Homeಚಳವಳಿಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಬಂಧನ ವಿರೋಧಿಸಿ, ಅವರನ್ನು ಶೀಘ್ರ ಬಿಡುಗಡೆ ಮಾಡುವಂತೆ ಕಾರ್ನೆಲ್ ವೆಸ್ಟ್, ನೋಮ್ ಚೋಮ್ಸ್ಕಿ, ಅಮಿತಾವ್ ಘೋಷ್, ಸಲ್ಮಾನ್ ರಶ್ದಿ ಮತ್ತು ಮೀರಾ ನಾಯರ್ ಸೇರಿದಂತೆ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಚಲನಚಿತ್ರ ನಿರ್ಮಾಪಕರು ಮತ್ತು ಲೇಖಕರು ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

ಉಮರ್‌ ಖಾಲಿದ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಳ್ಳು ಪ್ರಕರಣಗಳಡಿ ಬಂಧಿತರಾಗಿರುವ ಎಲ್ಲರನ್ನು ಬಂಧಮುಕ್ತಗೊಳಿಸಿ ಎಂದು ನಾವು ಭಾರತ ಸರ್ಕಾರವನ್ನು ಕೋರುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ ಪಾತ್ರವಿದೆ ಎಂದು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಅವರನ್ನು ಬಂಧಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಿನ್ನೆ(ಸೆ.24) ದೆಹಲಿ ನ್ಯಾಯಾಲಯ ಅಕ್ಟೋಬರ್ 22 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಬೇಕೆಂದು ಆದೇಶಿಸಿದೆ.

ದೆಹಲಿ ಗಲಭೆ ಕುರಿತ ಪುಸ್ತಕ ಪ್ರಕಟಣೆ ಹಿಂದಕ್ಕೆ ಪಡೆದ ಬ್ಲೂಮ್ಸರಿ ಇಂಡಿಯಾ
ದೆಹಲಿ ಗಲಭೆಯ ಚಿತ್ರ: Courtesy: Scroll.in

ಇದನ್ನೂ ಓದಿ: ಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ತಜ್ಞರ ಹೇಳಿಕೆಯಲ್ಲಿ “ಖಾಲಿದ್ ತಮ್ಮ ದೇಶಕ್ಕಾಗಿ ಬದ್ಧತೆ ತೋರಿದ್ದಾರೆ. ಸಮಾನ ಪೌರತ್ವಕ್ಕಾಗಿ ಆಗ್ರಹಿಸಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಧ್ವನಿ ಎತ್ತಿದ್ದಾರೆ. ಪ್ರತಿಭಟನೆಗಾಗಿ ತಾನು ಪಡೆದ ಶಿಕ್ಷಣವನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಉಮರ್ ಖಾಲಿದ್ ಮಾಡಿದ ಅಪರಾಧ ಯಾವುದು?” ಎಂದು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಖಾಲಿದ್ ಹೊರತು ಪಡಿಸಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಸಿದವರ ಹೆಸರಿನ ಪಟ್ಟಿ ಹೀಗಿದೆ. ಇಶ್ರತ್ ಜಹಾನ್, ಗುಲ್ಫಿಷಾ ಫಾತಿಮಾ, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಸಫೂರಾ ಜರ್ಗರ್, ಮೀರನ್ ಹೈದರ್, ಆಸಿಫ್ ಇಕ್ಬಾಲ್ ತನ್ಹಾ, ಅಥರ್ ಖಾನ್, ಉಮರ್ ಖಾಲಿದ್, ನತಾಶಾ ನರ್ವಾಲ್, ದೇವಂಗನಾ ಕಾಳಿತಾ ಮತ್ತು ಇತರೆ 10 ಮಂದಿ ಇದ್ದಾರೆ. ಇದರಲ್ಲಿ ಬಹುತೇಕರು ಮುಸ್ಲಿಂ ಧರ್ಮಿಯರೆ ಆಗಿದ್ದಾರೆ ಏಕೆ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಇಬ್ಬರು ಮುಸ್ಲಿಮೇತರರು ಮತ್ತು ಯುವ ಸ್ತ್ರೀವಾದಿಗಳು, ಇವರು ಪುರುಷ ಪ್ರಾಬಲ್ಯದ ಕ್ಯಾಂಪಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡಿದವರು. ಇನ್ನು 3 ತಿಂಗಳ ಗರ್ಭಿಣಿ ಸಫೂರಾ ಜರ್ಗರ್‌ರನ್ನು ಕೊರೊನಾ ಹೆಚ್ಚಾಗುತ್ತಿದ್ದ ಸಮಯದಲ್ಲೂ 2 ತಿಂಗಳ ಕಾಲ ಕಿಕ್ಕಿರಿದ ಜೈಲಿನಲ್ಲಿ ಬಂಧಿಸಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾನವೀಯ ನೆಲೆಯಲ್ಲಿ ಆಕೆಗೆ ಜಾಮೀನು ನೀಡಲಾಗಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಪ್ರಸ್ತುತ, ಭಯೋತ್ಪಾದಕ ಕಾನೂನಿನಡಿಯಲ್ಲಿ ಸುಳ್ಳು ಆರೋಪ ಹೊತ್ತಿರುವ 21 ಜನರಲ್ಲಿ 19 ಮಂದಿ ಮುಸ್ಲಿಮರು. ಅವರ ಗುರುತೇ ಅವರನ್ನು ಅಪರಾಧಿಯಾಗಿಸುತ್ತದೇ ಎಂದರೇ, ಜಾತ್ಯತೀತ ರಾಷ್ಟ್ರವಾಗಿ ಭಾರತ ಜಾಗತಿಕ ಮಟ್ಟದಲ್ಲಿ ನಾಚಿಕೆಪಡುತ್ತದೆ ಎಂದು ತಜ್ಞರು ವಿಷಾಧಿಸಿದ್ದಾರೆ.

ದೆಹಲಿ ಪೊಲೀಸರು ಬಂಧಿಸಿರುವ ಇವರು ಭಯೋತ್ಪಾದಕರಲ್ಲ. ದೆಹಲಿ ಗಲಭೆಗಳ ಬಗ್ಗೆ ಪೊಲೀಸರ ತನಿಖೆ ತನಿಖೆಯೇ ಅಲ್ಲ. ಅದೊಂದು ಪೂರ್ವನಿಯೋಜಿತ ಕೃತ್ಯ. ಯಾವುದೇ ರಾಷ್ಟ್ರದ ಯುವಕರು ಆ ರಾಷ್ಟ್ರದ ಭವಿಷ್ಯ. ಅವರಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಪ್ರಜಾಪ್ರಭುತ್ವ ಭವಿಷ್ಯಕ್ಕೆ ನ್ಯಾಯ ಒದಗಿಸಿದಂತೆ ಎಂದಿದ್ದಾರೆ.

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.


ಇದನ್ನೂ ಓದಿ:  JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...