Homeಕರ್ನಾಟಕಉತ್ತರ ಕನ್ನಡ: ವಿಭಿನ್ನ ಜನ - ಜಾತಿ: ವೈವಿದ್ಯ ಭಾಷೆ

ಉತ್ತರ ಕನ್ನಡ: ವಿಭಿನ್ನ ಜನ – ಜಾತಿ: ವೈವಿದ್ಯ ಭಾಷೆ

ಬುಡಕಟ್ಟು ಹಾಲಕ್ಕಿ ಒಕ್ಕಲಿಗರ ಕನ್ನಡದಲ್ಲಿ ನೆಲಮೂಲದ ಸಂಸ್ಕೃತಿಯ ಧ್ವನಿಯಿದೆ. ಮುಗ್ಧತೆ-ನಿಯತ್ತು ಮತ್ತು ಶ್ರಮ ಸಂಸ್ಕೃತಿಯ ಈ ಜನಾಂಗ ಉತ್ತರ ಕನ್ನಡದ ಕರಾವಳಿಗುಂಟದ ಕಾಡಿನಂಚಿನಲ್ಲಿ ಹೆಚ್ಚಿದೆ.

- Advertisement -
- Advertisement -

ಭೋರ್ಗರೆವ ಅರಬ್ಬೀಸಮುದ್ರಕ್ಕೆ ಸಮಾನಾಂತರವಾಗಿ ಹಬ್ಬಿರುವ ಹಸಿರು ಸಹ್ಯಾದ್ರಿಗಿರಿ ಶ್ರೇಣಿಯ ಮಡಿಲಲ್ಲಿರುವ ಉತ್ತರಕನ್ನಡ ಅಸಂಖ್ಯ ಜನ, ಜಾತಿ ಮತ್ತು ವೈವಿಧ್ಯಮಯ ಭಾಷೆಯ ನೆಲೆವೀಡು. ಅನನ್ಯ ಪ್ರಕೃತಿ ಸೊಬಗು ಮತ್ತು ಅಪಾರ ನೈಸರ್ಗಿಕ ಸಂಪತ್ತಿನ ಈ ಜಿಲ್ಲೆ ಭೌಗೋಳಿಕವಾಗಿಯೂ ವಿಭಿನ್ನ. ಕರಾವಳಿ, ಮಲೆನಾಡು ಮತ್ತು ಅರೆಬಯಲು ಸೀಮೆ ಪ್ರದೇಶದ ಉತ್ತರ ಕನ್ನಡದಲ್ಲಿರುವಷ್ಟು ಜಾತಿ-ಜನಾಂಗ ಹಾಗೂ ಭಾಷೆ ಬಹುಶಃ ದೇಶದ ಬೇರೆಲ್ಲಿಯೂ ಕಾಣಿಸದೆಂಬ ವಾದವೂ ಇದೆ. ಬರೋಬ್ಬರಿ ನಾಲ್ಕು ಗೋವಾ ರಾಜ್ಯಕ್ಕೆ ಸಮನಾಗಿರುವ ಉತ್ತರ ಕನ್ನಡದಲ್ಲಿ ಹದಿನೈದೂವರೆ ಲಕ್ಷದಷ್ಟು ಜನಸಂಖ್ಯೆಯಿದೆ.

ಒಂದು ಅಂದಾಜಿನಂತೆ ಶೇಕಡಾ 55.50ರಷ್ಟು ಮಂದಿಗೆ ಕನ್ನಡ ಮಾತೃಭಾಷೆ. ಕೊಂಕಣಿಯನ್ನು ಶೇ.20ರಷ್ಟು ಜನರಾಡುತ್ತಾರೆ. ಶೇ.11.83ರಷ್ಟು ಜನರದು ಉರ್ದುದಲ್ಲಿ ಸಂವಹನ ನಡೆಸುತ್ತಾರೆ. ನವಾಯಿತಿ, ತೆಲಗು, ಲಂಬಾಣಿ, ಬ್ಯಾರಿ, ಗುಜರಾತಿ ಭಾಷೆಯವರೂ ಇಲ್ಲಿದ್ದಾರೆ. ಕನ್ನಡ ಮತ್ತು ಕೊಂಕಣಿ ಎರಡು ಪ್ರಮುಖ ಭಾಷೆ. ಈ ಎರಡೂ ಭಾಷೆಯಲ್ಲಿ ವ್ಯವಹರಿಸುವ ಒಂದೊಂದು ಜಾತಿಯದು ಒಂದೊಂದು ಧ್ವನಿ-ಶೈಲಿ. ಮೇಲ್ವರ್ಗದ ಬ್ರಾಹ್ಮಣರು ಮತ್ತು ಕೊಂಕಣಿಗರು ಬಳಸುವ ಕನ್ನಡ ಹಾಗೂ ಕೊಂಕಣಿ ಶಿಷ್ಟ ಭಾಷೆ ಎನ್ನುವವರು. ಹಿಂದುಳಿದವರು-ಬುಡಕಟ್ಟು ಜನಾಂಗದವರು ಆಡುವ ಕನ್ನಡ-ಕೊಂಕಣಿಯನ್ನು ಕಚ್ಚಾ ಅಂತಾರೆ. ಇದು ಪುರೋಹಿತಶಾಹಿ ಪರಿಕಲ್ಪನೆಯ ಕುತರ್ಕ. ಒಟ್ಟಿನಲ್ಲಿ ಉತ್ತರ ಕನ್ನಡ ನಾನಾ ನಮೂನೆಯ ಕೊಂಕಣಿ-ಕನ್ನಡಕ್ಕೆ ಅದರದೇ ಆದ ಸೊಗಡು-ಪ್ರಬಲ ಸಂವಹನ ಶಕ್ತಿಯಿದೆ! ಕುಲಶಾಸ್ತ್ರೀಯ ತತ್ವವಿದೆ!!

ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕಲ್ಲಿ ಪಕ್ಕದ ಗೋವಾದ ಕೊಂಕಣಿ ಪ್ರಭಾವವಿದೆ. ಇವತ್ತಿಗೂ ಜಿಲ್ಲಾಕೇಂದ್ರ ಕಾರವಾರದಲ್ಲಿ ಕೊಂಕಣಿಯೇ ಪ್ರಮುಖ ವ್ಯಾವಹಾರಿಕ ಮತ್ತು ಮನೆ ಭಾಷೆ. ಕನ್ನಡ ಅರ್ಥವಾಗದವರೂ ಇಲ್ಲಿದ್ದಾರೆ. ಜೋಯಿಡಾದ ಕಾಡು-ಮೇಡುಗಳ ಬುಡಕಟ್ಟು ಗೌಳಿ-ಕಣವಿ-ಕುಂಬ್ರಿ ಮರಾಠಿಗಳಲ್ಲಿ ಕನ್ನಡದ ಪರಿಚಯ ಇಲ್ಲದವರಿದ್ದಾರೆ. ಕನ್ನಡ ಅಭಿವೃದ್ಧಿ ಮಂಡಳಿ, ಗಡಿ ಅಭಿವೃದ್ಧಿ ಮಂಡಳಿಗಳ ಪ್ರಭೃತಿಗಳಿಂದಲೂ ಇವರಿಗೆಲ್ಲಾ ಕನ್ನಡ ಕಲಿಸಲಾಗಿಲ್ಲ ಎಂಬುದು ದೊಡ್ಡ ದುರಂತ. ಕರಾವಳಿ ಮತ್ತು ಘಟ್ಟದ ಮೇಲಿನ ಹವ್ಯಕರ ಭಾಷೆಯಲ್ಲಿ ಸಣ್ಣ ವ್ಯತ್ಯಾಸವಿದೆ. ಆದರೆ ಘಟ್ಟದ ಬ್ರಾಹ್ಮಣರ ಕನ್ನಡ, ನಾಡವರ ಕನ್ನಡದಷ್ಟೇ ಕಸುವು. ಬುಡಕಟ್ಟು, ಹಾಲಕ್ಕಿ ಒಕ್ಕಲಿಗರ, ದಲಿತ ಮುಕ್ರಿಗಳ ಕನ್ನಡಕ್ಕೂ ವ್ಯತ್ಯಾಸವಿದೆ. ಘಟ್ಟದ ಕೆಳಗಿನ ಹಾಗೂ ಘಟ್ಟದ ಮೇಲಿನ ದೀವರ ಭಾಷೆಯಲ್ಲೂ ಪ್ರತ್ಯೇಕ “ಧ್ವನಿ”ಗಳಿವೆ. ಸೇರುಗಾರ, ಸೊನಗಾರ, ಭಂಡಾರಿ, ಕೊಂಕಣಿ ಮರಾಠ, ಕೋಮಾರಪಂತ… ಹೀಗೆ ಬೇರೆ ಬೇರೆ ಜಾತಿಯವರ ಕೊಂಕಣಿ ಬಳಕೆಯಲ್ಲಿ ವಿಭಿನ್ನತೆಯಿದೆ. ಶಬ್ದಗಳಲ್ಲೂ ವ್ಯತ್ಯಾಸವಿದೆ; ಆಡುವ ಶೈಲಿಯಲ್ಲಿ ಬದಲಾವಣೆಯಿದೆ.

ಕ್ರಿಶ್ಚಿಯನ್ ಕೊಂಕಣಿಯ ಛಾಪು ವಿಶಿಷ್ಟ. ಆ ಭಾಷೆ ಕೇಳಿದಾಕ್ಷಣವೇ ಕ್ರಿಶ್ಚಿಯನ್ನರನ್ನು ಗುರುತಿಸಿಬಿಡಬಹುದು. ಮುಸ್ಲಿಮರು ಉರ್ದು ಮಾತಾಡಿದರೆ, ಭಟ್ಕಳ ಮತ್ತು ಹೊನ್ನಾವರದ ಹೊಳೆಸಾಲಿನಲ್ಲಿರುವ ನವಾಯತ ಮುಸ್ಲಿಮರು “ನವಾಯಿತಿ” ಮಾತಾಡುತ್ತಾರೆ. ಇದು ಕೊಂಕಣಿಮಿಶ್ರಿತ ಭಾಷೆ. ಕೇರಳ-ಮಂಗಳೂರು ಕಡೆಯಿಂದ ವಲಸೆಬಂದ ಬ್ಯಾರಿಗಳೂ ಕರಾವಳಿಯಲ್ಲಿದ್ದಾರೆ. ಉತ್ತರ ಕನ್ನಡದಲ್ಲಿ ಬೇರೆ-ಬೇರೆ ಜನಾಂಗದವರು ವ್ಯವಹರಿಸುವ ಭಾಷೆ ಮೇಲಿಂದಲೇ ಆ ಜಾತಿ ಹೆಸರೇಳಿ ಬಿಡಲಾಗುತ್ತಿದೆ. ಉದಾ: ಗೌಡಸಾರಸ್ವತ ಬ್ರಾಹ್ಮಣ(ಜಿಎಸ್‍ಬಿ)ಗಳದು ಒಂಥರಾ ಪಾಲಿಶ್ಡ್ ಕೊಂಕಣಿಯಾದರೆ ಬುಡಕಟ್ಟು ಕುಂಬ್ರಿ ಮರಾಠಿಗಳದು ಅವರಿಗಷ್ಟೇ ಅರ್ಥವಾಗಬಲ್ಲಷ್ಟು ಸಂಕೀರ್ಣವಾಗಿದೆ.

ಬುಡಕಟ್ಟು ಹಾಲಕ್ಕಿ ಒಕ್ಕಲಿಗರ ಕನ್ನಡದಲ್ಲಿ ನೆಲಮೂಲದ ಸಂಸ್ಕೃತಿಯ ಧ್ವನಿಯಿದೆ. ಮುಗ್ಧತೆ-ನಿಯತ್ತು ಮತ್ತು ಶ್ರಮ ಸಂಸ್ಕೃತಿಯ ಈ ಜನಾಂಗ ಉತ್ತರ ಕನ್ನಡದ ಕರಾವಳಿಗುಂಟದ ಕಾಡಿನಂಚಿನಲ್ಲಿ ಹೆಚ್ಚಿದೆ. ಇವರ ಉಡುಗೆ-ತೊಡುಗೆ-ಸಂಪ್ರದಾಯದಂತೆಯೇ ಮಾತುಗಾರಿಕೆಯಲ್ಲೂ ವಿಶಿಷ್ಟತೆಯಿದೆ. ಜಿಲ್ಲೆಯ ಮಲೆನಾಡಿನ ಭಾಗದಲ್ಲಿರುವ ಗೌಳಿಗರು ಗೋವಾ-ಮಹಾರಾಷ್ಟ್ರ ಗಡಿಯ ರತ್ನಗಿರಿ ಮೂಲದವರು. ಹೀಗಾಗಿ ಈ ಜನಾಂಗದ ಭಾಷೆಯಲ್ಲಿ ಕೊಂಕಣಿ ಜತೆಗೆ ಮರಾಠಿ ಬೆರೆತಿದೆ. ಆದರೆ ಕುಣಬಿ, ಕುಂಬ್ರಿ ಮರಾಠಿ ಸಮುದಾಯದ್ದು ಅವರದೇ ಆದ ಕೊಂಕಣಿ. ಸಿದ್ದಿ ಜನಾಂಗವೂ ಕುಣಬಿಗಳಂತೆ ಗೋವಾ ಕಡೆಯಿಂದ ಉತ್ತರಕನ್ನಡದ ಕಾಡುಮೇಡು ಸೇರಿಕೊಂಡಿದೆ. ಈ ಸಿದ್ದಿಗಳಲ್ಲಿ ಹಿಂದೂ, ಮುಸ್ಲಿಮ್, ಕ್ರಿಶ್ಚಿಯನ್ ಎಂಬ ವರ್ಗವಿದೆ. ಹೆಚ್ಚಿನವರದು ಕೊಂಕಣಿ ಆಡುಭಾಷೆ. ಆದರೆ ಹಿಂದೂಗಳಲ್ಲಿ ಕನ್ನಡ, ಕ್ರಿಶ್ಚಿಯನ್ನರಲ್ಲಿ ಕೊಂಕಣಿ ಮತ್ತು ಮುಸ್ಲಿಮರಲ್ಲಿ ಉರ್ದು ಪ್ರಭಾವ ಜಾಸ್ತಿ.

ಕುಂಬ್ರಿ ಮರಾಠಿಗರು ವ್ಯವಸಾಯಗಾರರು. ಗೌಳಿ-ಕುಣಬಿಗಳು ಹೈನುಗಾರಿಕೆ ಮೇಲೆ ಅವಲಂಬಿಸಿದ್ದಾರೆ. ಸಿದ್ದಿಗಳು ಕೃಷಿಕ ಕೃಷಿ ಕೂಲಿಯಾಗಿ ದುಡಿಯುತ್ತಿದ್ದಾರೆ. ಅವರ ಕಸುಬು ಬದುಕಿನ ಸಂಪ್ರದಾಯವೂ ಭಾಷೆಯನ್ನು ಪ್ರಭಾವಿಸಿದೆ. ಗೋಕರ್ಣದಲ್ಲಿ ವಲಸಿಗ ಬ್ರಾಹ್ಮಣರಿದ್ದಾರೆ. ಮರಾಠೀ ಬ್ರಾಹ್ಮಣರು ಮತ್ತು ಕೋಟಬ್ರಾಹ್ಮಣರು ಗೋಕರ್ಣ ಮಹಾಬಲೇಶ್ವರನ ಪೂಜೆ-ಪೌರೋಹಿತ್ಯ ಮಾಡಿಕೊಂಡು ಬದುಕುತ್ತಿದ್ದಾರೆ. ಮರಾಠಿ ಬ್ರಾಹ್ಮಣರ ಆಡುಭಾಷೆ ಮರಾಠಿಯಾದರೆ, ಕೋಟ ಬ್ರಾಹ್ಮಣರದು ಕನ್ನಡ. ಮಹಾರಾಷ್ಟ್ರ ಮೂಲದ “ಜೋಗಳೇಕರ್” ಎಂಬ ಮರಾಠಿ ಬ್ರಾಹ್ಮಣರು ಸುಮಾರು 80 ವರ್ಷದಿಂದ ಪಾತ್ರೆ-ಪಗಡೆ ಮಾರಾಟ ಮಾಡುತ್ತ ಇಲ್ಲೇ ನೆಲೆನಿಂತಿದೆ. ಉತ್ತರ ಕನ್ನಡದಲ್ಲಿನ ಅಸಂಖ್ಯ ಜಾತಿ-ಜನಾಂಗದಂತೆ ಅದರ ಭಾಷೆ-ಸಂಸ್ಕೃತಿ ಸಂಪ್ರದಾಯವೂ ಬೆರಗು ಹುಟ್ಟಿಸುವಂತದ್ದು.


ಇದನ್ನು ಓದಿ: ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...