Homeಮುಖಪುಟಮೆಹಬೂಬಾ ಮುಫ್ತಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಗಳು ಇಲ್ತಿಜಾ

ಮೆಹಬೂಬಾ ಮುಫ್ತಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಗಳು ಇಲ್ತಿಜಾ

ಪ್ರಜಾಪ್ರಭುತ್ವದ ದೇಶದಲ್ಲಿ ಅವರ ಬಂಧನ ಕಾನೂನುಬಾಹಿರವಾಗಿದೆ. ಪ್ರತಿಪಕ್ಷದ ಪ್ರಮುಖ ನಾಯಕಿನನ್ನು ಒಂದು ವರ್ಷದಿಂದ ವಿಚಾರಣೆಗೆ ಒಳಪಡಿಸದೆ ಜೈಲಿಗೆ ಹಾಕಲಾಗಿದೆ - ಇಲ್ತಿಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಅವರು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ತಮ್ಮ ತಾಯಿಯನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಮೆಹಬೂಬಾ ಅವರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ 2019ರ ಆಗಸ್ಟ್ 5 ಆರ್ಟಿಕಲ್ 370 ರದ್ದತಿಗೆ ಮೊದಲಿನಿಂದಲೇ ಬಂಧನದಲ್ಲಿಡಲಾಗಿದೆ.

ವಕೀಲ ಆಕಾಶ್ ಕಮ್ರಾ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ತನ್ನ ತಾಯಿಯ ಬಂಧನ ಮತ್ತು ನಂತರದ ಬಂಧನ ವಿಸ್ತರಣೆಗಳು ಕಾನೂನುಬಾಹಿರ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ನನ್ನ ತಾಯಿಗೆ ಏನಾದರೂ ಆದರೆ ಕೇಂದ್ರವೇ ಹೊಣೆ: ಮೆಹಬೂಬಾ ಮುಫ್ತಿ ಮಗಳ ಆತಂಕ

ಆರ್ಟಿಕಲ್ 370 ರದ್ದು ಮಾಡುವ ಕೆಲವೇ ಗಂಟೆಗಳ ಮೊದಲು, ರಾಜಕೀಯವಾಗಿ ಸಕ್ರಿಯವಾಗಿರುವ ನೂರಾರು ಜನರನ್ನು ಬಂಧಿಸಲಾಗಿತ್ತು. ಕಳೆದ ವರ್ಷದ ಆಗಸ್ಟ್ ನಿಂದಲೇ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನೂ ಬಂಧಿಸಿಡಲಾಗಿದೆ. ಆರು ತಿಂಗಳ ಕಸ್ಟಡಿ ಅವಧಿ ಮುಗಿಯುವ ಮುನ್ನವೇ ಕಠಿಣ ಪಿಎಸ್‌ಎ ಅಡಿಯಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಜುಲೈ 31 ರಂದು, ಜಮ್ಮು ಮತ್ತು ಕಾಶ್ಮೀರ ಆಡಳಿತವು ಪಿಎಸ್ಎ ಅಡಿಯಲ್ಲಿ ಅವರ ಬಂಧನವನ್ನು ಮತ್ತೆ ಮೂರು ತಿಂಗಳು ವಿಸ್ತರಿಸಿದೆ.

“ಪ್ರಜಾಪ್ರಭುತ್ವದ ದೇಶದಲ್ಲಿ ಅವರ ಬಂಧನ ಕಾನೂನುಬಾಹಿರವಾಗಿದೆ. ಪ್ರತಿಪಕ್ಷದ ಪ್ರಮುಖ ನಾಯಕಿನನ್ನು ಒಂದು ವರ್ಷದಿಂದ ವಿಚಾರಣೆಗೆ ಒಳಪಡಿಸದೆ ಜೈಲಿಗೆ ಹಾಕಲಾಗಿದೆ ”ಎಂದು ಇಲ್ತಿಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಮೆಹಬೂಬಾ ಬಂಧನವನ್ನು ಪ್ರಶ್ನಿಸಿ ಇಲ್ತಿಜಾ ಸಲ್ಲಿಸಿದ್ದ ಮೊದಲ ಅರ್ಜಿ ಫೆಬ್ರವರಿ 26 ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಇನ್ನು ಬಾಕಿ ಇದೆ. ಇತ್ತೀಚಿನ ಅರ್ಜಿಯಲ್ಲಿ ಇಲ್ತಿಜಾ ಇಲ್ಲಿಯವರೆಗೆ ಪ್ರತಿವಾದಿಗಳು [ಜೆ & ಕೆ ಆಡಳಿತ] ಶೀರ್ಷಿಕೆಯ ರಿಟ್ ಅರ್ಜಿಗೆ ಯಾವುದೇ ಉತ್ತರ ಅಥವಾ ಪ್ರತಿ-ಅಫಿಡವಿಟ್ ಸಲ್ಲಿಸಿಲ್ಲ ಎಂದು ಆರೋಪಿಸಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಉತ್ತರ ಸಲ್ಲಿಸಲು ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಆದೇಶಿಸಿದೆ.

ಇದನ್ನೂ ಓದಿ: ನಮ್ಮನ್ನು ಪ್ರಾಣಿಗಳಂತೆ ಪಂಜರದಲ್ಲಿ ಕೂಡಿ ಹಾಕಾಲಾಗಿದೆ- ಮೆಹಬೂಬಾ ಮುಫ್ತಿ ಅವರ ಮಗಳಾದ ಇಲ್ತೀಜಾ ಜಾವೇದ್ ಆರೋಪ

ದಿ ವೈರ್‌ಗೆ, ಪ್ರತಿಕ್ರಿಯೆ ನೀಡಿರುವ ಇಲ್ತಿಜಾ ’ಇದು… ನ್ಯಾಯಾಲಯಗಳು ಮತ್ತು ಸುಪ್ರೀಂಕೋರ್ಟ್ ಬಗ್ಗೆ ಅವರು ಹೊಂದಿರುವ ಗೌರವವನ್ನು ನಿಮಗೆ ತೋರಿಸುತ್ತದೆ” ಎಂದಿದ್ದಾರೆ.

ಅರ್ಜಿಯಲ್ಲಿ ಮೆಹಬೂಬಾರನ್ನು ತಕ್ಷಣ ಬಿಡುಗಡೆ ಮಾಡುವಂತೆ ಮತ್ತು ಅವರ ವಿರುದ್ಧದ ಎಲ್ಲಾ ಬಂಧನ ಆದೇಶಗಳನ್ನು ರದ್ದುಪಡಿಸುವಂತೆ ಜೊತೆಗೆ ಆಕೆಯ ದೀರ್ಘಕಾಲದ ಜೈಲುವಾಸಕ್ಕೆ ಸೂಕ್ತ ಪರಿಹಾರವನ್ನು ನೀಡುವಂತೆ ಕೋರಲಾಗಿದೆ. ಮಾಜಿ ಸಿಎಂ ಪ್ರಸ್ತುತ ಫೇರ್‌ವ್ಯೂ ಬಂಗಲೆಯ ಅಧಿಕೃತ ನಿವಾಸದಲ್ಲಿದ್ದಾರೆ. ಇದನ್ನು ಜೈಲಿನ ಅಂಗಸಂಸ್ಥೆ ಎಂದು ಘೋಷಿಸಲಾಗಿದೆ. ಅವರು ಸದ್ಯ ಬಂಧನದಲ್ಲಿರುವ ಏಕೈಕ ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕಾರಣಿಯಾಗಿದ್ದಾರೆ.


ಇದನ್ನೂ ಓದಿ: ಮೆಹಬೂಬಾ ಮುಫ್ತಿ ಬಂಧನದಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಹಾನಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...