Homeಮುಖಪುಟಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ "ರಾಜಕೀಯ ಡಿಎನ್‌ಎ"ಯಲ್ಲಿ ಏನೋ ದೋಷವಿದೆ ಎಂದು ಪ್ರಧಾನಿ ನರೇಂದ್ರ ಮೋದಿ 2015 ರಲ್ಲಿ ಹೇಳಿದ್ದು, ಈಗ ಬ್ಯಾನರ್‌ ರೂಪದಲ್ಲಿ ರಾರಾಜಿಸುತ್ತಿದೆ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಈ ವಾರದಲ್ಲಿ ಮತದಾನದ ದಿನಾಂಕ ಪ್ರಕಟವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಲ್ಲರ ಕಣ್ಣು ಚುನಾವಣಾ ಆಯೋಗದ ಕಡೆಗಿದೆ. ಈ ನಡುವೆ ಅನಾಮಧೇಯ ಬ್ಯಾನರ್‌ಗಳು ಅಡಳಿತಾರೂಢ ಪಕ್ಷಗಳನ್ನು ಕಾಡಲು ಪ್ರಾರಂಭಿಸಿವೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಮಾರು 5 ವರ್ಷಗಳ ಹಿಂದೆ ನೀಡಿದ್ದ ವಿವಾದಾತ್ಮಕ “ಡಿಎನ್‌ಎ” ಹೇಳಿಕೆ ಈಗ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ  ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (NDA) ಕಾಡಲು ಮತ್ತೆ ಬ್ಯಾನರ್‌ ರೂಪದಲ್ಲಿ ರಸ್ತೆಗಳಿಗಿಳಿದಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ನಿನ್ನೆ ಬೆಳಿಗ್ಗೆ ಪಾಟ್ನಾದಲ್ಲಿ ಮೋದಿಯವರ ಡಿಎನ್‌ಎ ಹೇಳಿಕೆ ಆಧಾರಿತ ದೊಡ್ಡ ವರ್ಣರಂಜಿತ ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳು ಕಾಣಿಸಿಕೊಂಡವು. ಬಿಜೆಪಿ ಮತ್ತು ಜೆಡಿಯು ಪಕ್ಷಗಳ ಮುಖಂಡರುಗಳು ಮುಜುಗರಕ್ಕಿಡು ಮಾಡುವಂತೆ ಮೋದಿ ಹೇಳಿಕೆಯನ್ನು ಬ್ಯಾನರ್‌ನಲ್ಲಿ ಹೈಲೈಟ್ ಮಾಡಲಾಗಿದೆ.

PC: Oneindia Hindi

2015ರ ಜುಲೈನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನಿತೀಶ್ ಕುಮಾರ್ ‌ ಡಿಎನ್‌ಎನಲ್ಲಿ ಏನೋ ತೊಂದರೆ ಇದೆ ಎಂದಿದ್ದರು. ಈ ವಾಕ್ಯವನ್ನು ಬ್ಯಾನರ್‌ನಲ್ಲಿ ಹೈಲಟ್ ಮಾಡಲಾಗಿದೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ “ನಿತೀಶ್ ಕುಮಾರ್ ಕೆ ಡಿಎನ್‌ಎ ಮೇ ಹೇ ಗಡ್‌ಭಡ್‌ ಹೈ”.  ಬ್ಯಾನರ್‌ಗಳಲ್ಲಿ ಬಳಸಲಾದ ಮತ್ತೊಂದು ಸಾಲು ಕುಮಾರ್ ಅವರ ನಂಬಿಕೆಯನ್ನು ಪ್ರಶ್ನಿಸಿದೆ: “ಮಾರ್ತೆ ರಹೆ ಬಸಾ ಪಲಟಿ, ನಿತೀಶ್ ಕಿ ಹರ್ ಬಾತ್ ಕಚ್ಚಿ” ಎಂಬ ವಾಕ್ಯಗಳನ್ನು ಬ್ಯಾನರ್‌ನಲ್ಲಿ ಬಳಸಲಾಗಿದೆ. ವಿಶೇಷವೆಂದರೆ, ಬ್ಯಾನರ್‌ಗಳ ಪ್ರಾಯೋಜಕರ ಹೆಸರನ್ನು ಉಲ್ಲೇಖಿಸಲಾಗಿಲ್ಲ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

2015 ರಲ್ಲಿ ಪಾಟ್ನಾದಿಂದ 75 ಕಿ.ಮೀ ದೂರದಲ್ಲಿರುವ ಮುಜಾಫರ್ಪುರದಲ್ಲಿ ನಡೆದ ಪರಿವರ್ತನಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಅವರ “ರಾಜಕೀಯ ಡಿಎನ್‌ಎ”ಯಲ್ಲಿ ಏನಾದರೂ ದೋಷವಿದೆಯೇ ಎಂದಿದ್ದರು.

’ಅವರು ಬಿಜೆಪಿಯಿಂದ ತಮ್ಮ ಬೆಂಬಲ ಹಿಂಪಡೆದುಕೊಂಡಾಗ ನನಗೆ ನೋವುಂಟಾಗಿತ್ತು( 2013ರಲ್ಲಿ ಜೆಡಿ-ಯು ಬಿಜೆಪಿಯಿಂದ ವಿಭಜನೆಯಾಗಿತ್ತು) ಆದರೆ ಮಾಜಿ ಮುಖ್ಯಮಂತ್ರಿ ಜಿತಾನ್ ರಾಮ್ ಮಾಂಜಿ ಅಂತಹವರೊಂದಿಗೂ ಅದೇ ರೀತಿ ಮಾಡಿದಾಗ, ಅವರ ರಾಜಕೀಯ ಡಿಎನ್‌ಎಯಲ್ಲಿ ಏನಾದರೂ ದೋಷವಿದೆ ಎಂದು ನಾನು ಕಂಡುಕೊಂಡೆ’ ಎಂದು ಮೋದಿ ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಜೆಡಿಯು ಮುಖ್ಯಸ್ಥರು ಇದನ್ನು ಬಿಹಾರದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿದ್ದರು. ಮೋದಿಯವರು ತಮ್ಮ ವಿರುದ್ಧದ ಡಿಎನ್‌ಎ ಹೇಳಿಕೆಯನ್ನು ಹಿಂಪಡೆಯುವಂತೆ ಹೇಳಿ, ಈ ಹೇಳಿಕೆಯ ವಿರುದ್ಧ ಸಹಿ ಅಭಿಯಾನವನ್ನು ಪ್ರಾರಂಭಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು, ಆರ್‌ಜೆಡಿ, ಕಾಂಗ್ರೆಸ್ ಮೈತ್ರಿ ಬಿಜೆಪಿಯನ್ನು ಸೋಲಿಸಿ ಜಯಗಳಿಸಿತ್ತು. ಆದರೆ ನಿತೀಶ್ ಕುಮಾರ್ ಅವರು ಮೈತ್ರಿಯನ್ನು ಕೈಬಿಟ್ಟು ಮತ್ತೊಮ್ಮೆ ಬಿಜೆಪಿಯೊಂದಿಗೆ ಕೈಜೋಡಿಸಿ 2017 ರ ಜುಲೈನಲ್ಲಿ ಹೊಸ ಸರ್ಕಾರವನ್ನು ರಚಿಸಿದ್ದರು.

PC:Zee News

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮೋದಿ ಮತ್ತು ಕುಮಾರ್ ಅವರನ್ನು ಗುರಿಯಾಗಿಸುವ ಇತ್ತೀಚಿನ ಬ್ಯಾನರ್‌ಗಳು ಹಠಾತ್ತನೆ ಕಾಣಿಸಿಕೊಂಡಿದ್ದು, ಇದು ಪ್ರತಿಪಕ್ಷ ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿ ಮತ್ತು ಎನ್‌ಡಿಎ ನಡುವಿನ ಬ್ಯಾನರ್‌ ಯುದ್ಧ ಎಂದೇ ಭಾವಿಸಲಾಗುತ್ತಿದೆ.

ಬಿಹಾರದ ರಾಜಕೀಯ ವಿಶ್ಲೇಷಕ ಎ.ಕೆ.ಮಿಶ್ರಾ ಹೇಳುವಂತೆ, ಪ್ರತಿಪಕ್ಷ ಮಹಾಮೈತ್ರಿ ಮತ್ತು ಆಡಳಿತಾರೂಢ ಎನ್‌ಡಿಎ ನಡುವಿನ ಬ್ಯಾನರ್‌ಗಳು ಮತ್ತು ಪೋಸ್ಟರ್‌ ಯುದ್ಧವು ರಾಜ್ಯದಾದ್ಯಂತಾ ತೀವ್ರಗೊಳ್ಳುತ್ತದೆ. ಇದು ಅವರ ಬೆಂಬಲಿಗರು ಮತ್ತು ಮತದಾರರಿಗೆ ರಾಜಕೀಯ ಸಂದೇಶವನ್ನು ಕಳುಹಿಸುವ ಕಾರ್ಯತಂತ್ರದ ಒಂದು ಭಾಗವಾಗಿದೆ. ಚುನಾವಣಾ ದಿನಾಂಕ ಪ್ರಕಟವಾಗಲಿ ಆಗ ಇನ್ನೂ ಇಂತಹ ಅನೇಕ ಬ್ಯಾನರ್ ಮತ್ತು ಹೋರ್ಡಿಂಗ್ ಬರಲಿವೆ ಎನ್ನುತ್ತಾರೆ.


ಇದನ್ನೂ ಓದಿ: ನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...