Homeಚಳವಳಿಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಬಂಧನ ವಿರೋಧಿಸಿ, ಅವರನ್ನು ಶೀಘ್ರ ಬಿಡುಗಡೆ ಮಾಡುವಂತೆ ಕಾರ್ನೆಲ್ ವೆಸ್ಟ್, ನೋಮ್ ಚೋಮ್ಸ್ಕಿ, ಅಮಿತಾವ್ ಘೋಷ್, ಸಲ್ಮಾನ್ ರಶ್ದಿ ಮತ್ತು ಮೀರಾ ನಾಯರ್ ಸೇರಿದಂತೆ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಚಲನಚಿತ್ರ ನಿರ್ಮಾಪಕರು ಮತ್ತು ಲೇಖಕರು ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

ಉಮರ್‌ ಖಾಲಿದ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಳ್ಳು ಪ್ರಕರಣಗಳಡಿ ಬಂಧಿತರಾಗಿರುವ ಎಲ್ಲರನ್ನು ಬಂಧಮುಕ್ತಗೊಳಿಸಿ ಎಂದು ನಾವು ಭಾರತ ಸರ್ಕಾರವನ್ನು ಕೋರುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ ಪಾತ್ರವಿದೆ ಎಂದು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಅವರನ್ನು ಬಂಧಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಿನ್ನೆ(ಸೆ.24) ದೆಹಲಿ ನ್ಯಾಯಾಲಯ ಅಕ್ಟೋಬರ್ 22 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಬೇಕೆಂದು ಆದೇಶಿಸಿದೆ.

ದೆಹಲಿ ಗಲಭೆ ಕುರಿತ ಪುಸ್ತಕ ಪ್ರಕಟಣೆ ಹಿಂದಕ್ಕೆ ಪಡೆದ ಬ್ಲೂಮ್ಸರಿ ಇಂಡಿಯಾ
ದೆಹಲಿ ಗಲಭೆಯ ಚಿತ್ರ: Courtesy: Scroll.in

ಇದನ್ನೂ ಓದಿ: ಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ತಜ್ಞರ ಹೇಳಿಕೆಯಲ್ಲಿ “ಖಾಲಿದ್ ತಮ್ಮ ದೇಶಕ್ಕಾಗಿ ಬದ್ಧತೆ ತೋರಿದ್ದಾರೆ. ಸಮಾನ ಪೌರತ್ವಕ್ಕಾಗಿ ಆಗ್ರಹಿಸಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಧ್ವನಿ ಎತ್ತಿದ್ದಾರೆ. ಪ್ರತಿಭಟನೆಗಾಗಿ ತಾನು ಪಡೆದ ಶಿಕ್ಷಣವನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಉಮರ್ ಖಾಲಿದ್ ಮಾಡಿದ ಅಪರಾಧ ಯಾವುದು?” ಎಂದು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಖಾಲಿದ್ ಹೊರತು ಪಡಿಸಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಸಿದವರ ಹೆಸರಿನ ಪಟ್ಟಿ ಹೀಗಿದೆ. ಇಶ್ರತ್ ಜಹಾನ್, ಗುಲ್ಫಿಷಾ ಫಾತಿಮಾ, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಸಫೂರಾ ಜರ್ಗರ್, ಮೀರನ್ ಹೈದರ್, ಆಸಿಫ್ ಇಕ್ಬಾಲ್ ತನ್ಹಾ, ಅಥರ್ ಖಾನ್, ಉಮರ್ ಖಾಲಿದ್, ನತಾಶಾ ನರ್ವಾಲ್, ದೇವಂಗನಾ ಕಾಳಿತಾ ಮತ್ತು ಇತರೆ 10 ಮಂದಿ ಇದ್ದಾರೆ. ಇದರಲ್ಲಿ ಬಹುತೇಕರು ಮುಸ್ಲಿಂ ಧರ್ಮಿಯರೆ ಆಗಿದ್ದಾರೆ ಏಕೆ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಇಬ್ಬರು ಮುಸ್ಲಿಮೇತರರು ಮತ್ತು ಯುವ ಸ್ತ್ರೀವಾದಿಗಳು, ಇವರು ಪುರುಷ ಪ್ರಾಬಲ್ಯದ ಕ್ಯಾಂಪಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡಿದವರು. ಇನ್ನು 3 ತಿಂಗಳ ಗರ್ಭಿಣಿ ಸಫೂರಾ ಜರ್ಗರ್‌ರನ್ನು ಕೊರೊನಾ ಹೆಚ್ಚಾಗುತ್ತಿದ್ದ ಸಮಯದಲ್ಲೂ 2 ತಿಂಗಳ ಕಾಲ ಕಿಕ್ಕಿರಿದ ಜೈಲಿನಲ್ಲಿ ಬಂಧಿಸಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾನವೀಯ ನೆಲೆಯಲ್ಲಿ ಆಕೆಗೆ ಜಾಮೀನು ನೀಡಲಾಗಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಪ್ರಸ್ತುತ, ಭಯೋತ್ಪಾದಕ ಕಾನೂನಿನಡಿಯಲ್ಲಿ ಸುಳ್ಳು ಆರೋಪ ಹೊತ್ತಿರುವ 21 ಜನರಲ್ಲಿ 19 ಮಂದಿ ಮುಸ್ಲಿಮರು. ಅವರ ಗುರುತೇ ಅವರನ್ನು ಅಪರಾಧಿಯಾಗಿಸುತ್ತದೇ ಎಂದರೇ, ಜಾತ್ಯತೀತ ರಾಷ್ಟ್ರವಾಗಿ ಭಾರತ ಜಾಗತಿಕ ಮಟ್ಟದಲ್ಲಿ ನಾಚಿಕೆಪಡುತ್ತದೆ ಎಂದು ತಜ್ಞರು ವಿಷಾಧಿಸಿದ್ದಾರೆ.

ದೆಹಲಿ ಪೊಲೀಸರು ಬಂಧಿಸಿರುವ ಇವರು ಭಯೋತ್ಪಾದಕರಲ್ಲ. ದೆಹಲಿ ಗಲಭೆಗಳ ಬಗ್ಗೆ ಪೊಲೀಸರ ತನಿಖೆ ತನಿಖೆಯೇ ಅಲ್ಲ. ಅದೊಂದು ಪೂರ್ವನಿಯೋಜಿತ ಕೃತ್ಯ. ಯಾವುದೇ ರಾಷ್ಟ್ರದ ಯುವಕರು ಆ ರಾಷ್ಟ್ರದ ಭವಿಷ್ಯ. ಅವರಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಪ್ರಜಾಪ್ರಭುತ್ವ ಭವಿಷ್ಯಕ್ಕೆ ನ್ಯಾಯ ಒದಗಿಸಿದಂತೆ ಎಂದಿದ್ದಾರೆ.

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.


ಇದನ್ನೂ ಓದಿ:  JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...