Homeಕರ್ನಾಟಕಕೊರೊನಾ: ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ನಿಧನ!

ಕೊರೊನಾ: ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ನಿಧನ!

ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಕೆಲದಿನಗಳ ಹಿಂದೆ ಬಿ.ನಾರಾಯಣರಾವ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು.

- Advertisement -
- Advertisement -

ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ಕೊರೊನಾದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಕೆಲದಿನಗಳ ಹಿಂದೆ ಬಿ.ನಾರಾಯಣರಾವ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ನಿನ್ನೆ ಅವರ ಪರಿಸ್ಥಿತಿ ಗಂಭಿರವಾಗಿತ್ತು. ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದ ಅವರು ಇಂದು ಸಾವನ್ನಪ್ಪಿದ್ದಾರೆ ಎಂದು ಶಾಸಕರ ಆಪ್ತರಾದ ಭೀಮಾಶಂಕರ್ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಸರಳ ವ್ಯಕ್ತಿ ಬಿ.ನಾರಾಯಣ್ ರಾವ್

80ರ ದಶಕದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸ್ಥಾಪನೆಯಾಗಬೇಕೆಂದು ಒತ್ತಾಯಿಸಿ ಬೀದರ್‌ನಿಂದ ಬೆಂಗಳೂರಿನವರೆಗೆ ಸೈಕಲ್ ಜಾಥಾ ಮಾಡಿದ ಉತ್ಸಾಹಿ ಅವರು. ಬಸವಕಲ್ಯಾಣದ ಹಿಂದುಳಿದ ಜಾತಿಯ ಅವರು ನಿರಂತರವಾಗಿ ರಾಜಕಾರಣದಲ್ಲಿದ್ದರೂ ಅಧಿಕಾರದ ಹತ್ತಿರಕ್ಕೆ ಎಂದೂ ಬಂದಿರಲಿಲ್ಲ. ಆ ನಂತರ ದೇವೇಗೌಡರೊಮ್ಮೆ ತಮ್ಮ ಪಕ್ಷದಿಂದ ‘1989ರಲ್ಲಿ ಎಂಎಲ್‍ಎ ಟಿಕೆಟ್ ಕೊಟ್ಟಿದ್ದರಾದರೂ ಯಶಸ್ವಿಯಾಗಲಿಲ್ಲ. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತು, ಕೊನೆಗೂ 2018ರಲ್ಲಿ ಗೆದ್ದು ಶಾಸಕರಾಗಿದ್ದರು.

‘ಇಷ್ಟು ಕೋಟಿ ರೊಕ್ಕ ಕೊಟ್ಟರ ಅದನ್ನ ಎಲ್ಲಿಡೋದು ಅಂತ ನಮಗ ಗೊತ್ತಾಗವಲ್ದು ರೀ’ ಎಂದು ಕಳೆದ ವರ್ಷ ವಿಧಾನಸಭೆಯಲ್ಲಿ ಬಿ.ನಾರಾಯಣರಾವ್ ಅವರು ಮಾತನಾಡಿದಾಗ ಕರ್ನಾಟಕದ ಮತದಾರ ಬಂಧುಗಳಿಗೆ ಅದನ್ನು ಹೇಗೆ ಸ್ವೀಕರಿಸಬೇಕು ಎಂದು ಗೊತ್ತಾಗಲಿಲ್ಲ. ಮಾತಾಡುತ್ತಿದ್ದ ವ್ಯಕ್ತಿ ಪ್ರಾಮಾಣಿಕವಾಗಿದ್ದಂತೆ ಎಲ್ಲರಿಗೂ ಅನ್ನಿಸುತ್ತಿತ್ತಾದರೂ, ಇಂದಿನ ರಾಜಕಾರಣದಲ್ಲಿ ಇಂತಹ ಒಬ್ಬ ಶಾಸಕ ಇರಲು ಸಾಧ್ಯವೇ ಎಂಬ ಗುಮಾನಿಯೂ ಇತ್ತು. ನಾರಾಯಣರಾವ್‍ರನ್ನು ಬಲ್ಲವರಿಗೆ ಅಂತಹ ಅನುಮಾನವೇನೂ ಇಲ್ಲ. ಸರಳ ಮತ್ತು ಪ್ರಾಮಾಣಿಕ ವ್ಯಕ್ತಿಯಾಗಿದ್ದ ಅವರ ಸಾವು ಸಾವಿರಾರು ಅನುಯಾಯಿಗಳಿಗೆ ತುಂಬಲಾರದ ನಷ್ಟವಾಗಿದೆ.

“ಬಸವಕಲ್ಯಾಣ ಕ್ಷೇತ್ರದ ಶಾಸಕರಾದ ನಾರಾಯಣ ರಾವ್ ಅವರ ನಿಧನ ತೀವ್ರ ನೋವುಂಟು ಮಾಡಿದೆ. ಜನಪರ ಕಾಳಜಿಯುಳ್ಳ ಜನಪ್ರತಿನಿಧಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಕೊರೋನಾ ಸೋಂಕಿನಿಂದ ಮೃತರಾದ ನಾರಾಯಣರಾವ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ ಸಂದರ್ಶನ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...