Homeಚಳವಳಿಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: 'ಮಹಾನ್ ತಾತ' ಸಾಕ್ಷ್ಯಚಿತ್ರ ಬಿಡುಗಡೆ

ಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: ‘ಮಹಾನ್ ತಾತ’ ಸಾಕ್ಷ್ಯಚಿತ್ರ ಬಿಡುಗಡೆ

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇದೇ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ. ಗಾಂಧಿ ಜಯಂತಿಯ ಅಕ್ಟೋಬರ್ 2 ರ ಸಂಜೆ 4 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಬಿಡುಗಡೆಯಾಗಲಿದ್ದು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಅಂದೇ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಿದೆ ಎಂದು ಹೇಳಿಕೆ ತಿಳಿಸಿದೆ.

ದೊರೆಸ್ವಾಮಿಯವರ ಬಗ್ಗೆ

ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ. ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಗೆ ಈಗ 103 ವರ್ಷ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮತ್ತು ದೀಪು

ದೀಪು ಎಂದೇ ಚಿರಪರಿಚಿತರಾದ ಕೆ.ಪಿ ಪ್ರದೀಪ್‌ರವರು ಪೆಡೆಸ್ಟ್ರಿಯನ್ ಪಿಕ್ಚರ್ಸ್ ಎಂಬ ಜನಪರ ಮಾಧ್ಯಮ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲೊಬ್ಬರು. ಮೂಲತಃ ಕೇರಳದ ತಿರುವೂರು ಜಿಲ್ಲೆಯ ಮಲಪ್ಪುರಂರವರಾದ ಇವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಾಮಾಜಿಕ-ರಾಜಕೀಯ ವಾಸ್ತವಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಸಿನಿಮಾ-ಸಾಕ್ಷ್ಯಚಿತ್ರವನ್ನು ಪರಿಣಾಮಕಾರಿಯಾಗಿ ಬಳಸಬೇಕೆನ್ನುವುದು ಅವರ ಅಭಿಲಾಷೆ.

2001 ರಲ್ಲಿ ಸಮಾನ ಮನಸ್ಕ ಗೆಳೆಯರೊಂದಿಗೆ ಪೆಡೆಸ್ಟ್ರಿಯನ್ ಪಿಕ್ಚರ್ಸ್ ಆರಂಭಿಸಿದ ಅವರು, ಕರ್ನಾಟಕದ ಬಾಬಾಬುಡನ್ ಗಿರಿ, ಬಿಎಂಐಸಿ ಹೋರಾಟ ಸೇರಿದಂತೆ ಹಲವು ಚಳವಳಿಗಳ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರು ನಿರ್ದೇಶಿಸಿದ ‘Shit’ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಹ ಲಭಿಸಿದೆ. ಗೌರಿ ಲಂಕೇಶ್‌ರವರ ಕುರಿತ ‘Our Gauri’, ಹೋರಾಟಗಾರ ನಜೀಬ್ ನಾಪತ್ತೆಯ ನಂತರ ‘ಅಮ್ಮಿ’ ಎಂಬ ಸಾಕ್ಷ್ಯಚಿತ್ರಗಳನ್ನು ಇತ್ತೀಚೆಗೆ ನಿರ್ದೇಶಿಸಿದ್ದಾರೆ.

#ಮಹಾನ್_ತಾತಅನನ್ಯ ಸ್ವಾತಂತ್ರ್ಯ ಸೇನಾನಿಯ ಸಂಘರ್ಷಗಾಥೆದೊರೆಸ್ವಾಮಿಯವರ ಹೋರಾಟದ ಕುರಿತು ಸಿನಿಮಾ ಅಕ್ಟೋಬರ್ 2 ಕ್ಕೆ ಬಿಡುಗಡೆಸ್ಥಳ: ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಅರಮನೆ ಮೈದಾನ ಬೆಂಗಳೂರು

Posted by Naanu Gauri on Wednesday, September 23, 2020

ದಣಿವರಿಯದ ಹೋರಾಟಗಾರ ದೊರೆಸ್ವಾಮಿಯವರ ಕುರಿತ ಸಾಕ್ಷ್ಯಚಿತ್ರವನ್ನು ನೋಡಲು ಬಯಸುವವರು 500 ರೂ ಪಾವತಿಸಿದರೆ ಅವರ ಮನೆಗೆ ತಲುಪಿಸಲಾಗುವುದು ಎಂದು ಯುವ ಹೋರಾಟಗಾರ ತ್ರಿಮೂರ್ತಿ ತಿಳಿಸಿದ್ದಾರೆ. ಆಸಕ್ತರು ಅವರನ್ನು 9964676400 ಸಂಪರ್ಕಿಸಬಹುದು.


ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...