ಯ ಭಾಷೆ

ಬುಡಕಟ್ಟು ಹಾಲಕ್ಕಿ ಒಕ್ಕಲಿಗರ ಕನ್ನಡದಲ್ಲಿ ನೆಲಮೂಲದ ಸಂಸ್ಕೃತಿಯ ಧ್ವನಿಯಿದೆ. ಮುಗ್ಧತೆ-ನಿಯತ್ತು ಮತ್ತು ಶ್ರಮ ಸಂಸ್ಕೃತಿಯ ಈ ಜನಾಂಗ ಉತ್ತರ ಕನ್ನಡದ ಕರಾವಳಿಗುಂಟದ ಕಾಡಿನಂಚಿನಲ್ಲಿ ಹೆಚ್ಚಿದೆ.

- Advertisement -
- Advertisement -

ಭೋರ್ಗರೆವ ಅರಬ್ಬೀಸಮುದ್ರಕ್ಕೆ ಸಮಾನಾಂತರವಾಗಿ ಹಬ್ಬಿರುವ ಹಸಿರು ಸಹ್ಯಾದ್ರಿಗಿರಿ ಶ್ರೇಣಿಯ ಮಡಿಲಲ್ಲಿರುವ ಉತ್ತರಕನ್ನಡ ಅಸಂಖ್ಯ ಜನ, ಜಾತಿ ಮತ್ತು ವೈವಿಧ್ಯಮಯ ಭಾಷೆಯ ನೆಲೆವೀಡು. ಅನನ್ಯ ಪ್ರಕೃತಿ ಸೊಬಗು ಮತ್ತು ಅಪಾರ ನೈಸರ್ಗಿಕ ಸಂಪತ್ತಿನ ಈ ಜಿಲ್ಲೆ ಭೌಗೋಳಿಕವಾಗಿಯೂ ವಿಭಿನ್ನ. ಕರಾವಳಿ, ಮಲೆನಾಡು ಮತ್ತು ಅರೆಬಯಲು ಸೀಮೆ ಪ್ರದೇಶದ ಉತ್ತರ ಕನ್ನಡದಲ್ಲಿರುವಷ್ಟು ಜಾತಿ-ಜನಾಂಗ ಹಾಗೂ ಭಾಷೆ ಬಹುಶಃ ದೇಶದ ಬೇರೆಲ್ಲಿಯೂ ಕಾಣಿಸದೆಂಬ ವಾದವೂ ಇದೆ. ಬರೋಬ್ಬರಿ ನಾಲ್ಕು ಗೋವಾ ರಾಜ್ಯಕ್ಕೆ ಸಮನಾಗಿರುವ ಉತ್ತರ ಕನ್ನಡದಲ್ಲಿ ಹದಿನೈದೂವರೆ ಲಕ್ಷದಷ್ಟು ಜನಸಂಖ್ಯೆಯಿದೆ.

ಒಂದು ಅಂದಾಜಿನಂತೆ ಶೇಕಡಾ 55.50ರಷ್ಟು ಮಂದಿಗೆ ಕನ್ನಡ ಮಾತೃಭಾಷೆ. ಕೊಂಕಣಿಯನ್ನು ಶೇ.20ರಷ್ಟು ಜನರಾಡುತ್ತಾರೆ. ಶೇ.11.83ರಷ್ಟು ಜನರದು ಉರ್ದುದಲ್ಲಿ ಸಂವಹನ ನಡೆಸುತ್ತಾರೆ. ನವಾಯಿತಿ, ತೆಲಗು, ಲಂಬಾಣಿ, ಬ್ಯಾರಿ, ಗುಜರಾತಿ ಭಾಷೆಯವರೂ ಇಲ್ಲಿದ್ದಾರೆ. ಕನ್ನಡ ಮತ್ತು ಕೊಂಕಣಿ ಎರಡು ಪ್ರಮುಖ ಭಾಷೆ. ಈ ಎರಡೂ ಭಾಷೆಯಲ್ಲಿ ವ್ಯವಹರಿಸುವ ಒಂದೊಂದು ಜಾತಿಯದು ಒಂದೊಂದು ಧ್ವನಿ-ಶೈಲಿ. ಮೇಲ್ವರ್ಗದ ಬ್ರಾಹ್ಮಣರು ಮತ್ತು ಕೊಂಕಣಿಗರು ಬಳಸುವ ಕನ್ನಡ ಹಾಗೂ ಕೊಂಕಣಿ ಶಿಷ್ಟ ಭಾಷೆ ಎನ್ನುವವರು. ಹಿಂದುಳಿದವರು-ಬುಡಕಟ್ಟು ಜನಾಂಗದವರು ಆಡುವ ಕನ್ನಡ-ಕೊಂಕಣಿಯನ್ನು ಕಚ್ಚಾ ಅಂತಾರೆ. ಇದು ಪುರೋಹಿತಶಾಹಿ ಪರಿಕಲ್ಪನೆಯ ಕುತರ್ಕ. ಒಟ್ಟಿನಲ್ಲಿ ಉತ್ತರ ಕನ್ನಡ ನಾನಾ ನಮೂನೆಯ ಕೊಂಕಣಿ-ಕನ್ನಡಕ್ಕೆ ಅದರದೇ ಆದ ಸೊಗಡು-ಪ್ರಬಲ ಸಂವಹನ ಶಕ್ತಿಯಿದೆ! ಕುಲಶಾಸ್ತ್ರೀಯ ತತ್ವವಿದೆ!!

ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕಲ್ಲಿ ಪಕ್ಕದ ಗೋವಾದ ಕೊಂಕಣಿ ಪ್ರಭಾವವಿದೆ. ಇವತ್ತಿಗೂ ಜಿಲ್ಲಾಕೇಂದ್ರ ಕಾರವಾರದಲ್ಲಿ ಕೊಂಕಣಿಯೇ ಪ್ರಮುಖ ವ್ಯಾವಹಾರಿಕ ಮತ್ತು ಮನೆ ಭಾಷೆ. ಕನ್ನಡ ಅರ್ಥವಾಗದವರೂ ಇಲ್ಲಿದ್ದಾರೆ. ಜೋಯಿಡಾದ ಕಾಡು-ಮೇಡುಗಳ ಬುಡಕಟ್ಟು ಗೌಳಿ-ಕಣವಿ-ಕುಂಬ್ರಿ ಮರಾಠಿಗಳಲ್ಲಿ ಕನ್ನಡದ ಪರಿಚಯ ಇಲ್ಲದವರಿದ್ದಾರೆ. ಕನ್ನಡ ಅಭಿವೃದ್ಧಿ ಮಂಡಳಿ, ಗಡಿ ಅಭಿವೃದ್ಧಿ ಮಂಡಳಿಗಳ ಪ್ರಭೃತಿಗಳಿಂದಲೂ ಇವರಿಗೆಲ್ಲಾ ಕನ್ನಡ ಕಲಿಸಲಾಗಿಲ್ಲ ಎಂಬುದು ದೊಡ್ಡ ದುರಂತ. ಕರಾವಳಿ ಮತ್ತು ಘಟ್ಟದ ಮೇಲಿನ ಹವ್ಯಕರ ಭಾಷೆಯಲ್ಲಿ ಸಣ್ಣ ವ್ಯತ್ಯಾಸವಿದೆ. ಆದರೆ ಘಟ್ಟದ ಬ್ರಾಹ್ಮಣರ ಕನ್ನಡ, ನಾಡವರ ಕನ್ನಡದಷ್ಟೇ ಕಸುವು. ಬುಡಕಟ್ಟು, ಹಾಲಕ್ಕಿ ಒಕ್ಕಲಿಗರ, ದಲಿತ ಮುಕ್ರಿಗಳ ಕನ್ನಡಕ್ಕೂ ವ್ಯತ್ಯಾಸವಿದೆ. ಘಟ್ಟದ ಕೆಳಗಿನ ಹಾಗೂ ಘಟ್ಟದ ಮೇಲಿನ ದೀವರ ಭಾಷೆಯಲ್ಲೂ ಪ್ರತ್ಯೇಕ “ಧ್ವನಿ”ಗಳಿವೆ. ಸೇರುಗಾರ, ಸೊನಗಾರ, ಭಂಡಾರಿ, ಕೊಂಕಣಿ ಮರಾಠ, ಕೋಮಾರಪಂತ… ಹೀಗೆ ಬೇರೆ ಬೇರೆ ಜಾತಿಯವರ ಕೊಂಕಣಿ ಬಳಕೆಯಲ್ಲಿ ವಿಭಿನ್ನತೆಯಿದೆ. ಶಬ್ದಗಳಲ್ಲೂ ವ್ಯತ್ಯಾಸವಿದೆ; ಆಡುವ ಶೈಲಿಯಲ್ಲಿ ಬದಲಾವಣೆಯಿದೆ.

ಕ್ರಿಶ್ಚಿಯನ್ ಕೊಂಕಣಿಯ ಛಾಪು ವಿಶಿಷ್ಟ. ಆ ಭಾಷೆ ಕೇಳಿದಾಕ್ಷಣವೇ ಕ್ರಿಶ್ಚಿಯನ್ನರನ್ನು ಗುರುತಿಸಿಬಿಡಬಹುದು. ಮುಸ್ಲಿಮರು ಉರ್ದು ಮಾತಾಡಿದರೆ, ಭಟ್ಕಳ ಮತ್ತು ಹೊನ್ನಾವರದ ಹೊಳೆಸಾಲಿನಲ್ಲಿರುವ ನವಾಯತ ಮುಸ್ಲಿಮರು “ನವಾಯಿತಿ” ಮಾತಾಡುತ್ತಾರೆ. ಇದು ಕೊಂಕಣಿಮಿಶ್ರಿತ ಭಾಷೆ. ಕೇರಳ-ಮಂಗಳೂರು ಕಡೆಯಿಂದ ವಲಸೆಬಂದ ಬ್ಯಾರಿಗಳೂ ಕರಾವಳಿಯಲ್ಲಿದ್ದಾರೆ. ಉತ್ತರ ಕನ್ನಡದಲ್ಲಿ ಬೇರೆ-ಬೇರೆ ಜನಾಂಗದವರು ವ್ಯವಹರಿಸುವ ಭಾಷೆ ಮೇಲಿಂದಲೇ ಆ ಜಾತಿ ಹೆಸರೇಳಿ ಬಿಡಲಾಗುತ್ತಿದೆ. ಉದಾ: ಗೌಡಸಾರಸ್ವತ ಬ್ರಾಹ್ಮಣ(ಜಿಎಸ್‍ಬಿ)ಗಳದು ಒಂಥರಾ ಪಾಲಿಶ್ಡ್ ಕೊಂಕಣಿಯಾದರೆ ಬುಡಕಟ್ಟು ಕುಂಬ್ರಿ ಮರಾಠಿಗಳದು ಅವರಿಗಷ್ಟೇ ಅರ್ಥವಾಗಬಲ್ಲಷ್ಟು ಸಂಕೀರ್ಣವಾಗಿದೆ.

ಬುಡಕಟ್ಟು ಹಾಲಕ್ಕಿ ಒಕ್ಕಲಿಗರ ಕನ್ನಡದಲ್ಲಿ ನೆಲಮೂಲದ ಸಂಸ್ಕೃತಿಯ ಧ್ವನಿಯಿದೆ. ಮುಗ್ಧತೆ-ನಿಯತ್ತು ಮತ್ತು ಶ್ರಮ ಸಂಸ್ಕೃತಿಯ ಈ ಜನಾಂಗ ಉತ್ತರ ಕನ್ನಡದ ಕರಾವಳಿಗುಂಟದ ಕಾಡಿನಂಚಿನಲ್ಲಿ ಹೆಚ್ಚಿದೆ. ಇವರ ಉಡುಗೆ-ತೊಡುಗೆ-ಸಂಪ್ರದಾಯದಂತೆಯೇ ಮಾತುಗಾರಿಕೆಯಲ್ಲೂ ವಿಶಿಷ್ಟತೆಯಿದೆ. ಜಿಲ್ಲೆಯ ಮಲೆನಾಡಿನ ಭಾಗದಲ್ಲಿರುವ ಗೌಳಿಗರು ಗೋವಾ-ಮಹಾರಾಷ್ಟ್ರ ಗಡಿಯ ರತ್ನಗಿರಿ ಮೂಲದವರು. ಹೀಗಾಗಿ ಈ ಜನಾಂಗದ ಭಾಷೆಯಲ್ಲಿ ಕೊಂಕಣಿ ಜತೆಗೆ ಮರಾಠಿ ಬೆರೆತಿದೆ. ಆದರೆ ಕುಣಬಿ, ಕುಂಬ್ರಿ ಮರಾಠಿ ಸಮುದಾಯದ್ದು ಅವರದೇ ಆದ ಕೊಂಕಣಿ. ಸಿದ್ದಿ ಜನಾಂಗವೂ ಕುಣಬಿಗಳಂತೆ ಗೋವಾ ಕಡೆಯಿಂದ ಉತ್ತರಕನ್ನಡದ ಕಾಡುಮೇಡು ಸೇರಿಕೊಂಡಿದೆ. ಈ ಸಿದ್ದಿಗಳಲ್ಲಿ ಹಿಂದೂ, ಮುಸ್ಲಿಮ್, ಕ್ರಿಶ್ಚಿಯನ್ ಎಂಬ ವರ್ಗವಿದೆ. ಹೆಚ್ಚಿನವರದು ಕೊಂಕಣಿ ಆಡುಭಾಷೆ. ಆದರೆ ಹಿಂದೂಗಳಲ್ಲಿ ಕನ್ನಡ, ಕ್ರಿಶ್ಚಿಯನ್ನರಲ್ಲಿ ಕೊಂಕಣಿ ಮತ್ತು ಮುಸ್ಲಿಮರಲ್ಲಿ ಉರ್ದು ಪ್ರಭಾವ ಜಾಸ್ತಿ.

ಕುಂಬ್ರಿ ಮರಾಠಿಗರು ವ್ಯವಸಾಯಗಾರರು. ಗೌಳಿ-ಕುಣಬಿಗಳು ಹೈನುಗಾರಿಕೆ ಮೇಲೆ ಅವಲಂಬಿಸಿದ್ದಾರೆ. ಸಿದ್ದಿಗಳು ಕೃಷಿಕ ಕೃಷಿ ಕೂಲಿಯಾಗಿ ದುಡಿಯುತ್ತಿದ್ದಾರೆ. ಅವರ ಕಸುಬು ಬದುಕಿನ ಸಂಪ್ರದಾಯವೂ ಭಾಷೆಯನ್ನು ಪ್ರಭಾವಿಸಿದೆ. ಗೋಕರ್ಣದಲ್ಲಿ ವಲಸಿಗ ಬ್ರಾಹ್ಮಣರಿದ್ದಾರೆ. ಮರಾಠೀ ಬ್ರಾಹ್ಮಣರು ಮತ್ತು ಕೋಟಬ್ರಾಹ್ಮಣರು ಗೋಕರ್ಣ ಮಹಾಬಲೇಶ್ವರನ ಪೂಜೆ-ಪೌರೋಹಿತ್ಯ ಮಾಡಿಕೊಂಡು ಬದುಕುತ್ತಿದ್ದಾರೆ. ಮರಾಠಿ ಬ್ರಾಹ್ಮಣರ ಆಡುಭಾಷೆ ಮರಾಠಿಯಾದರೆ, ಕೋಟ ಬ್ರಾಹ್ಮಣರದು ಕನ್ನಡ. ಮಹಾರಾಷ್ಟ್ರ ಮೂಲದ “ಜೋಗಳೇಕರ್” ಎಂಬ ಮರಾಠಿ ಬ್ರಾಹ್ಮಣರು ಸುಮಾರು 80 ವರ್ಷದಿಂದ ಪಾತ್ರೆ-ಪಗಡೆ ಮಾರಾಟ ಮಾಡುತ್ತ ಇಲ್ಲೇ ನೆಲೆನಿಂತಿದೆ. ಉತ್ತರ ಕನ್ನಡದಲ್ಲಿನ ಅಸಂಖ್ಯ ಜಾತಿ-ಜನಾಂಗದಂತೆ ಅದರ ಭಾಷೆ-ಸಂಸ್ಕೃತಿ ಸಂಪ್ರದಾಯವೂ ಬೆರಗು ಹುಟ್ಟಿಸುವಂತದ್ದು.


ಇದನ್ನು ಓದಿ: ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...