Homeಚಳವಳಿರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ರೈತರು ಮಾಲ್‌ಗಳೊಂದಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಷ್ಟಕ್ಕೆ ಗುರಿಯಾಗುತ್ತಾರೆ. ಆತ್ಮಹತ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರ ಎಪಿಎಂಸಿ, ಭೂಸುಧಾರಣೆ ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಗಳನ್ನು ಮಂಡಿಸಿ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಸೆಪ್ಟೆಂಬರ್ 28 ರಂದು ’ಭಾರತ್ ಬಂದ್’ ಆಚರಿಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ, ದಲಿತ, ಪ್ರಗತಿಪರ ಸಂಘಟನೆಗಳ ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಮತ್ತು ಜನವಿರೋಧಿ ಮಾರಕ ಕಾಯ್ದೆಗಳನ್ನು ಜಾರಿಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಧೋರಣೆಯನ್ನು ಬದಲಿಸಿಕೊಳ್ಳಬೇಕು. ಮಸೂದೆಗಳನ್ನು ವಾಪಸ್ ಪಡೆಯಬೇಕು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಭಾರತ್ ಬಂದ್‌ ನಡೆಯಲಿದೆ ಎಂದರು.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಸಮನ್ವಯ ಸಮಿತಿ ಮುಖಂಡ ಎ.ಗೋವಿಂದರಾಜ್ ಮಾತನಾಡಿ, ರೈತರ ತೀವ್ರ ವಿರೋಧದ ನಡುವೆಯೂ ಮೂರು ಮಸೂದೆಗಳನ್ನು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಮಂಡಿಸಿ ಅಂಗೀಕರಿಸಿದೆ. ಸರ್ಕಾರ ಸರ್ವಾಧಿಕಾರಿ ಧೋರಣೆಯ ಮೂಲಕ ರೈತರನ್ನು ಬಗ್ಗುಬಡಿಯಲು ಯತ್ನಿಸುತ್ತಿದೆ. ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಹೇಳಿದರು.

ರೈತ ಸಂಘ ಮತ್ತು ಹಸಿರು ಸೇನೆ ಮುಖಂಡ ಆನಂದ ಪಟೇಲ್ ಮಾತನಾಡಿ ಸರ್ಕಾರ ಭೂಸುಧಾರಣ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸುಳ್ಳು ಹೇಳುತ್ತಿದೆ. ರೈತರು, ಜನಸಾಮಾನ್ಯರನ್ನು ದಿಕ್ಕುತಪ್ಪಿಸುತ್ತಿದೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರಿಲಯನ್ಸ್, ಮೆಟ್ರೋ, ಮೋರ್‌ನಂತಹ ಕಂಪನಿಗಳಿಗೆ ಅನುಕೂಲವಾಗುತ್ತದೆ. ಈ ವಿಷಯವನ್ನು ಸರ್ಕಾರ ಮರೆಮಾಚುತ್ತಿದೆ ಎಂದು ಆರೋಪಿಸಿದರು.

ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಹಳ್ಳಗಳಲ್ಲಿ ಮಾಲ್‌ಗಳು ಆರಂಭವಾಗಲಿದೆ. ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕಿಂತ ಕಡಿಮೆ ಬೆಲೆಗೆ ಮಾಲ್‌ಗಳಲ್ಲಿ ದೊರೆಯಲಿವೆ. ಇದರಿಂದ ರೈತರು ಮಾಲ್‌ಗಳೊಂದಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಷ್ಟಕ್ಕೆ ಗುರಿಯಾಗುತ್ತಾರೆ. ಆತ್ಮಹತ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ಸರ್ಕಾರದ ತೀರ್ಮಾನದಿಂದ ದಳ್ಳಾಳಿಗಳು ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ರೈತರಿಗೆ ಲಾಭ ದೊರೆಯಲಿದೆ ಎಂದು ಸಚಿವರು ಸುಳ್ಳು ಹೇಳುತ್ತಾರೆ. ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆಗೆ ತಂದರೆ ಕನಿಷ್ಠ ಬೆಂಬಲ ಬೆಲೆ ಗೊತ್ತಾಗುತ್ತದೆ. ಹತ್ತು ಮಂದಿ ದಲ್ಲಾಳಿಗಳು ಸ್ಪರ್ಧೆಗೆ ಇಳಿದು ರೈತರ ಉತ್ಪನ್ನಗಳನ್ನು ಹೆಚ್ಚು ಬೆಲೆಗೆ ಕೊಳ್ಳುತ್ತಾರೆ. ಇದು ಸರ್ಕಾರಕ್ಕೆ ತಿಳಿಯಬೇಕಾಗಿದೆ ಎಂದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಸಾಕಷ್ಟು ತೊಂದರೆಯಾಗಲಿದೆ. ಸರ್ಕಾರಕ್ಕೆ ಬರಬೇಕಾದ ಕೋಟ್ಯಂತರ ರೂಪಾಯಿ ಸೆಸ್ ಇಲ್ಲವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟಾಗಲಿದೆ. ಸರ್ಕಾರಗಳು ಎಲ್ಲವನ್ನೂ ಖಾಸಗೀಕರಣಗೊಳಿಸಿ ಕಾರ್ಪೋರೇಟರ್ ಸಂಸ್ಥೆಗಳ ನಿಯಂತ್ರಣಕ್ಕೆ ಕೊಟ್ಟು ರೈತರು, ಜನಸಾಮಾನ್ಯರು ನರಳುವಂತಹ ವ್ಯವಸ್ಥೆಯನ್ನು ಸೃಷ್ಟಿಸಲು ಹೊರಟಿವೆ ಎಂದು ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸಮನ್ವಯ ಸಮಿತಿಯ ಕಾರ್ಯದರ್ಶಿ ಬಿ.ಉಮೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸ್ಲಂ ಜನಾಂದೋಲನ ಸಂಚಾಲಕ ಎ.ನರಸಿಂಹಮೂರ್ತಿ, ಆರ್.ಕೆ.ಎಸ್ ಸಂಘಟನೆಯ ಎನ್.ಎಸ್. ಸ್ವಾಮಿ, ಎಐಕೆಎಸ್ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...