Homeಚಳವಳಿ#MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ - ಟ್ವಿಟ್ಟರ್ ಅಭಿಯಾನ

#MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಯಾವುದೇ ಯೋಜನೆ ಕೈಗೊಳ್ಳದೆ ಏಕಾಏಕಿ ಲಾಕ್‌ಡೌನ್ ಘೋಷಣೆ ಮಾಡಿ ಸಾವಿರಾರು ವಲಸೆ ಕಾರ್ಮಿಕರ ಸಾವಿಗೆ ಕೇಂದ್ರ ಕಾರಣವಾಗಿದೆ. ಆದರೆ ಈ ಕುರಿತು ಮಾಹಿತಿಯಿಲ್ಲದ ಕಾರಣ ಪರಿಹಾರ ಸಹ ಇಲ್ಲ ಎಂದು ಕೇಂದ್ರ ಕೈಚೆಲ್ಲಿ ಕುಳಿತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಮಿಕ ದೇಶಕ್ಕೆ ಅಪ್ಪಳಿಸಿದ ಮೇಲೆ ಕೇಂದ್ರ ಸರ್ಕಾರ ಏಕಾಏಕಿ ಘೋಷಣೆ ಮಾಡಿದ ಲಾಕ್‌ಡೌನ್‌ನಿಂದ ಆದ ದುಷ್ಪರಿಣಾಮಗಳು, ಪಿಎಂ ನಿಧಿಯ ವಿವರಗಳು, ವಲಸೆ ಕಾರ್ಮಿಕರ ಬಗ್ಗೆ ಗಮನ ಹರಿಸದ ಸರ್ಕಾರದ ವಿರುದ್ಧ ಟ್ವಿಟ್ಟರ್ ಅಭಿಯಾನ ಶುರುವಾಗಿದೆ. ಇಂದು ಸಂಜೆ 7 ಗಂಟೆಯಿಂದ #MigrantLivesStillMatter ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಅಭಿಯಾನ ನಡೆಯಲಿದೆ ಎಂದು Migrant Workers Solidarity Network ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿ ಆರು ತಿಂಗಳು ಕಳೆದಿದೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳಿಲ್ಲದೇ, ಯಾವುದೇ ಯೋಜನೆ ಕೈಗೊಳ್ಳದೆ ಏಕಾಏಕಿ ಲಾಕ್‌ಡೌನ್ ಘೋಷಣೆ ಮಾಡಿ ಸಾವಿರಾರು ವಲಸೆ ಕಾರ್ಮಿಕರ ಸಾವಿಗೆ ಕೇಂದ್ರ ಕಾರಣವಾಗಿದೆ. ಆದರೆ ಈ ಕುರಿತು ಮಾಹಿತಿಯಿಲ್ಲದ ಕಾರಣ ಪರಿಹಾರ ಸಹ ಇಲ್ಲ ಎಂದು ಕೇಂದ್ರ ಕೈಚೆಲ್ಲಿ ಕುಳಿತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: NEP ಜಾರಿ ಕರ್ನಾಟಕದಲ್ಲಿಯೇ ಮೊದಲು ಎಂದ ಡಿಸಿಎಂ: ಟ್ವಿಟ್ಟರ್‌ನಲ್ಲಿ ‘#RejectNEP2020’ ಟ್ರೆಂಡ್‌

ಆರು ತಿಂಗಳು ಕಳೆದರು ಈ ದುರ್ಘಟನೆಗಳಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ವಲಸೆ ಕಾರ್ಮಿಕರ ಜೀವನೋಪಾಯಕ್ಕೆ ಸರ್ಕಾರ ಯಾವುದೇ ಹೆಜ್ಜೆ ಮುಂದಿಡುತ್ತಿಲ್ಲ. ಅವರಿಗೆ ಸೂಕ್ತ ಮೂಲಸೌಕರ್ಯಗಳನ್ನು ಸಹ ಸರ್ಕಾರ ನೀಡಿಲ್ಲ. ಪಿಎಂ ನಿಧಿ ಬಗ್ಗೆ ಈವರೆಗೆ ಯಾರಿಗೂ ಮಾಹಿತಿ ನೀಡುತ್ತಿಲ್ಲ. ಕೊರೊನಾ ಕಾರಣದಿಂದ ಕಷ್ಟದಲ್ಲಿರುವವರ ಸಹಾಯಕ್ಕೆ ಎಂದು ಕೋಟ್ಯಾಂತರ ಜನ ಕೋಟ್ಯಾಂತರ ರೂಪಾಯಿಗಳನ್ನು ದಾನ ನೀಡಿದ್ದಾರೆ ಆದರೆ ಅದರ ಬಗ್ಗೆ ಕೇಂದ್ರ ಸರ್ಕಾರ ತುಟಿಕ್ ಪಿಟಿಕ್ ಎನ್ನುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು ದೂರಿದ್ದಾರೆ.

ಇತ್ತ ಮಾಧ್ಯಮಗಳು ಜನರ ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಜನಸಾಮಾನ್ಯರನ್ನು ಬೇರೆಡೆಗೆ ತಿರುಗಿಸುವ ಕೆಲಸ ಮಾಡುತ್ತಿದ್ದು, ವಾಸ್ತವದ ಸಮಸ್ಯೆಗಳನ್ನು ಮರೆಮಾಚುತ್ತಿವೆ. ಈ ಎಲ್ಲಾ ವಿಚಾರಗಳ ವಿರುದ್ಧ ಪ್ರತಿಭಟಿಸಲು ಟ್ವಿಟ್ಟರ್ ಅಭಿಯಾನ ಕೈಗೊಂಡಿದೆ. 7 ಗಂಟೆಯಿಂದ #MigrantLivesStillMatter ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಲು Migrant Workers Solidarity Network ಮನವಿ ಮಾಡಿದೆ.


ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....