Homeಅಂಕಣಗಳುನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ 'ಶರಣ'!

ನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ ‘ಶರಣ’!

- Advertisement -
- Advertisement -

ವಿಶ್ವರಾಧ್ಯ ಸತ್ಯಂಪೇಟೆ |
ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಉಂಟು ಮಾಡಿದ ಧ್ವನಿ ಸುರುಳಿಯ ಕರ್ತೃ ಶರಣಗೌಡ ಕಂದಕೂರ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದು ಬಂದ ನಾಗಣ್ಣಗೌಡ ಕಂದಕೂರ ಅವರ ಪುತ್ರ. ಕಂದಕೂರ ಕುಟುಂಬ ವರ್ಗದವರಿಗೆ ದೇವೇಗೌಡರು ಎಂದೆಂದೂ ಸನಿಹವೆ. ಶರಣಗೌಡರ ದೊಡ್ಡಪ್ಪ ಲಿಂ.ಸದಾಶಿವರೆಡ್ಡಿ ಕಂದಕೂರ ಅಂದರೆ ಪಂಚಪ್ರಾಣ. ಯಾದಗಿರಿಗೆ ಗೌಡರು ಆಗ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ. ಸದಾಶಿವರೆಡ್ಡಿ ಜನತಾ ಪಕ್ಷ ಪಾಳೆಯದಲ್ಲಿ ಹಿಂದಿನಿಂದಲೂ ಗುರುತಿಸಿಕೊಂಡಿದ್ದರು. ಯಾದಗಿರಿ ಮತ ಕ್ಷೇತ್ರದ ಶಾಸಕರಾಗಿದ್ದ ಕೆಲವು ಕಾಲ ಮಂತ್ರಿಯಾಗಿದ್ದ ವಿಶ್ವನಾಥರೆಡ್ಡಿ ಮುದ್ನಾಳರ ಒಡನಾಟವಿದ್ದರೂ ತಮ್ಮದೆ ಅಸ್ತಿತ್ವ ಹೊಂದಿದವರು. ಸಣ್ಣ ಪುಟ್ಟ ಗಿಮಿಕ್ ಮಾಡದೆ ನೇರ ನಿಷ್ಠುರ ಗುಣಗಳನ್ನು ಬೆಳೆಸಿಕೊಂಡು ಜನ ಮನ್ನಣೆ ಗಳಿಸಿಕೊಂಡಿದ್ದವರು. ಬಹುಶಃ ಇದನ್ನು ಗುರುತಿಸಿದ್ದ ದೇವೇಗೌಡರು ಯಾದಗಿರಿಗೆ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ.

ಈ ಸದಾಶಿವರೆಡ್ಡಿಯವರ ತಮ್ಮ ನಾಗಣ್ಣಗೌಡ ಕಂದಕೂರ ಅವರ ಮಗನೆ ಶರಣಗೌಡ ಕಂದಕೂರ. ಗುರುಮಿಠಕಲ್ ಮತಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋತು ಹೋಗಿದ್ದ ನಾಗಣ್ಣಗೌಡರ ಗೆಲುವಿಗೆ ಮುಖ್ಯ ಕಾರಣವೆ ಶರಣಗೌಡ ಕಂದಕೂರ. ಕೇವಲ 37 ವರ್ಷ ವಯಸ್ಸಿನವನಿದ್ರೂ ಮತಕ್ಷೇತ್ರದ ಉದ್ದಕ್ಕೂ ಪಾದರಸದಂತೆ ಓಡಾಡಿ ತಮ್ಮ ಕುಟುಂಬದ ಪ್ರಭಾವ ಉಂಟು ಮಾಡಿದ್ದಾನೆ.

ಕಳೆದ ಎರಡು ವಿಧಾನಸಭೆಯ ಚುನಾವಣೆಯಲ್ಲಿ ಅಲ್ಲಿನ ಬಾಬುರಾವ್ ಚಿಂಚನಸೂರ ಎಂಬ ವ್ಯಕ್ತಿಯಿಂದ ಸೋತು ಸುಣ್ಣವಾಗಿದ್ದ ನಾಗಣ್ಣಗೌಡ ಕಂದಕೂರ ಮತ್ತೆ ಚಿಗುರುವಂತೆ ಮಾಡಿದ್ದೇ ಈ ಶರಣಗೌಡನ ಸಂಘಟನಾ ಚತುರತೆ. ನಾಗಣ್ಣಗೌಡರ ತೂಕದ ಮಾತು ಹಾಗೂ ಗಟ್ಸ್ ಒಂದೆಡೆ ಕೆಲಸ ಮಾಡಿದ್ದರೆ ಇನ್ನೊಂದೆಡೆ ಶರಣಗೌಡನ ಕ್ಷೇತ್ರದ ಪಾದಯಾತ್ರೆಗಳೂ ಪ್ಲಸ್ ಪಾಯಿಂಟ್ ಆದವು. ಎರಡು ಬಾರಿ ನೆಲ ಕಚ್ಚಿ ಇನ್ನೇನು ಮೂರನೆ ಬಾರಿ ಕಂದಕೂರ ಕುಟುಂಬ ನೆಲ ಕಚ್ಚಿಯೇ ಹೋಗುತ್ತದೆ ಎಂದು ರಾಜಕೀಯ ನಾಯಕರು ಎಣಿಕೆ ಹಾಕಿದಾಗ ಮತದಾರನ ಕರುಣಾ ದೃಷ್ಟಿ ಇವರ ಮೇಲೆ ಬಿತ್ತು. ಸಾಡೆ ಸಾತಿಯಂತೆ ಗುರುಮಿಠಕಲ್ ಮತಕ್ಷೇತ್ರಕ್ಕೆ ಗಂಟು ಬಿದ್ದಿದ್ದ ಚಿಂಚನಸೂರ ಬಾಬುರಾವ್ ನೇಪಥ್ಯಕ್ಕೆ ಸರಿಯಬೇಕಾಯಿತು.

ಮೂರನೆ ಸಲ ಗುರುಮಿಠಕಲ್ ಕ್ಷೇತ್ರದಲ್ಲಿ ನಿಲ್ಲಲು ದೇವೇಗೌಡರ ಜನತಾದಳ ನಾಗಣ್ಣಗೌಡ ಕಂದಕೂರರಿಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡಿದೆ. ಈ ಸಹಕಾರ ಇಂದು ನಿನ್ನೆಯದಲ್ಲ. ಹೀಗಾಗಿ ನಾಗಣ್ಣಗೌಡ ಕಂದಕೂರ ಆತನ ಮಗ ಶರಣಗೌಡ ಮತ್ತು ಮುಖ್ಯಮಂತ್ರಿ ಕುಮಾರ ಸ್ವಾಮಿಗಳು ಬೀಸಿದ ಬಲೆಯಲ್ಲಿ ಯಡಿಯೂರಪ್ಪ ಸಿಕ್ಕು ಹಾಕಿಕೊಂಡಿದ್ದಾನೆ. ಯಡಿಯೂರಪ್ಪನ ಮುಖ್ಯಮಂತ್ರಿಯ ಕನಸಿಗೆ ಬ್ರೇಕ್ ಹಾಕದೆ ಹೋದರೆ ಕುಮಾರಣ್ಣನ ಸರಕಾರ ಉರುಳಿ ಹೋಗುತ್ತದೆಂಬುದು ಯಾರಾದರೂ ಊಹಿಸಬಹುದಾಗಿತ್ತು. ಕುದುರೆಗಳು ಹೇಗೂ ಖರೀದಿಗೆ ಸಿಗುತ್ತವೆ ಎಂಬ ಖಾತ್ರಿಯಲ್ಲಿದ್ದ ಯಡಿಯೂರಪ್ಪ ಹೈಕಮಾಂಡ್‌ನಿಂದ ಗ್ರಿನ್ ಸಿಗ್ನಲ್ ಪಡೆದು ತನ್ನ ಕೈಚಳ ಆರಂಭಿಸಿದ್ದರು. ಇದರಿಂದ ಕಾಂಗ್ರೆಸ್ ಹಾಗೂ ದಳದ ಮೈತ್ರಿ ಸರಕಾರ ತನ್ನ ಅಸ್ತಿತ್ವಕ್ಕಾಗಿ ಯಡ್ಡಿಯನ್ನು ಖೆಡ್ಡಾದಲ್ಲಿ ಕೆಡವಲು ಸಖತ್ ಗೇಮ್ ಆಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...