Homeಕರ್ನಾಟಕಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಆಗಿರುವ ವಿಜಯೇಂದ್ರ ಇಳಿದಿರುವುದು ಬಿಜೆಪಿಯ ಹೊಸ ಆಡಳಿತ ವೈಖರಿ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

”‘ನಾ ಖಾವುಂಗಾ ನಾ ಖಾನೆ ದೂಂಗಾ’ ಎನ್ನುತ್ತಲೇ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಘೋಷಣೆಯನ್ನು ‘ಮೈ ಖಾವುಂಗಾ ಔರ್ ಖಾನೆ ದೂಂಗಾ’ ಎಂದು ತಕ್ಷಣ ಬದಲಾಯಿಸಿಕೊಳ್ಳುವುದು ಒಳಿತು. ಈ ಭ್ರಷ್ಟಾಚಾರದ ಹಣದಲ್ಲಿ ತನ್ನ ಪಾಲೆಷ್ಟು ಎನ್ನುವುದನ್ನು ಕೂಡಾ ನರೇಂದ್ರ ಮೋದಿಯವರು ತಿಳಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

”ಅವೈಜ್ಞಾನಿಕ ಜಿಎಸ್‌ಟಿ ಮೂಲಕ ದೇಶದ ಜನರನ್ನು ಲೂಟಿ ಮಾಡುತ್ತಿರುವ ನರೇಂದ್ರಮೋದಿಯವರ ಜೊತೆ ಪೈಪೋಟಿಗೆ ಇಳಿದಿರುವ ಬಿಎಸ್‌ವೈ ಅವರು ತನ್ನ ಮಗ ವಿಜಯೇಂದ್ರನ ಮೂಲಕ ವಿಎಸ್‌ಟಿ (ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್) ಮೂಲಕ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

”ಮುಖ್ಯಮಂತ್ರಿಗಳ ಮಗ ಮತ್ತು ಮೊಮ್ಮಗ ಸೇರಿ ಟೆಂಡರ್ ಪ್ರಕ್ರಿಯೆ ಸಂಪೂರ್ಣ ಮುಗಿದಿರುವ ಕಾಮಗಾರಿಯಲ್ಲಿ ವರ್ಕ್ ಆರ್ಡರ್ ಕೊಡುವ ಹಂತದಲ್ಲಿ ಗುತ್ತಿಗೆದಾರರೊಬ್ಬರಿಂದ 17 ಕೋಟಿ ಹಣ ವಸೂಲಿಗೆ ಇಳಿದಿದ್ದು, ಈ ವ್ಯವಹಾರ ಕುದುರಿಸಿದ ಇಡೀ ಲಂಚಾವತಾರವನ್ನು ಮಾಧ್ಯಮ ಸಂಸ್ಥೆಯೊಂದು ಬಯಲಿಗೆಳೆದಿದೆ”

”ರಾಜಾರೋಷವಾಗಿ ಹಣ ಒಂದೆಡೆಯಿಂದ ಇನ್ನೊಂದು ಕಡೆಗೆ ವರ್ಗಾವಣೆಯಾಗಿದೆ. ಒಂದು ಮೂಲದ ಮಾಹಿತಿಯ ಪ್ರಕಾರ ರಾಜ್ಯಗಳ ಗಡಿ ದಾಟಿ ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿರುವ ಕಂಪೆನಿಗಳಲ್ಲಿ ಹಣ ಹೂಡಿಕೆಯಾಗಿದೆ. ಇದನ್ನು ಮನಿ ಲಾಂಡರಿಂಗ್ ಕಾಯ್ದೆಯಡಿ ತನಿಖೆಗೊಳಪಡಿಸಬೇಕಾಗುತ್ತದೆ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ ಲೈವ್‌; ಕೊರೊನಾ ನಿರ್ವಹಣೆ ಬಗ್ಗೆ ಸಿದ್ದರಾಮಯ್ಯ ಮಾತು

”ಇಡೀ ಭ್ರಷ್ಟಾಚಾರದಲ್ಲಿ ಹಣ ಯಾರ ಕೈಲಿ ಕೊಡಬೇಕು? ಯಾರನ್ನು ಸಂಪರ್ಕಿಸಬೇಕು? ಎಲ್ಲಿ-ಎಷ್ಟೊತ್ತಿಗೆ ಸಂಪರ್ಕಿಸಬೇಕು? ಬಾಕಿ ಹಣವನ್ನು ಯಾವಾಗ, ಯಾವ ಖಾತೆಗೆ ವರ್ಗಾಯಿಸಬೇಕು ಎನ್ನುವುದನ್ನೆಲ್ಲಾ ವಾಟ್ಸಾಪ್ನಲ್ಲಿ ಚರ್ಚಿಸಿದ್ದಾರೆ. ಯಡಿಯೂರಪ್ಪ ಅವರ ಮೊಮ್ಮಗ ತನ್ನ ಖಾತೆಗೆ ಹಣ ವರ್ಗಾಯಿಸಿಕೊಂಡಿರುವುದಕ್ಕೆ ಸ್ಪಷ್ಟ ಸಾಕ್ಷ್ಯಗಳಿವೆ” ಎಂದು ಅವರು ಹೇಳಿದ್ದಾರೆ.

”ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲು ವಿಜಯೇಂದ್ರ ಹೆಸರಲ್ಲಿ ಬಿಡಿಎ ಕಮಿಷನರ್ ಪ್ರಕಾಶ್ ಗುತ್ತಿಗೆದಾರರಿಂದ ರೂ.12 ಕೋಟಿ ಕೇಳುತ್ತಾರೆ. ಈ ಹಣ 37 ಕ್ರೆಸೆಂಟ್ ಹೋಟೆಲಿನ ಮಾಲೀಕ ರವಿ ಎನ್ನುವವರ ಮೂಲಕ ಸಂದಾಯವಾಗಿದ್ದನ್ನು ವಿಜಯೆಂದ್ರ ಅವರೇ ಟಿವಿ ಚಾನೆಲ್‌ನ ಸ್ಟ್ರಿಂಗ್ ಆಪರೇಷನ್‌ನಲ್ಲಿ ಒಪ್ಪಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

”ಸಿಎಂ ಮತ್ತು ಸೂಪರ್ ಸಿಎಂ ಹೆಸರಲ್ಲಿ 12 ಕೋಟಿ ರೂಪಾಯಿ ಸಂದಾಯ ಆಗಿರುವುದನ್ನು ಒಪ್ಪಿಕೊಂಡ ಬಳಿಕವೂ ಆ ಐಎಎಸ್ ಅಧಿಕಾರಿ ಮತ್ತು ಹೋಟೆಲ್ ಮಾಲೀಕರ ವಿರುದ್ಧ ದೂರು ದಾಖಲಿಸದಿರುವುದು, ಕ್ರಮ ಕೈಗೊಳ್ಳದಿರುವುದು, ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸದೆ ಆಶ್ರಯ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೂರೇ ದಿನಕ್ಕೆ ಅಧಿವೇಶನ ಮೊಟಕುಗೊಳಿಸಲು ಮುಂದಾದ ಸಿಎಂ ಬಿಎಸ್‌ವೈ: ಸಿದ್ದರಾಮಯ್ಯ ವಿರೋಧ

”ಮೊದಲು ಸಂದಾಯವಾಗಿರುವ ರೂ.12 ಕೋಟಿ ತನ್ನ ಕೈಗೆ ಸಿಗದೆ ಅಧಿಕಾರಿ ಕೈಗೆ ಹೋಗಿದೆ. ಆದ್ದರಿಂದ ಒಂದೋ ಐಎಎಸ್ ಅಧಿಕಾರಿ ಕೈಯಿಂದ ಆ 12 ಕೋಟಿ ವಸೂಲಿ ಮಾಡಿ ಒಪ್ಪಿಸು, ಇಲ್ಲವೇ 12 ಕೋಟಿ ಜತೆಗೆ ಇನ್ನೂ 5 ಕೋಟಿ ಸೇರಿಸಿ ತಂದು ಕೊಡಬೇಕು. ಇಲ್ಲದಿದ್ದರೆ ಕೆಲಸ ನಿಲ್ಲಿಸು ವಿಜಯೇಂದ್ರ ಬೆದರಿಸಿದ್ದಾರೆ.”

“ಎರಡನೇ ಹಂತದಲ್ಲಿ ಗುತ್ತಿಗೆದಾರರಿಂದ ವಿಎಸ್‌ಟಿ ಸಂಗ್ರಹಿಸಲು ಮುಂದಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಮರಡಿ ಮತ್ತು ಗುತ್ತಿಗೆದಾರರ ನಡುವಿನ ವಾಟ್ಸಾಪ್ ಚಾಟ್ ಅನ್ನೂ ಮಾಧ್ಯಮ ಸಂಸ್ಥೆ ಬಹಿರಂಗಗೊಳಿಸಿದೆ. ಲಂಚದ ರೂ.7.4 ಕೋಟಿಯನ್ನು ತನ್ನ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮೆ ಮಾಡಿಸಿಕೊಂಡ ಶಶಿಧರ್ ಮರಡಿ, ಉಳಿದ ನಗದು ಹಣವನ್ನು ಮುಖ್ಯಮಂತ್ರಿಗಳ ಅಳಿಯನಿಗೆ ಹುಬ್ಬಳ್ಳಿಯಲ್ಲಿ ತಲುಪಿಸುವಂತೆ ಹೇಳಿರುವ ವಾಟ್ಸಾಪ್ ಚಾಟ್ ವಿವರವನ್ನು ಟಿವಿ ಚಾನೆಲ್ ಬಹಿರಂಗಪಡಿಸಿದೆ” ಎಂದು ಅವರು ಹೇಳಿದ್ದಾರೆ.

”ಈ ಭ್ರಷ್ಟಾಚಾರವನ್ನು ಬಯಲಿಗೆಳೆದ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರು ಮತ್ತು ಪತ್ರಕರ್ತರಿಗೆ ಜೀವ ಬೆದರಿಕೆಯೊಡ್ಡಲಾಗುತ್ತಿದೆ. ಕಂಗನಾ ರಣಾವತ್ ಎಂಬ ನಟಿಗೆ ಬೆದರಿಕೆ ಇದೆಯೆಂದು ’ವೈ’ ದರ್ಜೆ ಭದ್ರತೆ ನೀಡಲಾಗುತ್ತದೆ. ಹಗರಣವನ್ನು ಬಯಲಿಗೆಳೆದ ಪತ್ರಕರ್ತರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಇದು ಪ್ರಜಾಪ್ರಭುತ್ವವೋ, ರಾಕ್ಷಸ ಪ್ರಭುತ್ವವೋ” ಎಂದಿರುವ ಸಿದ್ದರಾಮಯ್ಯ, “’ಹೋಂ ನನ್ನ ಕೈಯಲ್ಲಿದೆ’ ಎನ್ನುವ ಮೂಲಕ ಗೃಹ ಇಲಾಖೆಯನ್ನು , ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ತಮ್ಮ ಬೆರಳ ತುದಿಯಲ್ಲಿ ನಿಯಂತ್ರಿಸುವ ಅಪಾಯಕಾರಿ ಹಂತಕ್ಕೆ ಸೂಪರ್ ಸಿಎಂ ಇಳಿದಿರುವುದು ಭಾರತೀಯ ಜನತಾ ಪಕ್ಷದ ಹೊಸ ಆಡಳಿತ ವೈಖರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ರಾಜ್ಯದ ಮುಖ್ಯ ಮಂತ್ರಿ ಮತ್ತು ಅವರ ಕುಟುಂಬ ವರ್ಗದ ಬಗ್ಗೆ ಈ ಮಟ್ಟದ ಭ್ರಷ್ಟಾಚಾರದ (ಬಹುಷಃ ದಾಖಲೆಯ ಸಮೇತ ) ಆರೋಪವಿದ್ದರೂ, ನಮ್ಮ ನಾಡಿನ ಸಾಮಾಜಿಕ ಕಾರ್ಯಕರ್ತರು, ವಿಚಾರವಂತರು, ಪತ್ರಕರ್ತರು ಹಾಗೂ ವಿರೋಧ ಪಕ್ಷದವರೂ ತೆಪ್ಪಗಿರುವದು ಏಕೆ?

    ಪತ್ರಿಕಾ ಹೇಳಿಕೆ ಹಾಗೂ ಸಾಮಾಜಿಕ ಜಾಲತಾನ ದ ಹೊರತಾಗಿ ಬೇರೆ ಏನೂ ಮಾಡುತ್ತಿಲ್ಲವಲ್ಲಾ…

    ಎಲ್ಲರ ಮನೆ ದೋಸೇನೂ ತೂತೇ ಎನ್ನುವದು ಇಲ್ಲೂ ನಿಜವೇ…

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...