Homeಚಳವಳಿಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: 'ಮಹಾನ್ ತಾತ' ಸಾಕ್ಷ್ಯಚಿತ್ರ ಬಿಡುಗಡೆ

ಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: ‘ಮಹಾನ್ ತಾತ’ ಸಾಕ್ಷ್ಯಚಿತ್ರ ಬಿಡುಗಡೆ

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇದೇ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ. ಗಾಂಧಿ ಜಯಂತಿಯ ಅಕ್ಟೋಬರ್ 2 ರ ಸಂಜೆ 4 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಬಿಡುಗಡೆಯಾಗಲಿದ್ದು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಅಂದೇ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಿದೆ ಎಂದು ಹೇಳಿಕೆ ತಿಳಿಸಿದೆ.

ದೊರೆಸ್ವಾಮಿಯವರ ಬಗ್ಗೆ

ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ. ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಗೆ ಈಗ 103 ವರ್ಷ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮತ್ತು ದೀಪು

ದೀಪು ಎಂದೇ ಚಿರಪರಿಚಿತರಾದ ಕೆ.ಪಿ ಪ್ರದೀಪ್‌ರವರು ಪೆಡೆಸ್ಟ್ರಿಯನ್ ಪಿಕ್ಚರ್ಸ್ ಎಂಬ ಜನಪರ ಮಾಧ್ಯಮ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲೊಬ್ಬರು. ಮೂಲತಃ ಕೇರಳದ ತಿರುವೂರು ಜಿಲ್ಲೆಯ ಮಲಪ್ಪುರಂರವರಾದ ಇವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಾಮಾಜಿಕ-ರಾಜಕೀಯ ವಾಸ್ತವಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಸಿನಿಮಾ-ಸಾಕ್ಷ್ಯಚಿತ್ರವನ್ನು ಪರಿಣಾಮಕಾರಿಯಾಗಿ ಬಳಸಬೇಕೆನ್ನುವುದು ಅವರ ಅಭಿಲಾಷೆ.

2001 ರಲ್ಲಿ ಸಮಾನ ಮನಸ್ಕ ಗೆಳೆಯರೊಂದಿಗೆ ಪೆಡೆಸ್ಟ್ರಿಯನ್ ಪಿಕ್ಚರ್ಸ್ ಆರಂಭಿಸಿದ ಅವರು, ಕರ್ನಾಟಕದ ಬಾಬಾಬುಡನ್ ಗಿರಿ, ಬಿಎಂಐಸಿ ಹೋರಾಟ ಸೇರಿದಂತೆ ಹಲವು ಚಳವಳಿಗಳ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರು ನಿರ್ದೇಶಿಸಿದ ‘Shit’ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಹ ಲಭಿಸಿದೆ. ಗೌರಿ ಲಂಕೇಶ್‌ರವರ ಕುರಿತ ‘Our Gauri’, ಹೋರಾಟಗಾರ ನಜೀಬ್ ನಾಪತ್ತೆಯ ನಂತರ ‘ಅಮ್ಮಿ’ ಎಂಬ ಸಾಕ್ಷ್ಯಚಿತ್ರಗಳನ್ನು ಇತ್ತೀಚೆಗೆ ನಿರ್ದೇಶಿಸಿದ್ದಾರೆ.

#ಮಹಾನ್_ತಾತಅನನ್ಯ ಸ್ವಾತಂತ್ರ್ಯ ಸೇನಾನಿಯ ಸಂಘರ್ಷಗಾಥೆದೊರೆಸ್ವಾಮಿಯವರ ಹೋರಾಟದ ಕುರಿತು ಸಿನಿಮಾ ಅಕ್ಟೋಬರ್ 2 ಕ್ಕೆ ಬಿಡುಗಡೆಸ್ಥಳ: ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಅರಮನೆ ಮೈದಾನ ಬೆಂಗಳೂರು

Posted by Naanu Gauri on Wednesday, September 23, 2020

ದಣಿವರಿಯದ ಹೋರಾಟಗಾರ ದೊರೆಸ್ವಾಮಿಯವರ ಕುರಿತ ಸಾಕ್ಷ್ಯಚಿತ್ರವನ್ನು ನೋಡಲು ಬಯಸುವವರು 500 ರೂ ಪಾವತಿಸಿದರೆ ಅವರ ಮನೆಗೆ ತಲುಪಿಸಲಾಗುವುದು ಎಂದು ಯುವ ಹೋರಾಟಗಾರ ತ್ರಿಮೂರ್ತಿ ತಿಳಿಸಿದ್ದಾರೆ. ಆಸಕ್ತರು ಅವರನ್ನು 9964676400 ಸಂಪರ್ಕಿಸಬಹುದು.


ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...