Homeಚಳವಳಿಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು - ಕೆ.ಎನ್ ಉಮೇಶ್

ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು – ಕೆ.ಎನ್ ಉಮೇಶ್

ಕೊರೊನಾ ಬರುವುದಕ್ಕಿಂತ ಮುಂಚೆ ದೇಶದಲ್ಲಿ 28% ಬಡತನ ಇತ್ತು. ಲಾಕ್‌ಡೌನ್ ನಂತರ ಅದು ದುಪ್ಪಟ್ಟಾಗಿದೆ. ದೇಶದಲ್ಲಿ 14 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾಯಂ ಕೆಲಸ ಎಂಬದನ್ನು ಕಿತ್ತುಹಾಕಿ ಆ ಜಾಗದಲ್ಲಿ ಗುತ್ತಿಗೆ ಪದ್ದತಿ ತರಲಾಗುತ್ತಿದೆ.

- Advertisement -
- Advertisement -

ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು ಅಂದರೆ ದೇಶದ ಕಾರ್ಮಿಕರು. ಬಿಜೆಪಿ ಸಂತತಿಯ ಪಾಪದ ಕೊಡ ತುಂಬಿದೆ. ಹಾಗಾಗಿ ಕಾರ್ಮಿಕ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಿಐಟಿಯು ಮುಖಂಡ ಕೆ.ಎನ್ ಉಮೇಶ್ ಆರೋಪಿಸಿದ್ದಾರೆ.

ಕಾರ್ಮಿಕರು, ಶ್ರಮಜೀವಿಗಳ ಹಕ್ಕುಗಳ ರಕ್ಷಣೆಗಾಗಿ – ಕೋವಿಡ್ ಸಂಕಷ್ಟ ಪರಿಹಾರಕ್ಕಾಗಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ‘ವಿಧಾನ ಸೌಧ ಚಲೋ’ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ನರೇಂದ್ರ ಮೋದಿಯವರು ಅವೈಜ್ಞಾನಿಕ ಲಾಕ್‌ಡೌನ್ ಹೇರಿದ್ದಲ್ಲದೇ, ಸಾಂಕ್ರಾಮಿಕ ಕಾಲದಲ್ಲಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ, ಸರ್ಕಾರಿ ಕಂಪನಿಗಳನ್ನು ಖಾಸಗೀಕರಣ ಮಾಡುವ ಮೂಲಕ ದೇಶದ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ದೂರಿದರು.

ಸಿಐಟಿಯು ರಾಜ್ಯ ಅಧ್ಯಕ್ಷರಾದ ವರಲಕ್ಷ್ಮಿಯವರು ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, “ನಮ್ಮ ದೇಶದೊಳಗೆ ಪ್ರಜಾಪ್ರಭುತ್ವ ಇಲ್ಲದಾಗಿದೆ, ಯಾಕೆಂದರೆ ಸರ್ಕಾರ ಪ್ರಜೆಗಳಿಗೆ ಕೆಲಸ ಮಾಡುತ್ತಿಲ್ಲ. ಬದಲಿಗೆ ದೇಶದ ಬಂಡವಾಳಶಾಹಿಗಳಿಗೆ, ಕಾರ್ಪೋರೇಟ್ ಕಂಪನಿಗಳಿಗಾಗಿ, ವಿದೇಶಿ ಹೂಡಿಕೆದಾರರಿಗಾಗಿ ಕೆಲಸ ಮಾಡುತ್ತಿದೆ. ಅವರ ಪರವಾದ ಕಾನೂನುಗಳನ್ನು ಲೋಕಸಭೆಯಲ್ಲಿ ಜಾರಿಗೊಳಿಸಲಾಗುತ್ತಿದೆ. ಕಾರ್ಮಿಕರ ಸಾಮೂಹಿಕ ಚೌಕಾಶಿಯನ್ನು ಸರ್ಕಾರ ಇಲ್ಲದಾಗಿಸಿದೆ. ಕೊರೋನಾ ಸಮಯದಲ್ಲಿ ಜನರಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಶ್ರೀಮಂತರ ಪರವಾಗಿದೆ. ಇದರಿಂದ ಕಾರ್ಮಿಕರು ಕೆಲಸ ಮಾತ್ರವಲ್ಲ ಬದುಕನ್ನೇ ಕಳೆದುಕೊಳ್ಳುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಕಾರ್ಮಿಕರು, ಶ್ರಮಜೀವಿಗಳ ಹಕ್ಕುಗಳ ರಕ್ಷಣೆಗಾಗಿ-ಕೋವಿಡ್ ಸಂಕಷ್ಟ ಪರಿಹಾರಕ್ಕಾಗಿವಿಧಾನ ಸೌಧ ಚಲೋ

Posted by Naanu Gauri on Wednesday, September 23, 2020

ಕೊರೊನಾ ಬರುವುದಕ್ಕಿಂತ ಮುಂಚೆ ದೇಶದಲ್ಲಿ 28% ಬಡತನ ಇತ್ತು. ಲಾಕ್‌ಡೌನ್ ನಂತರ ಅದು ದುಪ್ಪಟ್ಟಾಗಿದೆ. ದೇಶದಲ್ಲಿ 14 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾಯಂ ಕೆಲಸ ಎಂಬದನ್ನು ಕಿತ್ತುಹಾಕಿ ಆ ಜಾಗದಲ್ಲಿ ಗುತ್ತಿಗೆ ಪದ್ದತಿ ತರಲಾಗುತ್ತಿದೆ. ಇದರಿಂದ ಕಾರ್ಮಿಕರು ತಮಗಿದ್ದ ಕಾನೂನುಬದ್ಧ ಹಕ್ಕುಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು-ಕಾರ್ಮಿಕರನ್ನು ಬೀದಿಪಾಲು ಮಾಡಿ ತಮಗೆ ಬೇಕಾದ ಮಸೂದೆಗಳಿಗೆ ಅಂಗೀಕಾರ ಪಡೆಯಲು ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ದೇಶದ 1% ಶ್ರೀಮಂತರಿಗಾಗಿ ದೇಶದ 99% ಜನರ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಜನರ ಕೈಗೆ ಸರ್ಕಾರ ನೇರ ನಗದು ನೀಡಬೇಕು. ಕಾರ್ಮಿಕರಿಗೆ ಹಣ ನೀಡಿದರೆ ಅವರು ಖರ್ಚು ಮಾಡುತ್ತಾರೆ. ಇದರಿಂದ ಉತ್ಪಾದನೆ ಹೆಚ್ಚಾಗುತ್ತದೆ, ಉದ್ಯೋಗಗಳು ಹೆಚ್ಚಾಗುತ್ತವೆ. ಆದರೆ ಸರ್ಕಾರ ಇದನ್ನು ಬಿಟ್ಟು ಬಂಡವಾಳಶಾಹಿಗಳಿಗೆ ಮಾತ್ರ ಹಣ ನೀಡುತ್ತಿದೆ. ಕೊಂಡುಕೊಳ್ಳಲು ಜನರ ಬಳಿ ಹಣವಿಲ್ಲದ ಮೇಲೆ ಉತ್ಪಾದನೆ ಮಾಡಿ ಏನು ಪ್ರಯೋಜನ? ಇಷ್ಟು ಸಾಮಾನ್ಯ ಜ್ಞಾನ ಸರ್ಕಾರಕ್ಕಿಲ್ಲವೇ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರ್ ಕಿಡಿಕಾರಿದ್ದಾರೆ.

ಕಾರ್ಮಿಕರ ಮಸೂದೆಗಳು ಮೊದಲು ವಿಚ್ಛೇದನಕ್ಕೆ ಅರ್ಜಿ ಹಾಕಿ ಮದುವೆ ಮಾಡಿದಂತೆ. ಮಾಲೀಕರನ್ನು ಕಾಪಾಡಲು ಕಾರ್ಮಿಕರ ಸಂಘಟನಾ ಹಕ್ಕನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ಮಾಲೀಕರು ಕಾರ್ಮಿಕರ ಪರ ಕಾನೂನುಗಳು ಇರುವಾಗಲೇ ಉಲ್ಲಂಘನೆ ಮಾಡುತ್ತಾರೆ, ಇನ್ನು ಅವೂ ಇಲ್ಲದೆ ಇರುವಾಗಿನ ಅವಸ್ಥೆ ಅರ್ಥ ಮಾಡಿಕೊಳ್ಳಿ. ಇದೇ 28ಕ್ಕೆ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಸಿಐಟಿಯು ಬೆಂಬಲ ನೀಡುತ್ತದೆ
– ಮೀನಾಕ್ಷಿ ಸುಂದರ್

ಪ್ರತಿಭಟನಾ ಸ್ಥಳಕ್ಕೆ ಕಾರ್ಮಿಕ ಸಚಿವರು ಬರಬೇಕು, ತಮ್ಮ ಹಕ್ಕೊತ್ತಾಯಗಳನ್ನು ಆಲಿಸಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.


ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...