Homeಚಳವಳಿಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಉಮರ್‌ ಖಾಲಿದ್ ಬಿಡುಗಡೆಗೆ 200ಕ್ಕೂ ಹೆಚ್ಚು ತಜ್ಞರು, ಚಿಂತಕರ ಪಟ್ಟು

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಬಂಧನ ವಿರೋಧಿಸಿ, ಅವರನ್ನು ಶೀಘ್ರ ಬಿಡುಗಡೆ ಮಾಡುವಂತೆ ಕಾರ್ನೆಲ್ ವೆಸ್ಟ್, ನೋಮ್ ಚೋಮ್ಸ್ಕಿ, ಅಮಿತಾವ್ ಘೋಷ್, ಸಲ್ಮಾನ್ ರಶ್ದಿ ಮತ್ತು ಮೀರಾ ನಾಯರ್ ಸೇರಿದಂತೆ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಚಲನಚಿತ್ರ ನಿರ್ಮಾಪಕರು ಮತ್ತು ಲೇಖಕರು ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

ಉಮರ್‌ ಖಾಲಿದ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಳ್ಳು ಪ್ರಕರಣಗಳಡಿ ಬಂಧಿತರಾಗಿರುವ ಎಲ್ಲರನ್ನು ಬಂಧಮುಕ್ತಗೊಳಿಸಿ ಎಂದು ನಾವು ಭಾರತ ಸರ್ಕಾರವನ್ನು ಕೋರುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ ಪಾತ್ರವಿದೆ ಎಂದು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಅವರನ್ನು ಬಂಧಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಿನ್ನೆ(ಸೆ.24) ದೆಹಲಿ ನ್ಯಾಯಾಲಯ ಅಕ್ಟೋಬರ್ 22 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಬೇಕೆಂದು ಆದೇಶಿಸಿದೆ.

ದೆಹಲಿ ಗಲಭೆ ಕುರಿತ ಪುಸ್ತಕ ಪ್ರಕಟಣೆ ಹಿಂದಕ್ಕೆ ಪಡೆದ ಬ್ಲೂಮ್ಸರಿ ಇಂಡಿಯಾ
ದೆಹಲಿ ಗಲಭೆಯ ಚಿತ್ರ: Courtesy: Scroll.in

ಇದನ್ನೂ ಓದಿ: ಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ತಜ್ಞರ ಹೇಳಿಕೆಯಲ್ಲಿ “ಖಾಲಿದ್ ತಮ್ಮ ದೇಶಕ್ಕಾಗಿ ಬದ್ಧತೆ ತೋರಿದ್ದಾರೆ. ಸಮಾನ ಪೌರತ್ವಕ್ಕಾಗಿ ಆಗ್ರಹಿಸಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಧ್ವನಿ ಎತ್ತಿದ್ದಾರೆ. ಪ್ರತಿಭಟನೆಗಾಗಿ ತಾನು ಪಡೆದ ಶಿಕ್ಷಣವನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಉಮರ್ ಖಾಲಿದ್ ಮಾಡಿದ ಅಪರಾಧ ಯಾವುದು?” ಎಂದು ಪ್ರಶ್ನಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಖಾಲಿದ್ ಹೊರತು ಪಡಿಸಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಸಿದವರ ಹೆಸರಿನ ಪಟ್ಟಿ ಹೀಗಿದೆ. ಇಶ್ರತ್ ಜಹಾನ್, ಗುಲ್ಫಿಷಾ ಫಾತಿಮಾ, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಸಫೂರಾ ಜರ್ಗರ್, ಮೀರನ್ ಹೈದರ್, ಆಸಿಫ್ ಇಕ್ಬಾಲ್ ತನ್ಹಾ, ಅಥರ್ ಖಾನ್, ಉಮರ್ ಖಾಲಿದ್, ನತಾಶಾ ನರ್ವಾಲ್, ದೇವಂಗನಾ ಕಾಳಿತಾ ಮತ್ತು ಇತರೆ 10 ಮಂದಿ ಇದ್ದಾರೆ. ಇದರಲ್ಲಿ ಬಹುತೇಕರು ಮುಸ್ಲಿಂ ಧರ್ಮಿಯರೆ ಆಗಿದ್ದಾರೆ ಏಕೆ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಇಬ್ಬರು ಮುಸ್ಲಿಮೇತರರು ಮತ್ತು ಯುವ ಸ್ತ್ರೀವಾದಿಗಳು, ಇವರು ಪುರುಷ ಪ್ರಾಬಲ್ಯದ ಕ್ಯಾಂಪಸ್‌ಗಳಲ್ಲಿ ಮಹಿಳಾ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡಿದವರು. ಇನ್ನು 3 ತಿಂಗಳ ಗರ್ಭಿಣಿ ಸಫೂರಾ ಜರ್ಗರ್‌ರನ್ನು ಕೊರೊನಾ ಹೆಚ್ಚಾಗುತ್ತಿದ್ದ ಸಮಯದಲ್ಲೂ 2 ತಿಂಗಳ ಕಾಲ ಕಿಕ್ಕಿರಿದ ಜೈಲಿನಲ್ಲಿ ಬಂಧಿಸಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾನವೀಯ ನೆಲೆಯಲ್ಲಿ ಆಕೆಗೆ ಜಾಮೀನು ನೀಡಲಾಗಿದೆ ಎಂದು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಫೂರಾ ಜರ್ಗರ್‌ಗೆ ಮಾನವೀಯ ಆಧಾರದ ಮೇಲೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಪ್ರಸ್ತುತ, ಭಯೋತ್ಪಾದಕ ಕಾನೂನಿನಡಿಯಲ್ಲಿ ಸುಳ್ಳು ಆರೋಪ ಹೊತ್ತಿರುವ 21 ಜನರಲ್ಲಿ 19 ಮಂದಿ ಮುಸ್ಲಿಮರು. ಅವರ ಗುರುತೇ ಅವರನ್ನು ಅಪರಾಧಿಯಾಗಿಸುತ್ತದೇ ಎಂದರೇ, ಜಾತ್ಯತೀತ ರಾಷ್ಟ್ರವಾಗಿ ಭಾರತ ಜಾಗತಿಕ ಮಟ್ಟದಲ್ಲಿ ನಾಚಿಕೆಪಡುತ್ತದೆ ಎಂದು ತಜ್ಞರು ವಿಷಾಧಿಸಿದ್ದಾರೆ.

ದೆಹಲಿ ಪೊಲೀಸರು ಬಂಧಿಸಿರುವ ಇವರು ಭಯೋತ್ಪಾದಕರಲ್ಲ. ದೆಹಲಿ ಗಲಭೆಗಳ ಬಗ್ಗೆ ಪೊಲೀಸರ ತನಿಖೆ ತನಿಖೆಯೇ ಅಲ್ಲ. ಅದೊಂದು ಪೂರ್ವನಿಯೋಜಿತ ಕೃತ್ಯ. ಯಾವುದೇ ರಾಷ್ಟ್ರದ ಯುವಕರು ಆ ರಾಷ್ಟ್ರದ ಭವಿಷ್ಯ. ಅವರಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದ್ದು, ಪ್ರಜಾಪ್ರಭುತ್ವ ಭವಿಷ್ಯಕ್ಕೆ ನ್ಯಾಯ ಒದಗಿಸಿದಂತೆ ಎಂದಿದ್ದಾರೆ.

ಹೇಳಿಕೆಗೆ ಸಹಿ ಮಾಡಿದವರಲ್ಲಿ ಪತ್ರಕರ್ತ ಪಿ.ಸಾಯಿನಾಥ್, ನಟ ರತ್ನ ಪಾಠಕ್ ಷಾ, ಚಲನಚಿತ್ರ ನಿರ್ಮಾಪಕ ನಕುಲ್ ಸಾಹ್ನಿ, ಲೇಖಕಿ ಅರುಂಧತಿ ರಾಯ್, ಮತ್ತು ಪ್ರಸಿದ್ಧ ವಿದ್ವಾಂಸರಾದ ಜುಡಿತ್ ಬಟ್ಲರ್, ರೋಮಿಲಾ ಥಾಪರ್ ಮತ್ತು ಶೆಲ್ಡನ್ ಪೊಲಾಕ್ ಕೂಡ ಇದ್ದಾರೆ.


ಇದನ್ನೂ ಓದಿ:  JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...