Homeಮುಖಪುಟಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

MSP ಅಷ್ಟೊಂದು ಅಗತ್ಯವಾಗಿದ್ದರೆ, ನೀವು ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಅದನ್ನು ಕಾನೂನಿನ ಭಾಗವಾಗಿ ಏಕೆ ಸೇರಿಸಲಿಲ್ಲ? ಹಾಗಾಗಿ MSP ಮೇಲಿನ ವಿರೋಧ ಪಕ್ಷಗಳ ಬೇಡಿಕೆಯನ್ನು ಸರ್ಕಾರ ಒಪ್ಪುವುದಿಲ್ಲ..

- Advertisement -
- Advertisement -

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ವಿವಾದಾತ್ಮಕ ಕೃಷಿ ಮಸೂದೆಗಳಲ್ಲಿ ಕನಿಷ್ಠ ಬೆಂಬಲ ಬೆಲೆಯನ್ನು (MSP) ಕಡ್ಡಾಯ ನಿಬಂಧನೆಯಾಗಿ ಸೇರಿಸಬೇಕೆಂಬ ವಿರೋಧ ಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್, “ಸರ್ಕಾರ MSPಗೆ ಬದ್ದವಾಗಿದ್ದರೂ, ಈ ಹಿಂದೆಯೂ ಇದು ಕಾನೂನಿನ ಭಾಗವಾಗಿರಲಿಲ್ಲ, ಹಾಗಾಗಿ ಈಗಲೂ ಇಲ್ಲ” ಎಂದು ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ಆನ್‌ಲೈನ್ ಐಡಿಯಾ ಎಕ್ಸ್‌ಚೇಂಜ್ ಕಾರ್ಯಕ್ರಮದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನರೇಂದ್ರ ಸಿಂಗ್ ತೋಮರ್, “MSP ಅಷ್ಟೊಂದು ಅಗತ್ಯವಾಗಿದ್ದರೆ, ನೀವು ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಅದನ್ನು ಕಾನೂನಿನ ಭಾಗವಾಗಿ ಏಕೆ ಸೇರಿಸಲಿಲ್ಲ? ಹಾಗಾಗಿ MSP ಮೇಲಿನ ವಿರೋಧ ಪಕ್ಷಗಳ ಬೇಡಿಕೆಯನ್ನು ಸರ್ಕಾರ ಒಪ್ಪುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

ದೇಶದಾದ್ಯಂತ ರೈತರ ಪ್ರತಿಭಟನೆಯ ಹೊರತಾಗಿಯೂ ಕೇಂದ್ರ ಸರ್ಕಾರ ಮಾನ್ಸೂನ್ ಅಧಿವೇಶನದಲ್ಲಿ, 3 ಕೃಷಿ ಮಸೂದೆಗಳನ್ನು ಅಂಗೀಕರಿಸಿತು. ಎಪಿಎಂಸಿಯ ಮಂಡಿ ಪದ್ದತಿ ಕೊನೆಗೊಂಡರೆ ಬೆಂಬಲ ಬೆಲೆಯನ್ನು ರದ್ದುಗೊಳಿಸಿದಂತಾಗುತ್ತದೆ ಎಂದು ಪ್ರತಿಭಟನಾ ನಿರತ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ 2020 ಮತ್ತು ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದದ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಅನ್ನು ಲೋಕಸಭೆಯಲ್ಲಿ ಗುರುವಾರ (ಸೆ.17) ಅಂಗೀಕರಿಸಲಾಯಿತು. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಯನ್ನು ಸೆಪ್ಟೆಂಬರ್ 13 ರಂದು ಅಂಗೀಕರಿಸಲಾಗಿದೆ.

ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

“ಮಸೂದೆಗಳ ಅಂಗೀಕಾರದ ನಂತರ, ಸರ್ಕಾರವು ಗೋಧಿ ಸೇರಿದಂತೆ ಆರು ರಬಿ ಬೆಳೆಗಳಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸುವುದರೊಂದಿಗೆ, MSP ಆಧಾರಿತ ಖರೀದಿ ಮುಂದುವರಿಯುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. ಆದ್ದರಿಂದ ಯಾರಾದರೂ ಏಕೆ ಚಿಂತಿಸಬೇಕು? ಈ ಮಸೂದೆಗಳಿಗೂ MSPಗೂ ಯಾವುದೇ ಸಂಬಂಧವಿಲ್ಲ. ಮಂಡಿಯ ಆವರಣದ ಹೊರಗಿನ ವ್ಯಾಪಾರದೊಂದಿಗೆ ಮಸೂದೆಗಳು ವ್ಯವಹರಿಸುತ್ತವೆ” ಎಂದು ತೋಮರ್ ಹೇಳಿದರು.

ಮಸೂದೆಗಳನ್ನು ಸಮರ್ಥಿಸಿಕೊಂಡ ತೋಮರ್, “ದೇಶದ ಹಿತದೃಷ್ಟಿಯಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೆ, ಮತಗಳನ್ನು ಲೆಕ್ಕಿಸದೆ ನಿರ್ಧಾರ ತೆಗೆದುಕೊಳ್ಳಲು ಮೋದಿ ಸರ್ಕಾರ ಬದ್ಧವಾಗಿದೆ. ಈ ಮಸೂದೆಗಳಿಂದ ಕೃಷಿ ಮತ್ತು ರೈತರಿಗೆ ಹೆಚ್ಚಿನ ಲಾಭ ಸಿಗಲಿದೆ ಎಂದು ನನಗೆ ಖಾತ್ರಿಯಿದೆ” ಎಂದು ಹೇಳಿದರು.


ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...