Homeಮುಖಪುಟವಕೀಲ ಪ್ರಶಾಂತ್ ಭೂಷಣ್‌ಗೆ ದೆಹಲಿ ಬಾರ್ ಕೌನ್ಸಿಲ್ ನೋಟಿಸ್

ವಕೀಲ ಪ್ರಶಾಂತ್ ಭೂಷಣ್‌ಗೆ ದೆಹಲಿ ಬಾರ್ ಕೌನ್ಸಿಲ್ ನೋಟಿಸ್

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಶಿಕ್ಷೆ ನೀಡಿದ ಹಿನ್ನೆಲೆ ದೆಹಲಿ ಬಾರ್‌ ಕೌನ್ಸಿಲ್ ಪ್ರಶಾಂತ್ ಭೂಷಣ್‌ಗೆ ಅಕ್ಟೋಬರ್ 23 ರಂದು ಕೌನ್ಸಿಲ್ ಮುಂದೆ ಹಾಜರಾಗುವಂತೆ ಕೋರಿ ನೋಟಿಸ್ ನೀಡಿದೆ.

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಕುರಿತಾಗಿ ವಕೀಲ ಪ್ರಶಾಂತ್‌ ಭೂಷಣ್ ಮಾಡಿರುವ ಟೀಕೆಗಳ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಶಿಕ್ಷೆ ನೀಡಿದ ಹಿನ್ನೆಲೆ ದೆಹಲಿ ಬಾರ್‌ ಕೌನ್ಸಿಲ್ ವಕೀಲ ಪ್ರಶಾಂತ್ ಭೂಷಣ್‌ಗೆ ಅಕ್ಟೋಬರ್ 23 ರಂದು ಕೌನ್ಸಿಲ್ ಮುಂದೆ ಹಾಜರಾಗುವಂತೆ ಕೋರಿ ನೋಟಿಸ್ ನೀಡಿದೆ. ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ ಕೌನ್ಸಿಲ್‌ಗೆ ಪ್ರತಿಕ್ರಿಯಿಸಬೇಕಾಗುತ್ತದೆ. ಅಕ್ಟೋಬರ್ 23 ರಂದು ವೈಯಕ್ತಿಕವಾಗಿ ಅಥವಾ ವಿಡಿಯೋ ಸಂವಾದದ ಮೂಲಕ ಹಾಜರಾಗಲು ಬಿಸಿಡಿ ಸೂಚಿಸಿದೆ.

ಇದನ್ನೂ ಓದಿ: ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ದೆಹಲಿ ವಕೀಲರ ಪರಿಷತ್ತು ನೀಡಿರುವ ನೋಟಿಸ್ ಅನ್ನು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

“ನೀವು ವೈಯಕ್ತಿಕವಾಗಿ ಅಥವಾ ನಿಮ್ಮ ಪರವಾಗಿ ಅಧಿಕೃತ ವಕೀಲರ ಮೂಲಕ ಅಕ್ಟೋಬರ್ 23 ರಂದು ಸಂಜೆ 4.00 ಗಂಟೆಗೆ ಪರಿಷತ್ತಿನ ಕಚೇರಿಯಲ್ಲಿ ಹಾಜರಾಗಬೇಕು… ನಿಮಗೆ ಸೂಕ್ತವಾದಂತೆ ನೀವು ದೈಹಿಕವಾಗಿ ಅಥವಾ ವರ್ಚುವಲ್ ಕಾನ್ಫರೆನ್ಸಿಂಗ್ ಮೂಲಕ ಕಾಣಿಸಿಕೊಳ್ಳಬಹುದು ”ಎಂದು ಬಿಸಿಡಿ ನೋಟಿಸ್‌ನಲ್ಲಿ ತಿಳಿಸಿದೆ.

ಈ ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ ನಿಮ್ಮ ಪ್ರತಿಕ್ರಿಯೆಯನ್ನು ಕೌನ್ಸಿಲ್‌ಗೆ ಕಳುಹಿಸುವ ಅವಶ್ಯಕತೆಯಿದೆ, ಸೆಕ್ಷನ್ 24 ಎ (ದಾಖಲಾತಿಗೆ ಅನರ್ಹತೆ) ಮತ್ತು ವಕೀಲರ ಕಾಯ್ದೆಯ ಸೆಕ್ಷನ್ 35 ರ ಅಡಿಯಲ್ಲಿ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು? ಎಂದು ಪ್ರಶ್ನಿಸಿದೆ.

ವಕೀಲರ ಕಾಯ್ದೆ ಸೆಕ್ಷನ್ 24Aರ ಅನ್ವಯ ನೋಂದಣಿ ರದ್ದುಪಡಿಸಲಾಗುತ್ತದೆ. ಸೆಕ್ಷನ್ 35 ದುರ್ನಡತೆ ತೋರುವ ವಕೀಲರಿಗೆ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿದೆ. ಸೆಕ್ಷನ್ 35ರ ಅನ್ವಯ ರಾಜ್ಯ ವಕೀಲರ ಪರಿಷತ್ತಿನ ಶಿಸ್ತುಪಾಲನಾ ಸಮಿತಿಯು ವೃತ್ತಿಪರ ವಿಚಾರದಲ್ಲಿ ವಕೀಲರು ದೋಷಿ ಎಂದು ಸಾಬೀತಾದರೆ ವಕೀಲರ ಪರಿಷತ್ತಿನಿಂದ ಅಂಥವರನ್ನು ಅಮಾನತುಗೊಳಿಸಲಾಗುತ್ತದೆ.


ಇದನ್ನೂ ಓದಿ: ಒಂದು ರೂ. ದಂಡ ಕಟ್ಟಿ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...