Homeಮುಖಪುಟಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.

- Advertisement -
- Advertisement -

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳು ಮತ್ತು ಸುಗೀವಾಜ್ಞೆಗಳನ್ನು ತಿರಸ್ಕರಿಸಿ ಮತ್ತು ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ, ಐಕ್ಯ ಹೋರಾಟ ಸಮಿತಿಯಿಂದ ನಡೆಸಿದ ಜನತಾ ಅಧಿವೇಶನದ ಮೂರನೇ ದಿನದ ನಿರ್ಣಯಗಳ ಪೂರ್ಣಪಾಠ ಇಲ್ಲಿದೆ.

ದೇಶದಲ್ಲಿ ರೈತ ವಿರೋಧಿ ನೀತಿಗಳನ್ನು ಯಾವುದೇ ಚರ್ಚೆ, ಮತಯಾಚನೆಯೂ ಮಾಡದೆ ಸರ್ವಾಧಿಕಾರಿ ರೀತಿಯಲ್ಲಿ ಅಧಿವೇಶನದಲ್ಲಿ ಜಾರಿ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರವೂ ಕೂಡ ’ಉಳುವವರೇ ಭೂಮಿಯ ಒಡೆಯರು’ ಎಂಬ ಭೂ ಸುಧಾರಣೆಗೆ ತಿದ್ದುಪಡಿ ಮಾಡಿ ಕಾರ್ಪೊರೇಟ್ ಕುಳಗಳಿಗೆ, ಹಣವಂತರಿಗೆ ಮಾತ್ರ ಭೂಮಿ ಎಂಬಂತಹ ಸುಗ್ರೀವಾಜ್ಞೆ ಹೊರಡಿಸಿ, ಅದರ ಜಾರಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡಪರ, ಪ್ರಗತಿಪರ ದೇಶಪ್ರೇಮಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ, ಕರ್ನಾಟಕದ ವಿಧಾನಸಭಾ ಅಧಿವೇಶನ ಆರಂಭವಾದ ದಿನದಿಂದ ಅಹೋರಾತ್ರಿ ಹೋರಾಟ ಮತ್ತು ಪರ್ಯಾಯ ಜನತಾ ಅಧಿವೇಶನವನ್ನು ನಡೆಸುತ್ತಿವೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಪರ್ಯಾಯ ಅಧಿವೇಶನದ ಮೂರನೇ ದಿನವಾದ ಇಂದು, ರೈತ, ಕಾರ್ಮಿಕ, ಜನವಿರೋಧಿ ಸುಗ್ರೀವಾಜ್ಞೆಗಳು ಮತ್ತು ಮಸೂದೆಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಟಿ ನಡೆಯಿತು.

ವಿ. ಗಾಯತ್ರಿಯವರು ಭೂಸುಧಾರಣೆ ಕಾಯ್ದೆಗೆ ಆಗಿರುವ ತಿದ್ದುಪಡಿಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, “ಮುಖ್ಯವಾಗಿ, ಜಲಾಶಯಗಳಿಗೆ, ಸರ್ಕಾರಿ ಯೋಜನೆಗಳಿಗೆ, ಆರೋಗ್ಯ ಮುಂತಾದ ಕಾರಣಗಳಿಗೆ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದ್ದು ಅವರು ಮತ್ತೆಂದೂ ಭೂಮಿಯನ್ನು ಹೊಂದಲಾರರು. ದಲಿತರು ಜಮೀನನ್ನು ಮಾರಬಾರದು. ಒಂದು ವೇಳೆ ಮಾರಿದರೂ ಅವುಗಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಅಲ್ಲದೆ, ಖರೀದಿಸಿದ ಭೂಮಿಯನ್ನು ಬಂಡವಾಳ ಹೂಡುವವರು ಹಲವಾರು ವರ್ಷಗಳು ಖಾಲಿ ಬಿಟ್ಟು, ಕಪ್ಪು ಹಣವನ್ನು ಬಿಳಿಮಾಡಿಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಎಪಿಎಂಸಿ ಕಾಯ್ದೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ರೈತಪರವಾದ ತಿದ್ದುಪಡಿಗಳ ಅವಶ್ಯಕತೆಯಿದೆ. ಆದರೆ, ಈಗಿನ ತಿದ್ದುಪಡಿಗಳು ರೈತವಿರೋಧಿಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತ ಸಂಘದ ರಮೇಶ್ ಹೂಗಾರ್ ಮಾತನಾಡಿ, “ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುಚ್ಛಕ್ತಿಯನ್ನು ನಿಲ್ಲಿಸಿ ಅವರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿಹಾಕಿಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, “ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಕೊನೆಗೆ ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ಇದು. ಎಪಿಎಂಸಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರ ಎಪಿಎಂಸಿಯ ಆಚೆ ಇಲ್ಲದಿರುವುದರಿಂದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾರರು. ಅಲ್ಲದೆ, ರೈತರು ನ್ಯಾಯಾಲಯಕ್ಕೆ ಮೊರೆಹೋಗಲಾರರು. ಅವರು ನ್ಯಾಯಾಲಯಗಳಿಗೆ ಹೋದರೂ ನ್ಯಾಯಾಲಯಗಳು ಆ ವ್ಯಾಜ್ಯಗಳನ್ನು ಸ್ವೀಕರಿಸುವಂತಿಲ್ಲ ಎಂಬ ಅಪಾಯಕಾರಿ ಅಂಶ ಕಾನೂನಿನಲ್ಲಿ ತರಲಾಗಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಸಂದೇಶ. ವರ್ತಕರು ನೀಡಬೇಕಾದ ಸೆಸ್‌ ಅನ್ನು ಕಡಿಮೆ ಮಾಡಿ ಎಪಿಎಂಸಿಗಳು ಆದಾಯವಿಲ್ಲದೆ ಮುಚ್ಚುವಂತೆ ಮಾಡಿ, ಕೊನೆಗೆ ಖಾಸಗಿ ಕಂಪನಿಗಳ ಪಾರಮ್ಯಕ್ಕೆ ದಾರಿಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಕಾರ್ಮಿಕರ ನಾಯಕರಾದ ಕಾಳಪ್ಪನವರು, “ಈ ಕಾನೂನುಗಳನ್ನು ಕಾರ್ಮಿಕ ವಿರೋಧಿ ಧೋರಣೆಯ ಭಾಗವಾಗಿ ನೋಡಬೇಕು. ಅನೇಕ ಕಾರ್ಮಿಕಪರ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕರ ಶೋಷಣೆಗೆ ದಾರಿಮಾಡಿಕೊಡಲಾಗಿದೆ” ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, “ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲವರ ಪಾಲಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.


ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...