Homeಕರ್ನಾಟಕಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಇಡೀ ದೇಶದಲ್ಲಿನ ಯಾವ ರಾಜ್ಯ ಸರ್ಕಾರಗಳಿಗೂ ಸಾಂಕ್ರಾಮಿಕದ ಸಮಯದಲ್ಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯ ಕೊಡಲು ಸಾಧ್ಯವಾಗಿಲ್ಲ - ಶಿವರಾಮ್ ಹೆಬ್ಬಾರ್

- Advertisement -
- Advertisement -

“ಕಳೆದ ಆರೇಳು ತಿಂಗಳಿನಿಂದ ಕಾರ್ಮಿಕರು ಸಾಕಷ್ಟು ಕಷ್ಟ ಅನುಭವಿಸಿದರು. ಎಷ್ಟೋ ಕಾರ್ಮಿಕರು ಬದುಕುವ ಹಕ್ಕು ಹಾಗೂ ಶಕ್ತಿಯನ್ನು ಕಳೆದುಕೊಂಡಿದ್ದನ್ನು ನಾವು ಗಮನಿಸಿದ್ದೇವೆ. ಕಾರ್ಮಿಕ ಇಲಾಖೆ ಇರುವುದು ಕಾರ್ಮಿಕರ ರಕ್ಷಣೆಗಾಗಿ. ಆದರೆ ಈ ಆರೇಳು ತಿಂಗಳಿನ ಸಂದರ್ಭದ್ಲಿ ಕಾರ್ಮಿಕರಿಗೆ ನೂರಕ್ಕೆ ನೂರರಷ್ಟು ನ್ಯಾಯ ಕೊಡಲು ಸಾಧ್ಯವಾಗಿಲ್ಲ ಇದು ನಮಗೆ ಗೊತ್ತಿದೆ. ಆದರೂ ಅನೇಕ ಕಾರ್ಮಿಕ ಕಾನೂನು ತಿದ್ದುಪಡಿಗಳಿಂದ ಕಾರ್ಮಿಕರಿಗೆ ನ್ಯಾಯವು ಸಿಕ್ಕಿದೆ. ಅನೇಕ ಸಂದರ್ಭಗಳಲ್ಲಿ ನ್ಯಾಯ ಸಿಕ್ಕಿಲ್ಲ” ಎಂದು ರಾಜ್ಯ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾರ್ಮಿಕರು ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಕಾರ್ಮಿಕರಿಗೆ ನ್ಯಾಯ ಸಿಗುವ ಬದಲು ಅನ್ಯಾಯವಾಗಿದೆ. ತಿದ್ದುಪಡಿ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇದರಿಂದ ಸಚಿವರು ತಬ್ಬಿಬ್ಬಾದರೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಕಾರ್ಮಿಕರ ಮುಖಂಡರು ಪರಿಸ್ಥಿತಿ ತಿಳಿಗೊಳಿಸಿದರು.

ಇದು ಇಂದು ಮಧ್ಯಾಹ್ನ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಘಟನೆ. ಸಿಐಟಿಯು ನೇತೃತ್ವದಲ್ಲಿ ಸಾವಿರಾರು ಕಾರ್ಮಿಕರು ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಬೃಹತ್ ಧರಣಿ ಆರಂಭಿಸಿದ್ದಾರೆ. ಈ ಸಮಯದಲ್ಲಿ ಕಾರ್ಮಿಕರ ಮನವಿ ಸ್ವೀಕರಿಸಲು ಬಂದಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್‌ ವಿರುದ್ಧ ಕಾರ್ಮಿಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂತರ ಮಾತನಾಡಿದ ಸಚಿವರು “ಇಡೀ ದೇಶದಲ್ಲಿನ ಯಾವ ರಾಜ್ಯ ಸರ್ಕಾರಗಳಿಗೂ ಸಾಂಕ್ರಾಮಿಕದ ಸಮಯದಲ್ಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯ ಕೊಡಲು ಸಾಧ್ಯವಾಗಿಲ್ಲ. ಆದರೆ ಈ ಸಮಯದಲ್ಲಿ ನಾವು ಸಾಧ್ಯವಾದಷ್ಟು ಸೌಹಾರ್ದಯುತವಾಗಿ ಕಾರ್ಮಿಕ ಸಂಘಟನೆಗಳೊಂದಿಗೆ ಮಾತಾಡಿದ್ದೇವೆ. ಕಾರ್ಮಿಕರು ಮತ್ತು ಮಾಲೀಕರ ನಡುವೆ ಸೇತುವೆಯಾಗಿ ಕೆಲಸ ಮಾಡಿದ್ದೇವೆ ಎಂದರು.

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗಳ ಬಗ್ಗೆ ಕಾರ್ಮಿಕರಲ್ಲಿ ಅಸಮಾಧಾನ ಇರುವುದನ್ನು ಗಮನಿಸಿದ್ದೇವೆ. ಇದನ್ನು ಮುಖ್ಯಮಂತ್ರಿಗಳು ಜೊತೆ ಕೂತು ಚರ್ಚೆ ಮಾಡುತ್ತೇವೆ. ಕಾರ್ಮಿಕರ ಭಾವನೆಯನ್ನು ಸರ್ಕಾರಕ್ಕೆ ತಲುಪಿಸುತ್ತೇನೆ. ಕಾರ್ಮಿಕರಿಗೆ ಬದುಕುವ ಶಕ್ತಿ ನೀಡುವುದು ನಮ್ಮ ಮೊದಲ ಆದ್ಯತೆಯಾದರೆ, ಕಾರ್ಮಿಕರ ಹಕ್ಕುಗಳನ್ನು ರಕ್ಷಣೆ ಮಾಡುವುದು ಎರಡನೇ ಆದ್ಯತೆಯಾಗಿದೆ ಎಂದರು. ಹಾಗಾಗಿ ಮುಖ್ಯಮಂತ್ರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ಏರ್ಪಡಿಸುವುದಾಗಿ ಭರವಸೆ ನೀಡಿದರು.

ಕಾರ್ಮಿಕರ ಹಕ್ಕೊತ್ತಾಯಗಳು

  • ಕೆಲಸದ ಅವಧಿ ಹೆಚ್ಚಳ, ವಾರದ ಕೆಲಸದ ಮಿತಿಯ ಹೆಚ್ಚಳದಂತಹ ತಿದ್ದುಪಡಿಗಳನ್ನು ಕೈಬಿಡಬೇಕು.
  • 2021-21 ರ ಸಾಲಿನ ತುಟ್ಟಿಭತ್ಯೆ ಮುಂದೂಡಿಕೆ ಆದೇಶ ರದ್ದು ಮಾಡಿ, ಬಾಕಿ ಹಣ ನೀಡಬೇಕು.
  • ಅಂತರರಾಜ್ಯ ವಲಸೆ ಕಾರ್ಮಿಕ (ಉದ್ಯೋಗ ಮತ್ತು ಸೇವಾ ಶರತ್ತುಗಳ) ಕಾಯ್ದೆ-1970 ಅನ್ನು ಜಾರಿಗೊಳಿಸಬೇಕು.
  • ಕೇಂದ್ರ ಸರ್ಕಾರ ರಾಜ್ಯದ ಜಿಎಸ್‌ಟಿ ಪಾಲು ಮತ್ತು ಪ್ರವಾಹ ಪರಿಹಾರವನ್ನು ಕೂಡಲೇ ನೀಡಬೇಕು.
  • ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಅಗತ್ಯ ಸರಕುಗಳ ಕಾಯ್ದೆ, ವಿದ್ಯುತ್ ಕಾಯ್ದೆಗಳಿಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ಸುಗ್ರೀವಾಜ್ಞೆಗಳನ್ನು ವಾಪಸ್ ಪಡೆಯಬೇಕು.
  • ಶಿಕ್ಷಣ, ಆರೋಗ್ಯ, ರೈಲು, ರಸ್ತೆ, ವಿದ್ಯುತ್, ದೂರಸಂಪರ್ಕ, ವಿಮಾ, ಬ್ಯಾಂಕ್ ಮುಂತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು.
  • ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ 7,500 ರೂಗಳ ನೆರವನ್ನು ಆರು ತಿಂಗಳ ಕಾಲ ನೀಡಬೇಕು. ಎಲ್ಲಾ ಕುಟುಂಬಗಳ ಪ್ರತಿ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ. ಆಹಾರ ಪದಾರ್ಥಗಳನ್ನು ನೀಡಬೇಕು.
  • ನಗರ ಹಾಗೂ ಗ್ರಾಮೀಣ ಪ್ರದೇಶದ ಅಗತ್ಯವಿರುವ ಎಲ್ಲರಿಗೂ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷಕ್ಕೆ 200 ದಿನಗಳ ಉದ್ಯೋಗ ನೀಡಬೇಕು. ಕನಿಷ್ಟ ಕೂಲಿ 600 ರೂಗಳಿಗೆ ಹೆಚ್ಚಿಸಬೇಕು.
  • ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ನೀಡಬೇಕು.
  • ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಬೇಕು. ಜಿಡಿಪಿಯ 3 ಶೇಕಡ ಹಣವನ್ನು ಆರೋಗ್ಯಕ್ಕೆ ಒದಗಿಸಬೇಕು.
  • ಆನ್ ಲೈನ್ ಶಿಕ್ಷಣ ನೆಪದ ಲೂಟಿ ತಡೆಯಬೇಕು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಉದ್ಯೋಗ ಮತ್ತು ವೇತನ ಸಂರಕ್ಷಿಸಬೇಕು.
  • ಕೇಂದ್ರೀಕರಣ, ವಾಣಿಜ್ಯೀಕರಣ ಮತ್ತು ಕೋಮುವಾದೀಕರಣಕ್ಕೆ ಎಡೆ ಮಾಡುವ ನೂತನ ಶಿಕ್ಷಣ ನೀತಿ-2020 (NEP) ರದ್ದುಪಡಿಸಬೇಕು. ಸಾರ್ವತ್ರಿಕ ಶಿಕ್ಷಣ ಬಲಪಡಿಸಬೇಕು. ಐಸಿಡಿಎಸ್ ಯೋಜನೆ ಬಲಪಡಿಸಬೇಕು.
  • ರೂ.21,000/- ಸಮಾನ ಕನಿಷ್ಟ ವೇತನ ನಿಗದಿ ಮಾಡಬೇಕು. ಕಾರ್ಮಿಕ ಸಂಘದ ಕಡ್ಡಾಯ ಮಾನ್ಯತೆಯ ಶಾಸನ ರೂಪಿಸಬೇಕು, ಗುತ್ತಿಗೆ ಕಾರ್ಮಿಕರ ಖಾಯಂಗೆ ಅಸ್ಸಾಂ ಮತ್ತು ತಮಿಳುನಾಡು ಮಾದರಿಯಲ್ಲಿ ಶಾಸನ ರೂಪಿಸಬೇಕು.

ಇದನ್ನೂ ಓದಿ: ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು – ಕೆ.ಎನ್ ಉಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...