Homeಚಳವಳಿಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: 'ಮಹಾನ್ ತಾತ' ಸಾಕ್ಷ್ಯಚಿತ್ರ ಬಿಡುಗಡೆ

ಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: ‘ಮಹಾನ್ ತಾತ’ ಸಾಕ್ಷ್ಯಚಿತ್ರ ಬಿಡುಗಡೆ

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇದೇ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ. ಗಾಂಧಿ ಜಯಂತಿಯ ಅಕ್ಟೋಬರ್ 2 ರ ಸಂಜೆ 4 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಬಿಡುಗಡೆಯಾಗಲಿದ್ದು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಅಂದೇ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಿದೆ ಎಂದು ಹೇಳಿಕೆ ತಿಳಿಸಿದೆ.

ದೊರೆಸ್ವಾಮಿಯವರ ಬಗ್ಗೆ

ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ. ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಗೆ ಈಗ 103 ವರ್ಷ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮತ್ತು ದೀಪು

ದೀಪು ಎಂದೇ ಚಿರಪರಿಚಿತರಾದ ಕೆ.ಪಿ ಪ್ರದೀಪ್‌ರವರು ಪೆಡೆಸ್ಟ್ರಿಯನ್ ಪಿಕ್ಚರ್ಸ್ ಎಂಬ ಜನಪರ ಮಾಧ್ಯಮ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲೊಬ್ಬರು. ಮೂಲತಃ ಕೇರಳದ ತಿರುವೂರು ಜಿಲ್ಲೆಯ ಮಲಪ್ಪುರಂರವರಾದ ಇವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಾಮಾಜಿಕ-ರಾಜಕೀಯ ವಾಸ್ತವಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಸಿನಿಮಾ-ಸಾಕ್ಷ್ಯಚಿತ್ರವನ್ನು ಪರಿಣಾಮಕಾರಿಯಾಗಿ ಬಳಸಬೇಕೆನ್ನುವುದು ಅವರ ಅಭಿಲಾಷೆ.

2001 ರಲ್ಲಿ ಸಮಾನ ಮನಸ್ಕ ಗೆಳೆಯರೊಂದಿಗೆ ಪೆಡೆಸ್ಟ್ರಿಯನ್ ಪಿಕ್ಚರ್ಸ್ ಆರಂಭಿಸಿದ ಅವರು, ಕರ್ನಾಟಕದ ಬಾಬಾಬುಡನ್ ಗಿರಿ, ಬಿಎಂಐಸಿ ಹೋರಾಟ ಸೇರಿದಂತೆ ಹಲವು ಚಳವಳಿಗಳ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರು ನಿರ್ದೇಶಿಸಿದ ‘Shit’ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಹ ಲಭಿಸಿದೆ. ಗೌರಿ ಲಂಕೇಶ್‌ರವರ ಕುರಿತ ‘Our Gauri’, ಹೋರಾಟಗಾರ ನಜೀಬ್ ನಾಪತ್ತೆಯ ನಂತರ ‘ಅಮ್ಮಿ’ ಎಂಬ ಸಾಕ್ಷ್ಯಚಿತ್ರಗಳನ್ನು ಇತ್ತೀಚೆಗೆ ನಿರ್ದೇಶಿಸಿದ್ದಾರೆ.

#ಮಹಾನ್_ತಾತಅನನ್ಯ ಸ್ವಾತಂತ್ರ್ಯ ಸೇನಾನಿಯ ಸಂಘರ್ಷಗಾಥೆದೊರೆಸ್ವಾಮಿಯವರ ಹೋರಾಟದ ಕುರಿತು ಸಿನಿಮಾ ಅಕ್ಟೋಬರ್ 2 ಕ್ಕೆ ಬಿಡುಗಡೆಸ್ಥಳ: ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಅರಮನೆ ಮೈದಾನ ಬೆಂಗಳೂರು

Posted by Naanu Gauri on Wednesday, September 23, 2020

ದಣಿವರಿಯದ ಹೋರಾಟಗಾರ ದೊರೆಸ್ವಾಮಿಯವರ ಕುರಿತ ಸಾಕ್ಷ್ಯಚಿತ್ರವನ್ನು ನೋಡಲು ಬಯಸುವವರು 500 ರೂ ಪಾವತಿಸಿದರೆ ಅವರ ಮನೆಗೆ ತಲುಪಿಸಲಾಗುವುದು ಎಂದು ಯುವ ಹೋರಾಟಗಾರ ತ್ರಿಮೂರ್ತಿ ತಿಳಿಸಿದ್ದಾರೆ. ಆಸಕ್ತರು ಅವರನ್ನು 9964676400 ಸಂಪರ್ಕಿಸಬಹುದು.


ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...