Homeಅಂಕಣಗಳುಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

ಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

- Advertisement -
- Advertisement -

ಪೀಕೆ |
ಒಂದು ಆಡಿಯೋ ಸುತ್ತ ನಡೆಯುತ್ತಿರುವ ಒಟ್ಟೂ ಪ್ರಹಸನ ಬಿಚ್ಚಿಡುತ್ತಿರುವ ಸತ್ಯ ಏನೆಂದರೆ, ಆಪರೇಷನ್ ಕಮಲಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬೆಂಬಲವಿದೆ ಎಂಬುದನ್ನು ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಒಪ್ಪಿಕೊಳ್ಳುತ್ತಿದ್ದಾರೆ ಬಿಜೆಪಯ ನಾಯಕರು!

ಸದನದಲ್ಲಿ ಈ ಆಡಿಯೋ ವಿಚಾರವಾಗಿ ಮಾತನಾಡಿದ ಬಿಜೆಪಿಯ ಎಲ್ಲ ನಾಯಕರು ಪದೇ ಪದೇ, ‘ಸ್ಪೀಕರ್ ರಮೇಶಕುಮಾರವರೇ, ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ತಮ್ಮ ಹೆಸರು ಉಲ್ಲೇಖವಾದುದಕ್ಕೆ ನಮಗೂ ಬೇಜಾರಾಗಿದೆ’ ಎಂದು ಸ್ಪೀಕರ್ ಅವರ ಪ್ರಾಮಾಣಿಕತೆಗೆ ಸರ್ಟಿಫಿಕೆಟ್ ಕೊಡುತ್ತಿದ್ದಾರೆ. ಆದರೆ, ಆ ಆಡಿಯೋದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರೂ ಪ್ರಸ್ತಾಪವಾಗಿದೆಯಲ್ಲ? ಆ ಬಗ್ಗೆ ಇಲ್ಲಿವರೆಗೂ ಯಾವ ಬಿಜೆಪಿ ನಾಯಕನೂ ಖೇದ ವ್ಯಕ್ತಪಡಿಸಿಲ್ಲ, ನೊಂದುಕೊಂಡಿಲ್ಲ. ಅಂದರೆ ಅವರಿಗೆ ಪಕ್ಕಾ ಗೊತ್ತಿದೆ: ಮೋದಿ-ಶಾ ಬೆಂಬಲದಿಂದಲೇ ಇದೆಲ್ಲ ನಡೆಯುತ್ತಿದೆ ಎಂಬುದು. ಆದರೆ ಬಾಹ್ಯವಾಗಿಯಾದರೂ ಈ ಕುರಿತಂತೆ ಮಾತಾಡಬಹುದಿತ್ತಲ್ಲ? ಎಂಟು ತಿಂಗಳಿಂದ ನಡೆದಿರುವ ಅಸಹ್ಯ ಆಪರೇಷನ್ ಕಮಲದಲ್ಲಿ ತಮ್ಮ ರಾಷ್ಟ್ರೀಯ ನಾಯಕರೂ ಭಾಗಿ ಎಂಬುದು ಮನದಟ್ಟಾಗಿರುವುದರಿಂದ ಅರ‍್ಯಾರಿಗೂ ಆಡಿಯೊದಲ್ಲಿ ಬಂದ ‘ಸತ್ಯ’ವನ್ನು ವಿರೋಧಿಸಲು ಆಗುತ್ತಿಲ್ಲವೇ?

ಇಲ್ಲಿ ಒಂದಿಷ್ಟು ಅಂಶಗಳನ್ನು ಸುಮ್ಮನೆ ಗಮನಿಸಿ:

* ಸೋಮವಾರ ಸ್ಪೀಕರ್ ಈ ವಿಷಯ ಎತ್ತಿದ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿಯ ಮಾಧುಸ್ವಾಮಿ, ‘ಎಲ್ಲೋ ಯಾರೋ ಮಾತಾಡಿದ್ದಕ್ಕೆ ತಾವು (ಸ್ಪೀಕರ್) ನೊಂದುಕೊಳ್ಳಬೇಡಿ. ನಿಮ್ಮ ಬಗ್ಗೆ ನಮಗೆಲ್ಲ ಗೌರವವಿದೆ. ಏನೋ ಅಚಾತುರ್ಯ ನಡೆದಿದೆ, ಅದನ್ನು ಮರೆತುಬಿಡಿ, ಮನ್ನಿಸಿಬಿಡಿ’ ಎಂದರು. ಅಂದರೆ ಈ ‘ಅಚಾತುರ್ಯ’ ನಡೆದಿರುವುದು ಸತ್ಯ ಎಂದು ಪರೋಕ್ಷವಾಗಿ ಅವರು ಒಪ್ಪಿಕೊಂಡರು. ಆದರೆ ರಮೇಶಕುಮಾರ್ ಹೆಸರು ಪ್ರಸ್ತಾಪವಾದುದಕ್ಕೆ ಕಳವಳ ವ್ಯಕ್ತಪಡಿಸಿದ ಅವರಿಗೆ, ಮೋದಿ-ಶಾ ಹೆಸರು ಪ್ರಸ್ತಾಪವಾಗಿದ್ದರ ಬಗ್ಗೆ ಯಾವ ಬೇಜಾರೂ ಇಲ್ಲವೆಂದಾಯಿತಲ್ಲ? ಅವತ್ತು ಮಾತಾಡಿದ ಬಿಜೆಪಿಯ ಎಲ್ಲ ನಾಯಕರೂ ಸ್ಪೀಕರ್ ಹೆಸರು ಬಂದುದಕ್ಕೆ ಬೇಸರ ವ್ಯಕ್ತಪಡಿಸಿದರೆ ಹೊರತು ತಮ್ಮ ರಾಷ್ಟ್ರೀಯ ನಾಯಕರ ಹೆಸರು ಪ್ರಸ್ತಾಪವಾದುದಕ್ಕೆ ಖೇದ ಪಡಲೇ ಇಲ್ಲ!

* ಮಂಗಳವಾರ, ಬುಧವಾರ ಎಸ್‌ಐಟಿ ತನಿಖೆಗೆ ವಿರೋಧ ವ್ಯಕ್ತ ಮಾಡುವಾಗಲೂ, ಆಡಿಯೋದ ಸಣ್ಣ ಭಾಗ ಮಾತ್ರ ರಿಲೀಸ್ ಮಾಡಲಾಗಿದೆ ಎಂದರೆ ಹೊರತು ಅದು ನಕಲಿ ರಂದೂ ಗಟ್ಟಿಯಾಗಿ ಪ್ರತಿಪಾದಿಸಲೇ ಇಲ್ಲ!

* ಶರಣಗೌಡ ಎಂಬ 37 ವರ್ಷದ ಜೆಡಿಎಸ್ ಕಾರ್ಯಕರ್ತನೊಂದಿಗೆ ಒಂದೆರಡು ತಾಸು ಮಾತಾಡಿದ್ದಾರಂತೆ ಯಡಿಯೂರಪ್ಪ ಮತ್ತು ಶಿವನಗೌಡ ನಾಯಕ್. ಆ ‘ಹುಡುಗ’ನ ಜೊತೆ ಮಾತಾಡಿದ ಪೂರ್ತಿ ಆಡಿಯೋ ಬಿಡಿಗಡೆಯಾದರೂ, ಈಗ ರಲೀಸ್ ಆಗಿರುವ ವಿಷಯ ಸತ್ಯ ಎಂಬುದು ಗ್ಯಾರಂಟಿಯಾಯಿತಲ್ಲ. ಅಷ್ಟಕ್ಕೂ ಶರಣಗೌಡನಿಗೆ ಪ್ರಜಾಪ್ರಭುತ್ವದ ಬಗ್ಗೆ, ಸಂವಿಧಾನದ ಬಗ್ಗೆ ಯಡಿಯೂರಪ್ಪ ಬೋಧಿಸುತ್ತ ಕುಳಿತಿದ್ದರೆ? ಮಧ್ಯರಾತ್ರಿಯಲ್ಲಿ ದೇವದುರ್ಗದ ಶಾಸಕ ಶಿವನಗೌಡ, ಸರ್ಕಾರ ತಾನಾಗೇ ಬೀಳುತ್ತೆ. ಆಗ ನಮ್ಮ ಜೊತೆ ನೀನು ಇರು ಸಾಕು. ಎಲ್ಲ ನ್ಯಾಯಯುತವಾಗಿಯೇ ನಡೆಯಲಿದೆ/ ಎಂದು ಶರಣಗೌಡನಿಗೆ ಉಪದೇಶ ಮಾಡುತ್ತಿದ್ದರೆ?

ಹೀಗೆ ಸುಮ್ಮನೆ ಸರಳ ತರ್ಕ ಉಪಯೋಗಿಸಿದರೂ, ಬಿಜೆಪಿಯ ಹಿಪಾಕ್ರಸಿ ಬಯಲಾಗುತ್ತ ಹೋಗುತ್ತದೆ. ಆಡಿಯೋದಲ್ಲಿರುವ ಧ್ವನಿ ತನ್ನದೇ ಎಂದ ಮೇಲೆ, ಎಸ್‌ಐಟಿ ತನ್ನನ್ನು ಹಣಿಯಲಿದೆ ಎಂಬುದು ಖಾತ್ರಿಯಾಗಿದ್ದರಿಂದಲೇ ಯಡಿಯೂರಪ್ಪ ಈಗ ಸದಸನದ ಕಲಾಪಗಳನ್ನೆಲ್ಲ ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಇದರಲ್ಲಿ ಮಾಧುಸ್ವಾಮಿಯಂತವರು ಸಂಪೂರ್ಣ ಬೆತ್ತಲಾಗುತ್ತಿದ್ದಾರೆ. ಯಡಿಯೂರಪ್ಪ, ಶಿವನಗೌಡರನ್ನು ಬಿಡಿ, ಅವರು ಎಂದೋ ವಿವಸ್ತ್ರರಾಗಿ ಬಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...