Homeಮುಖಪುಟಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.

- Advertisement -
- Advertisement -

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳು ಮತ್ತು ಸುಗೀವಾಜ್ಞೆಗಳನ್ನು ತಿರಸ್ಕರಿಸಿ ಮತ್ತು ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ, ಐಕ್ಯ ಹೋರಾಟ ಸಮಿತಿಯಿಂದ ನಡೆಸಿದ ಜನತಾ ಅಧಿವೇಶನದ ಮೂರನೇ ದಿನದ ನಿರ್ಣಯಗಳ ಪೂರ್ಣಪಾಠ ಇಲ್ಲಿದೆ.

ದೇಶದಲ್ಲಿ ರೈತ ವಿರೋಧಿ ನೀತಿಗಳನ್ನು ಯಾವುದೇ ಚರ್ಚೆ, ಮತಯಾಚನೆಯೂ ಮಾಡದೆ ಸರ್ವಾಧಿಕಾರಿ ರೀತಿಯಲ್ಲಿ ಅಧಿವೇಶನದಲ್ಲಿ ಜಾರಿ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರವೂ ಕೂಡ ’ಉಳುವವರೇ ಭೂಮಿಯ ಒಡೆಯರು’ ಎಂಬ ಭೂ ಸುಧಾರಣೆಗೆ ತಿದ್ದುಪಡಿ ಮಾಡಿ ಕಾರ್ಪೊರೇಟ್ ಕುಳಗಳಿಗೆ, ಹಣವಂತರಿಗೆ ಮಾತ್ರ ಭೂಮಿ ಎಂಬಂತಹ ಸುಗ್ರೀವಾಜ್ಞೆ ಹೊರಡಿಸಿ, ಅದರ ಜಾರಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡಪರ, ಪ್ರಗತಿಪರ ದೇಶಪ್ರೇಮಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ, ಕರ್ನಾಟಕದ ವಿಧಾನಸಭಾ ಅಧಿವೇಶನ ಆರಂಭವಾದ ದಿನದಿಂದ ಅಹೋರಾತ್ರಿ ಹೋರಾಟ ಮತ್ತು ಪರ್ಯಾಯ ಜನತಾ ಅಧಿವೇಶನವನ್ನು ನಡೆಸುತ್ತಿವೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಪರ್ಯಾಯ ಅಧಿವೇಶನದ ಮೂರನೇ ದಿನವಾದ ಇಂದು, ರೈತ, ಕಾರ್ಮಿಕ, ಜನವಿರೋಧಿ ಸುಗ್ರೀವಾಜ್ಞೆಗಳು ಮತ್ತು ಮಸೂದೆಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಟಿ ನಡೆಯಿತು.

ವಿ. ಗಾಯತ್ರಿಯವರು ಭೂಸುಧಾರಣೆ ಕಾಯ್ದೆಗೆ ಆಗಿರುವ ತಿದ್ದುಪಡಿಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, “ಮುಖ್ಯವಾಗಿ, ಜಲಾಶಯಗಳಿಗೆ, ಸರ್ಕಾರಿ ಯೋಜನೆಗಳಿಗೆ, ಆರೋಗ್ಯ ಮುಂತಾದ ಕಾರಣಗಳಿಗೆ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದ್ದು ಅವರು ಮತ್ತೆಂದೂ ಭೂಮಿಯನ್ನು ಹೊಂದಲಾರರು. ದಲಿತರು ಜಮೀನನ್ನು ಮಾರಬಾರದು. ಒಂದು ವೇಳೆ ಮಾರಿದರೂ ಅವುಗಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಅಲ್ಲದೆ, ಖರೀದಿಸಿದ ಭೂಮಿಯನ್ನು ಬಂಡವಾಳ ಹೂಡುವವರು ಹಲವಾರು ವರ್ಷಗಳು ಖಾಲಿ ಬಿಟ್ಟು, ಕಪ್ಪು ಹಣವನ್ನು ಬಿಳಿಮಾಡಿಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಎಪಿಎಂಸಿ ಕಾಯ್ದೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ರೈತಪರವಾದ ತಿದ್ದುಪಡಿಗಳ ಅವಶ್ಯಕತೆಯಿದೆ. ಆದರೆ, ಈಗಿನ ತಿದ್ದುಪಡಿಗಳು ರೈತವಿರೋಧಿಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತ ಸಂಘದ ರಮೇಶ್ ಹೂಗಾರ್ ಮಾತನಾಡಿ, “ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುಚ್ಛಕ್ತಿಯನ್ನು ನಿಲ್ಲಿಸಿ ಅವರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿಹಾಕಿಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, “ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಕೊನೆಗೆ ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ಇದು. ಎಪಿಎಂಸಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರ ಎಪಿಎಂಸಿಯ ಆಚೆ ಇಲ್ಲದಿರುವುದರಿಂದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾರರು. ಅಲ್ಲದೆ, ರೈತರು ನ್ಯಾಯಾಲಯಕ್ಕೆ ಮೊರೆಹೋಗಲಾರರು. ಅವರು ನ್ಯಾಯಾಲಯಗಳಿಗೆ ಹೋದರೂ ನ್ಯಾಯಾಲಯಗಳು ಆ ವ್ಯಾಜ್ಯಗಳನ್ನು ಸ್ವೀಕರಿಸುವಂತಿಲ್ಲ ಎಂಬ ಅಪಾಯಕಾರಿ ಅಂಶ ಕಾನೂನಿನಲ್ಲಿ ತರಲಾಗಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಸಂದೇಶ. ವರ್ತಕರು ನೀಡಬೇಕಾದ ಸೆಸ್‌ ಅನ್ನು ಕಡಿಮೆ ಮಾಡಿ ಎಪಿಎಂಸಿಗಳು ಆದಾಯವಿಲ್ಲದೆ ಮುಚ್ಚುವಂತೆ ಮಾಡಿ, ಕೊನೆಗೆ ಖಾಸಗಿ ಕಂಪನಿಗಳ ಪಾರಮ್ಯಕ್ಕೆ ದಾರಿಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಕಾರ್ಮಿಕರ ನಾಯಕರಾದ ಕಾಳಪ್ಪನವರು, “ಈ ಕಾನೂನುಗಳನ್ನು ಕಾರ್ಮಿಕ ವಿರೋಧಿ ಧೋರಣೆಯ ಭಾಗವಾಗಿ ನೋಡಬೇಕು. ಅನೇಕ ಕಾರ್ಮಿಕಪರ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕರ ಶೋಷಣೆಗೆ ದಾರಿಮಾಡಿಕೊಡಲಾಗಿದೆ” ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, “ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲವರ ಪಾಲಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.


ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...