HomeUncategorizedದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಫೇಸ್‌ಬುಕ್ ಇಂಡಿಯಾ

ದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಫೇಸ್‌ಬುಕ್ ಇಂಡಿಯಾ

ಈ ಸಮನ್ಸ್‌ ನಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ. ನಾವು ಸಾರ್ವಜನಿಕ ಸೇವಕರಲ್ಲ. ನಮ್ಮದು ಅಮೇರಿಕನ್ ಕಂಪನಿ- ಫೇಸ್‌ಬುಕ್ ಇಂಡಿಯಾ

- Advertisement -
- Advertisement -

ದೆಹಲಿಯಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಫೇಸ್‌ಬುಕ್ ಇಂಡಿಯಾಗೆ ದೆಹಲಿ ಶಾಸಕಾಂಗ ಸಮಿತಿ ನೀಡಿದ್ದ ನೋಟೀಸ್ ಅನ್ನು ಪ್ರಶ್ನಿಸಿ ಫೇಸ್‌ಬುಕ್ ಇಂಡಿಯಾದ ಉಪಾಧ್ಯಕ್ಷರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹಿನ್ನೆಲೆಯಲ್ಲಿ, ದೆಹಲಿ ಶಾಸಕಾಂಗ ಸಮಿತಿಯು ಬುಧವಾರದ ವಿಚಾರಣಾ ಸಭೆಯನ್ನು ರದ್ದುಗೊಳಿಸಿದೆ.

ಫೇಸ್‌ಬುಕ್ ಇಂಡಿಯಾ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಿತ್ ಮೋಹನ್ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಸುಪ್ರೀಂ ಕೋರ್ಟ್, ದೆಹಲಿ ವಿಧಾನಸಭೆಯ ಕಾರ್ಯದರ್ಶಿ, ಕಾನೂನು ಮತ್ತು ನ್ಯಾಯ ಸಚಿವಾಲಯ, ಎಲೆಕ್ಟ್ರಾನಿಕ್ ಮತ್ತು ಐಟಿ ಸಚಿವಾಲಯ ಹಾಗೂ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ನೋಟೀಸ್ ನೀಡಿದೆ.

ದೆಹಲಿ ಶಾಸಕಾಂಗ ಸಮಿತಿಯು ತನ್ನನ್ನು ವಿಚಾರಣೆಗೆ ಕರೆಸಿಕೊಳ್ಳದಂತೆ ಕೋರಿ ಅಜಿತ್ ಮೋಹನ್ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಸುಪ್ರೀಂ, “ಮುಂದಿನ ವಿಚಾರಣೆಯ ದಿನಾಂಕವಾದ ಅಕ್ಟೋಬರ್ 15 ರವರೆಗೆ ಕಾರ್ಯನಿರ್ವಾಹಕರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು” ಎಂದು ದೆಹಲಿ ಸದನ ಸಮಿತಿಗೆ ಹೇಳಿದೆ. ಇದಕ್ಕೆ ಒಪ್ಪಿದ ಸಮಿತಿ, “ಅವರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದೆ.

ಸಮಿತಿಯು ತನ್ನ ಮುಂದೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದ ನಂತರ ಮೋಹನ್ ಸುಪ್ರೀಂ ಕೋರ್ಟ್‌ ಮೊರೆ ಹೋದರು. ಮೊದಲ ನೋಟಿಸ್ ನಂತರ ಅವರು ಸಮಿತಿಯ ಮುಂದೆ ಹಾಜರಾಗದಿದ್ದಾಗ, ಸಮಿತಿಯ ಅಧ್ಯಕ್ಷರು ಮತ್ತು ಎಎಪಿ ಶಾಸಕರಾದ ರಾಘವ್ ಚಾಡ್ಡ, “ಮತ್ತೆ ಹಾಜರಾಗಲು ಫೇಸ್‌ಬುಕ್‌ನ ಅಧಿಕಾರಿಗಳು ವಿಫಲವಾದರೆ, ಅವರ ಮೇಲೆ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ” ಎಂದು ಹೇಳಿದ್ದರು.

ಸಮಿತಿಯು ಸೆಪ್ಟೆಂಬರ್ 18 ರಂದು ಎರಡನೇ ನೋಟಿಸ್ ನೀಡಿ ಬುಧವಾರ (ಸೆಪ್ಟೆಂಬರ್ 23) ತನ್ನ ಮುಂದೆ ಹಾಜರಾಗುವಂತೆ ನಿರ್ದೇಶಿಸಿತ್ತು.

ಇದನ್ನೂ ಓದಿ: ದೆಹಲಿ ವಿಧಾನಸಭಾ ಪ್ಯಾನಲ್ ಮುಂದೆ ಹಾಜರಾಗದ ಫೇಸ್‌ಬುಕ್: ಅಂತಿಮ ಎಚ್ಚರಿಕೆ ನೀಡಿದ ಸಮಿತಿ

ಅಜಿತ್ ಮೋಹನ್, ತಮ್ಮ ವಕೀಲರ ಮೂಲಕ, “ಈ ಸಮನ್ಸ್‌ ನಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ. ನಾವು ಸಾರ್ವಜನಿಕ ಸೇವಕರಲ್ಲ. ನಮ್ಮದು ಅಮೇರಿಕನ್ ಕಂಪನಿ” ಎಂದು ಕೋರ್ಟ್‌ಗೆ ತಿಳಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಮಿತಿಯ ಪರ ವಕೀಲರಾದ ಅಭಿಷೇಕ್ ಮುನು ಸಿಂಘ್ವಿ, “ಸಮಿತಿಯು ಕಂಪನಿಯ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಂಡಿಲ್ಲ. ಸೋಷಿಯಲ್ ಮೀಡಿಯಾದ ದುರುಪಯೋಗವನ್ನು ತಡೆಗಟ್ಟುವ ಮಾರ್ಗಗಳ ಬಗ್ಗೆ ಕಂಪನಿಯಿಂದ ಮಾಹಿತಿ ಪಡೆಯಲು ಸಮನ್ಸ್ ಜಾರಿಗೊಳಿಸಲಾಗಿದೆ. ಫೇಸ್‌ಬುಕ್‌ ಅನ್ನು ಆರೋಪಿ ಎಂದು ಕರೆದಿಲ್ಲ. ಆದರೆ ದೆಹಲಿ ಗಲಭೆಯ ಸಂದರ್ಭದಲ್ಲಿ ಫೇಸ್‌ಬುಕ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ” ಎಂದು ನ್ಯಾಯಾಲಯಕ್ಕೆ ಹೇಳಿದರು.

ವಾಲ್‌ಸ್ಟ್ರೀಟ್ ಜರ್ನಲ್ ಕಳೆದ ತಿಂಗಳು ಬಿಡುಗಡೆ ಮಾಡಿದ್ದ ವರದಿಯ ಆಧಾರದ ಮೇಲೆ, ದ್ವೇಷ ಭಾಷಣ ನಿಯಂತ್ರಣದಲ್ಲಿ ಪಕ್ಷಪಾತವೆಸಗಿದ ಫೇಸ್‌ಬುಕ್‌ನ ಪಾತ್ರವನ್ನು ಪರಿಶೀಲಿಸಲು ದೆಹಲಿ ವಿಧಾನಸಭೆಯ ವಿಶೇಷ ಸಮಿತಿಯು ಫೇಸ್‌ಬುಕ್‌ಗೆ ನೋಟೀಸ್ ನೀಡಿತ್ತು.


ಇದನ್ನೂ ಓದಿ: ಫೇಸ್‍ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ನಿವೃತ್ತ ಐಎಎಸ್ ಅಧಿಕಾರಿಗಳ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...