Homeಕರ್ನಾಟಕಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ‘ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ’ ಎಂಬ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ, ಖಂಡನೆ ವ್ಯಕ್ತವಾಗಿದೆ. ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯಿಂದ ಬದುಕುತ್ತಿರುವ ಜನರ ನಡುವೆ ಮತಗಳಿಗಾಗಿ ದ್ವೇಷದ ಕಿಡಿಹೊತ್ತಿಸಿ ಗಲಭೆಗೆ ಪ್ರಚೋದಿಸುವುದು ಹೇಯ ಕೃತ್ಯ ಎಂದು ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಈ ಹೇಳಿಕೆ ಬಿಜೆಪಿ ಅಧ್ಯಕ್ಷರ ಸಣ್ಣತನವನ್ನು ತೋರಿಸುತ್ತದೆ. ಶಿರಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಸುರೇಶ್ ಗೌಡರಿಗೆ ಹಿಂದೂಗಳ ಮೇಲೆ ದಿಢೀರ್ ಪ್ರೀತಿ ಉಕ್ಕಿ ಹರಿಯಿತೇ ಎಂದು ಬಹಳಷ್ಟು ಜನರು ಪ್ರಶ್ನಿಸಿದ್ದಾರೆ.

ತುಮಕೂರು ಜಿಲ್ಲೆ ಸಿದ್ದಪುರುಷರ, ಸಾಧುಗಳ ನೆಲೆವೀಡು. ಭಾವೈಕ್ಯತೆಗೆ ಹೆಸರಾದ ಕಲ್ಪತರು ನಾಡು. ಎಲ್ಲಾ ಧರ್ಮದವರೂ ಪರಸ್ಪರ ಸಹಬಾಳ್ವೆಯಿಂದ ಬದುಕು ನಡೆಸುತ್ತಿದ್ದಾರೆ. ಇಂತಹ ಶಾಂತಸಾಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಕಲ್ಲುತೂರಿ ಅಲೆಗಳನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ನೇರ ಚುನಾವಣೆ ಎದುರಿಸಲು ಸಾಧ್ಯವಾಗದೇ ಧರ್ಮ, ದೇವರು ವಿಷಯಗಳನ್ನು ಹರಿಯಬಿಟ್ಟು ಮತದಾರರನ್ನು ತನ್ನತ್ತ ಸೆಳೆಯುವ ಬಿಜೆಪಿ ಯತ್ನ ಕೈಗೂಡುವುದಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.

“ಧರ್ಮ ಎನ್ನುವ ಅಸ್ತ್ರ ಬಿಟ್ಟು ಬೇರೆ ಏನ್ ಇದೆ ನಿಮ್ ಹತ್ರ? ನಿಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿದ್ರೆ ಹೇಳಿ, ರೈತ ಕಾರ್ಮಿಕ ವಿರೋಧಿ ಬಿ ಜೆ ಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ಜಿ.ಭಗತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತುಮಕೂರು ಜಿಲ್ಲೆ ಶಾಂತಿಯುತವಾಗಿಯೇ ಇದೆ. ಈ ರಾಜಕೀಯದ ಚದುರಂಗದ ಆಟದಲ್ಲಿ ರಾಜಕಾರಣಿಗಳು ಧರ್ಮ, ಜಾತಿ, ಅನ್ನೋ ಹೆಸರಲ್ಲಿ ಮುಗ್ಧ ಜನರನ್ನು ದಾಳಗಳನ್ನಾಗಿ ಬಳಸಿಕೊಂಡು ಅವರ ಬೇಳೆ ಬೇಯಿಸಿಕೊಳ್ಳುತ್ತಾರೆ” ಎಂದು ಓಬಳ ನರಸಿಂಹ ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ಶಿರಾ ಶಾಂತಿಯುತವಾಗಿದೆ. ಸೌಹಾರ್ಧಯುತವಾಗಿದೆ. ಅಲ್ಲಿ ಜಾತಿಯತದ ವಿಷ ಬೀಜ ಬಿತ್ತಬೇಡೆ ಅಲ್ಲಿ ನಿಮ್ಮ ಬೆಳೆ ಬೆಯ್ಯುವುದಿಲ್ಲ.

Posted by Annapurna Venkatananjappa on Wednesday, September 23, 2020

“ತುಮಕೂರಿಗೆ ಕಳಂಕ ಈತ.. ರಾಜಕಾರಣ ಮಾಡಿ ಅಂದರೇ ಹಾದರ ಮಾಡುತ್ತಿದ್ದಾರೆ.. ಮನುಷ್ಯತ್ವ ಇಲ್ಲದ ಸೌಜನ್ಯ ಇಲ್ಲದ ಮೃಗಿಯ ವರ್ತನೆಯ ರಾಜಕಾರಣಿ. ರಾಜಕೀಯಕ್ಕಾಗಿ ಸಮಾಜದಲ್ಲಿ ಶಾಂತಿ ಕದಡುವ ಇಂತವರು ಮಾರಕ. ಈ ನಾಡಿನ ಪ್ರತಿಯೊಬ್ಬರು ಗೌರವಿಸುವ ನಮ್ಮ ನೆಲದ ಮಾಜಿ ಪ್ರಧಾನಿಗೆ ಕೊರಳಪಟ್ಟಿಗೆ ಕೈ ಹಾಕಿ ಅಂದವನು ಇವರಿಗೆ ಕನಿಷ್ಟ ವ್ಯಕ್ತಿ ಗೌರವವೂ ಇಲ್ಲಾ.. ಇವರ ಮಾತಿಗೆ ಮರುಳಾದರೇ ಶಿರಾ ಶಾಂತಿ ಸುವ್ಯವಸ್ಥೆಗೆ ತಾನೇ ಬೆಂಕಿ ಹಚ್ಚಿಕೊಂಡ ಹಾಗೇ” ಎಂದು ಮಂಜುನಾಥ್ ಹೆಚ್.ಎನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟರಾಜಪ್ಪ ಯರಗುಂಟೆ ಮಾತನಾಡಿ “ಮಂದಿರ, ಮಸೀದಿ, ಪಾಕಿಸ್ತಾನ, ಸಾಬ್ರೂ, ಸರ್ಜಿಕಲ್ ಸ್ಟ್ರೈಕ್, ತ್ರಿವಳಿತಲಾಖ್, ಜಮ್ಮು ಮತ್ತು ಕಾಶ್ಮೀರ ಇವುಗಳಷ್ಟೇ ಸಮಸ್ಯೆಗಳಲ್ಲ. ಇದರಾಚೆ ದೇಶದ ಆರ್ಥಿಕ ಸ್ಥಿತಿ, ನಿರುದ್ಯೋಗ ಸಮಸ್ಯೆ, ಆರ್ಥಿಕ ಅಭಿವೃದ್ಧಿ, ಕಾರ್ಪೊರೇಟ್ ಉದ್ಯಮಿಗಳಿಗೆ ರತ್ನಗಂಬಳಿ, ಇವರ ಸಾಲ ಮನ್ನ, ಭೂಸುಧಾರಣೆ ಎಪಿಎಂಸಿ ಖಾಯಿದೆಯಿಂದ ರೈತರಿಗೆ ಹೊಡೆತ, ಸಾರ್ವಜನಿಕ ಉದ್ದಿಮೆಗಳ ಬಾಗಿಲು, ನಿರುದ್ಯೋಗ ಸಮಸ್ಯೆ ಇನ್ನೂ ಸಾಮಾಜಿಕ ಸಮಸ್ಯೆಗಳು ಇದಾವೆ ಅಂತಾ ಸಮರ್ಥವಾಗಿ ಮುಟ್ಟಿಸುವಲ್ಲಿ ಕಾಂಗ್ರೆಸ್, ಅದಕ್ಕಿಂತ ಮುಖ್ಯವಾಗಿ ಎಲ್ಲಾ ಸಂಘಟನೆಗಳು ವಿಫಲವಾಗಿದೆ. ಅದರ ಫಲ ಈ ಬಿಜೆಪಿ ಸರ್ಕಾರ ಮತ್ತು ಆಡಳಿತ” ಎಂದಿದ್ದಾರೆ.

ಬಿಜೆಪಿಯವರದೇ ಬೆಟ್ಟದಷ್ಟು ಉಳುಕು ಇಟ್ಟುಕೊಂಡು ಚುನಾವಣೆ ಎದುರಿಸಲು ನೈತಿಕ ವಿಷಯಗಳ ಅಭಾವದಿಂದ ತಮ್ಮ ಓಬಿರಾಯನಕಾಲದ ಹಳೇ ವಿಷಬೆರೆತ ಹೇಳಿಕೆ ಬಿತ್ತರಮಾಡಿದ್ದಾರೆ. ಮಾತಿನಮೇಲೆ ನಿಗಾ ಇಲ್ಲದ ಭಾವೈಕ್ಯತೆ ಪದದ ಅರ್ಥವೇ ಗೊತ್ತಿಲ್ಲದ ಸುರೇಶಗೌಡನಂತಹವರ ಬಾಯಿಯಲ್ಲಿ ಇಂತಹ ಬೆಂಕಿ ಹಚ್ಚುವ ಹೇಳಿಕೆ ಬಾರದೇ ಇನ್ನೇನು ಬರಲು ಸಾಧ್ಯ? ಜನ ಯಾರು ಇಂದು ದಡ್ಡರಾಗಿ ಉಳಿದಿಲ್ಲ ಸೂಕ್ತ ತೀರ್ಪು ನೀಡಲು ಶಕ್ತರಾಗಿದ್ದಾರೆ ಎಂದು ಆರ್ ಕಾಮರಾಜ್ ಅಭಿಪ್ರಾಯಪಟ್ಟಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿ ನೆಲೆಯನ್ನು ಕಂಡುಕೊಳ್ಳಲು ಬಿಜೆಪಿ ಜಿಲ್ಲಾಧ್ಯಕ್ಷರು ಜನರನ್ನು ಪ್ರಚೋದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.  ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಮನಕ್ಕೆ ಬಾರದ ಹಿಂದೂಗಳು ಶಿರಾ ಉಪಚುನಾವಣೆಯಲ್ಲಿ ನೆನಪಾದರೇ ಎಂದು ಜಾತಲಾಣಿಗರು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಮುಖಂಡ ಗೌರಿಶಂಕರ್ ಎದುರು ಸೋತು ಮುಖಭಂಗ ಅನುಭವಿಸಿರುವ ಸುರೇಶ್ ಗೌಡ ನೆಮ್ಮದಿಯ ತಾಣ ಶಿರಾದಲ್ಲಿ ಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಜಿಲ್ಲೆಯಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಅವುಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು ಅನುಷ್ಠಾನಗೊಳಿಸುವ ಕೆಲಸ ಮಾಡಲಿ. ಅದು ಬಿಟ್ಟು ಹುಳಿ ಹಿಂಡುವ ಕೆಲಸ ಬಿಟ್ಟರೆ ಒಳ್ಳೆಯದು ಎಂಬ ಮಾತುಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...