Homeಮುಖಪುಟಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.

- Advertisement -
- Advertisement -

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳು ಮತ್ತು ಸುಗೀವಾಜ್ಞೆಗಳನ್ನು ತಿರಸ್ಕರಿಸಿ ಮತ್ತು ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ, ಐಕ್ಯ ಹೋರಾಟ ಸಮಿತಿಯಿಂದ ನಡೆಸಿದ ಜನತಾ ಅಧಿವೇಶನದ ಮೂರನೇ ದಿನದ ನಿರ್ಣಯಗಳ ಪೂರ್ಣಪಾಠ ಇಲ್ಲಿದೆ.

ದೇಶದಲ್ಲಿ ರೈತ ವಿರೋಧಿ ನೀತಿಗಳನ್ನು ಯಾವುದೇ ಚರ್ಚೆ, ಮತಯಾಚನೆಯೂ ಮಾಡದೆ ಸರ್ವಾಧಿಕಾರಿ ರೀತಿಯಲ್ಲಿ ಅಧಿವೇಶನದಲ್ಲಿ ಜಾರಿ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರವೂ ಕೂಡ ’ಉಳುವವರೇ ಭೂಮಿಯ ಒಡೆಯರು’ ಎಂಬ ಭೂ ಸುಧಾರಣೆಗೆ ತಿದ್ದುಪಡಿ ಮಾಡಿ ಕಾರ್ಪೊರೇಟ್ ಕುಳಗಳಿಗೆ, ಹಣವಂತರಿಗೆ ಮಾತ್ರ ಭೂಮಿ ಎಂಬಂತಹ ಸುಗ್ರೀವಾಜ್ಞೆ ಹೊರಡಿಸಿ, ಅದರ ಜಾರಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡಪರ, ಪ್ರಗತಿಪರ ದೇಶಪ್ರೇಮಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ, ಕರ್ನಾಟಕದ ವಿಧಾನಸಭಾ ಅಧಿವೇಶನ ಆರಂಭವಾದ ದಿನದಿಂದ ಅಹೋರಾತ್ರಿ ಹೋರಾಟ ಮತ್ತು ಪರ್ಯಾಯ ಜನತಾ ಅಧಿವೇಶನವನ್ನು ನಡೆಸುತ್ತಿವೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಪರ್ಯಾಯ ಅಧಿವೇಶನದ ಮೂರನೇ ದಿನವಾದ ಇಂದು, ರೈತ, ಕಾರ್ಮಿಕ, ಜನವಿರೋಧಿ ಸುಗ್ರೀವಾಜ್ಞೆಗಳು ಮತ್ತು ಮಸೂದೆಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಟಿ ನಡೆಯಿತು.

ವಿ. ಗಾಯತ್ರಿಯವರು ಭೂಸುಧಾರಣೆ ಕಾಯ್ದೆಗೆ ಆಗಿರುವ ತಿದ್ದುಪಡಿಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, “ಮುಖ್ಯವಾಗಿ, ಜಲಾಶಯಗಳಿಗೆ, ಸರ್ಕಾರಿ ಯೋಜನೆಗಳಿಗೆ, ಆರೋಗ್ಯ ಮುಂತಾದ ಕಾರಣಗಳಿಗೆ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದ್ದು ಅವರು ಮತ್ತೆಂದೂ ಭೂಮಿಯನ್ನು ಹೊಂದಲಾರರು. ದಲಿತರು ಜಮೀನನ್ನು ಮಾರಬಾರದು. ಒಂದು ವೇಳೆ ಮಾರಿದರೂ ಅವುಗಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಅಲ್ಲದೆ, ಖರೀದಿಸಿದ ಭೂಮಿಯನ್ನು ಬಂಡವಾಳ ಹೂಡುವವರು ಹಲವಾರು ವರ್ಷಗಳು ಖಾಲಿ ಬಿಟ್ಟು, ಕಪ್ಪು ಹಣವನ್ನು ಬಿಳಿಮಾಡಿಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಎಪಿಎಂಸಿ ಕಾಯ್ದೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ರೈತಪರವಾದ ತಿದ್ದುಪಡಿಗಳ ಅವಶ್ಯಕತೆಯಿದೆ. ಆದರೆ, ಈಗಿನ ತಿದ್ದುಪಡಿಗಳು ರೈತವಿರೋಧಿಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತ ಸಂಘದ ರಮೇಶ್ ಹೂಗಾರ್ ಮಾತನಾಡಿ, “ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುಚ್ಛಕ್ತಿಯನ್ನು ನಿಲ್ಲಿಸಿ ಅವರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿಹಾಕಿಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, “ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಕೊನೆಗೆ ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ಇದು. ಎಪಿಎಂಸಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರ ಎಪಿಎಂಸಿಯ ಆಚೆ ಇಲ್ಲದಿರುವುದರಿಂದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾರರು. ಅಲ್ಲದೆ, ರೈತರು ನ್ಯಾಯಾಲಯಕ್ಕೆ ಮೊರೆಹೋಗಲಾರರು. ಅವರು ನ್ಯಾಯಾಲಯಗಳಿಗೆ ಹೋದರೂ ನ್ಯಾಯಾಲಯಗಳು ಆ ವ್ಯಾಜ್ಯಗಳನ್ನು ಸ್ವೀಕರಿಸುವಂತಿಲ್ಲ ಎಂಬ ಅಪಾಯಕಾರಿ ಅಂಶ ಕಾನೂನಿನಲ್ಲಿ ತರಲಾಗಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಸಂದೇಶ. ವರ್ತಕರು ನೀಡಬೇಕಾದ ಸೆಸ್‌ ಅನ್ನು ಕಡಿಮೆ ಮಾಡಿ ಎಪಿಎಂಸಿಗಳು ಆದಾಯವಿಲ್ಲದೆ ಮುಚ್ಚುವಂತೆ ಮಾಡಿ, ಕೊನೆಗೆ ಖಾಸಗಿ ಕಂಪನಿಗಳ ಪಾರಮ್ಯಕ್ಕೆ ದಾರಿಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಕಾರ್ಮಿಕರ ನಾಯಕರಾದ ಕಾಳಪ್ಪನವರು, “ಈ ಕಾನೂನುಗಳನ್ನು ಕಾರ್ಮಿಕ ವಿರೋಧಿ ಧೋರಣೆಯ ಭಾಗವಾಗಿ ನೋಡಬೇಕು. ಅನೇಕ ಕಾರ್ಮಿಕಪರ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕರ ಶೋಷಣೆಗೆ ದಾರಿಮಾಡಿಕೊಡಲಾಗಿದೆ” ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, “ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲವರ ಪಾಲಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.


ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...