Homeಗೌರಿ ಲಂಕೇಶ್ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ

ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ

ಮೋದಿಯನ್ನು ವಿರೋಧಿಸಲಿಕ್ಕೆ ನೂರಾರು ವಿಷಯಗಳಿವೆ. ಆದರೆ ಇಂಗ್ಲಿಷ್ ಬಾರದ ವಿಚಾರಕ್ಕೆ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂದು ಗೌರಿ ಮೇಡಂ ನಮಗೆ ತಿಳಿಹೇಳಿದ್ದರು.

- Advertisement -
- Advertisement -

2007ರಲ್ಲಿ ನನಗೆ ಗೌರಿ ಲಂಕೇಶ್ ಪತ್ರಿಕೆ ಎಂದರೆ ಶಿವಸುಂದರ್ ಬರೆಯುತ್ತಿದ್ದ ಚಾರ್ವಾಕ ಅಂಕಣ ಎಂದಷ್ಟೇ ಗೊತ್ತಿತ್ತು. 2009ರ ಮಾರ್ಚ್ 08ರಂದು ಬೆಂಗಳೂರಿನಲ್ಲಿ ಪಿ.ಲಂಕೇಶ್‍ರವರ ಜನ್ಮದಿನ ಕಾರ್ಯಕ್ರಮದಲ್ಲಿ ಗೌರಿ ಮೇಡಂರವರನ್ನು ಮೊದಲ ಸಾರಿ ನೋಡಿದ್ದೆ. ಅಳುತ್ತಲೇ ಲಂಕೇಶ್‍ರವರನ್ನು ಕುರಿತು ಅವರು ಮಾತನಾಡಿದ್ದರು. ಅಲ್ಲಿಂದ ನಿಧಾನವಾಗಿ ಇಡೀ ಪತ್ರಿಕೆ ಇಷ್ಟವಾಗತೊಡಗಿತ್ತು. ಆದರೆ 2013ರ ಒಂದು ಸಂಚಿಕೆಯಲ್ಲಿ ‘ಪತ್ನಿ ಪೀಡಿತರ ಕಥೆ ವ್ಯಥೆ’ ಎಂಬ ಅಂಕಣ ಆರಂಭವಾಯ್ತು. ಮುಂದಿನ ವಾರಕ್ಕೆ ‘ಆ ಅಂಕಣ ಆರಂಭಿಸಿರುವುದರಿಂದ ದೊಡ್ಡ ಆಘಾತವಾಯಿತು’ ಎಂದು ಪತ್ರ ಬರೆದೆ. ಅದನ್ನು ಗೌರಿ ಮೇಡಂ ಪೂರ್ತಿಯಾಗಿ ಪ್ರಕಟಿಸಿದರು. ಏನಪ್ಪ ಮರಿ ಆಘಾತವಾಯ್ತ ಎಂದು ನಗುತ್ತಲೇ ಪ್ರಶ್ನಿಸಿದ ಅವರು ಆನಂತರ ಆ ಅಂಕಣ ನಿಲ್ಲಿಸಿದ್ದು ಸಮಾಧಾನ ತಂದಿತ್ತು.

ಗೌರಿ ಮೇಡಂ ಮತ್ತು ಪತ್ರಿಕೆ ಎಂದರೆ, ಅದು ನಮ್ಮದು ಎಂಬ ಸಲಿಗೆ ನನಗಿತ್ತು. ನಾನು ವಿದ್ಯಾರ್ಥಿ ಕಾರ್ಯಕರ್ತನಾಗಿದ್ದಾಗ ಎಷ್ಟೋ ಬಾರಿ ನಮ್ಮ ಹೋರಾಟಗಳಿಗೆ ಗೌರಿ ಮೇಡಂ ದೇಣಿಗೆ ನೀಡಿದ್ದಾರೆ. ಅವರು ಕಷ್ಟದಲ್ಲಿದ್ದರೂ ಸಹ ನಮಗೆಂದು ಹಣ ಇಲ್ಲ ಎಂದು ಹೇಳಿದ ನೆನಪಿಲ್ಲ.

2013-14 ರಲ್ಲಿ ಮೋದಿ ಹವಾ ಜೋರಾಗುತ್ತಿತ್ತು. ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಮೋದಿ ಘೋಷಣೆಯಾದ ನಂತರವಂತೂ ಸಾಮಾಜಿಕ ಜಾಲತಾಣದಲ್ಲಿ ಮೋದಿ ಮತ್ತು ಅವರು ಪ್ರತಿನಿಧಿಸುತ್ತಿದ್ದ ಸಿದ್ಧಾಂತದ ವಿರೋಧಿಗಳಾದ ನಮ್ಮನ್ನು ಟ್ರೋಲ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ನಾವು ಕೂಡ ಮೋದಿಯವರಿಗೆ ಇಂಗ್ಲಿಷ್ ಬರುವುದಿಲ್ಲ ಎಂಬ ವಿಷಯವಾಗಿ ವಿಡಿಯೋವೊಂದನ್ನು ಷೇರ್ ಮಾಡಿ ಟ್ರೋಲ್ ಮಾಡಲು ಮುಂದಾದಾಗ ಗೌರಿ ಮೇಡಂ ಅದನ್ನು ತಡೆದಿದ್ದರು. ಮೋದಿಯನ್ನು ವಿರೋಧಿಸಲಿಕ್ಕೆ ನೂರಾರು ವಿಷಯಗಳಿವೆ. ಆದರೆ ಇಂಗ್ಲಿಷ್ ಬಾರದ ವಿಚಾರಕ್ಕೆ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂದು ಗೌರಿ ಮೇಡಂ ನಮಗೆ ತಿಳಿಹೇಳಿದ್ದರು. ಆಗ ಅವರ ಮೇಲಿನ ನಮ್ಮ ಗೌರವ ಇಮ್ಮಡಿಯಾಗಿತ್ತು.

2016ರ ಜನವರಿ 16 ಈ ದೇಶದ ಯುವ ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾರವರು ಸಾಂಸ್ಥಿಕ ಹತ್ಯೆಯಾದ ದಿನ. ಆಗ ಗೌರಿ ಮೇಡಂ ತುಂಬಾ ನೊಂದುಕೊಂಡಿದ್ದರು. ಆನಂತರ ಅವರು ಯುವ ಹೋರಾಟಗಾರ ಕನ್ಹಯ್ಯ ಕುಮಾರ್, ಉಮರ್ ಖಾಲಿದ್, ಜಿಗ್ನೇಶ್ ಮೇವಾನಿಯವರನ್ನು ತನ್ನ ಮಕ್ಕಳೆಂದು ಭಾವಿಸಿದರು. ಆಗ ಗೌರಿ ಮೇಡಂ ಜೊತೆಗಿನ ನನ್ನ ಒಡನಾಟ ಕೂಡ ಹೆಚ್ಚಾಯಿತು. ಹೀಗೆ ಒಮ್ಮೆ ಗೌರಿ ಮೇಡಂ ಆಫೀಸ್‍ಗೆ ಹೋಗಿದ್ದಾಗ ಅವರು ಬಾ ಮರಿ ಇಲ್ಲಿ ಎಂದು ಕರೆದು, ರೋಹಿತ್ ವೇಮುಲಾನ ಸ್ನೇಹಿತ ವಿ.ಸುಂಕಣ್ಣ ಪ್ರತಿರೋಧದ ಸಂಕೇತವಾಗಿ ಹೈದರಾಬಾದ್ ಕೇಂದ್ರೀಯ ವಿವಿಯ ಕುಲಪತಿ ಅಪ್ಪರಾವ್‍ರಿಂದ ತನ್ನ ಪಿಎಚ್‍ಡಿ ಪ್ರಮಾಣ ಪತ್ರ ಪಡೆಯಲು ನಿರಾಕರಿಸಿದ್ದ ವಿಡಿಯೋವನ್ನು ನಾಲ್ಕೈದು ಬಾರಿ ತೋರಿಸಿ ಸಮಾಧಾನಪಟ್ಟಿದ್ದರು.

ನಕ್ಸಲ್ ಚಳವಳಿಯಿಂದ ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್‍ರವರು ಮುಖ್ಯವಾಹಿನಿಗೆ ಬರುವುದರಲ್ಲಿ, ಭೂಮಿ ಮತ್ತು ವಸತಿ ಹೋರಾಟವನ್ನು ಸರ್ಕಾರದ ಗಮನಕ್ಕೆ ತರುವುದರಲ್ಲಿ ಗೌರಿ ಮೇಡಂ ಶ್ರಮವಿತ್ತು. ನಂತರ ನಡೆದ ಉಡುಪಿ ಚಲೋ, ತುಮಕೂರು ಚಲೋ ಹೋರಾಟಗಳಲ್ಲಿ ಕೂಡ ಅವರು ಸಕ್ರಿಯವಾಗಿ ತೊಡಗಿಸಿಕೊಂಡು ನಮಗೆ ಸ್ಫೂರ್ತಿ ನೀಡಿದರು.

ನಂತರ ನಾನು ಗಂಗಾವತಿಯಲ್ಲಿದ್ದುಕೊಂಡು ವಿದ್ಯಾರ್ಥಿ ಚಳವಳಿಯಲ್ಲಿ ತೊಡಗಿಕೊಳ್ಳುತ್ತಲೇ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಕುರಿತು ‘ಗೌರಿ ಲಂಕೇಶ್’ ಪತ್ರಿಕೆಗೆ ವರದಿ ಮಾಡುತ್ತಿದ್ದೆ. ಆಗ ಒಂದು ತಿಂಗಳು ಪೂರ್ತಿ ಬಳ್ಳಾರಿಯ ಶಾಸಕ ಅನಿಲ್ ಲಾಡ್‍ರವರ ಅಕ್ರಮ ಗಣಿಗಾರಿಕೆ, ಜಿಂದಾಲ್ ಕಂಪನಿಯ ಪರಿಸರ ನಾಶದ ವಿರುದ್ಧ ವರದಿ ಮಾಡಿದ್ದೆ. ಆಗೊಮ್ಮೆ ಬೆಂಗಳೂರಿನಲ್ಲಿ ಸಿಕ್ಕಿದ ಮೇಡಂ, ಅನಿಲ್ ಲಾಡ್ ನನ್ ಫ್ರೆಂಡು ಕಣಪ್ಪ ಅನ್ನುತ್ತಿರುವಾಗಲೇ ಮಧ್ಯೆ ಬಾಯಿ ಹಾಕಿದ ನಾನು ‘ನಿಮ್ ಫ್ರೆಂಡ್ ಆದರೆ ಬಿಟ್ಟುಬಿಡಬೇಕಾ?’ ಎಂದು ಪ್ರಶ್ನಿಸಿದೆ. ಆಗ ಅವರು ಇಲ್ಲ, ಇಲ್ಲ ಬರಿ ಸುಮ್ನೆ ಹೇಳಿದೆ ಅಷ್ಟೇ ಎಂದರು.

2017ರ ಆಗಸ್ಟ್ 5-6 ರಂದು ಬೆಂಗಳೂರಿನಲ್ಲಿ “ಹೋರಾಟನಿರತ ವಿದ್ಯಾರ್ಥಿ ಸಂಘಟನೆಗಳ ರಾಷ್ಟ್ರೀಯ ಸಮಾವೇಶ” ಹಮ್ಮಿಕೊಂಡಿದ್ದವು. ವಿವಿಧ ರಾಜ್ಯಗಳ ನೂರಾರು ವಿದ್ಯಾರ್ಥಿ ಮುಖಂಡರು ಬೆಂಗಳೂರಿಗೆ ಆಗಮಿಸಿದ್ದರು. ಆಗ ಗೌರಿ ಮೇಡಂ ಸಂತೋಷಕ್ಕೆ ಪಾರವೇ ಇರಲಿಲ್ಲ. ಈ ವಿದ್ಯಾರ್ಥಿಗಳೇ ದೇಶದ ಭವಿಷ್ಯ ಎಂದು ಗೌರಿ ಮೇಡಂ ನಂಬಿದ್ದರು.

ಈಗ ನಾನ್ಯಾಕೆ ಅವರ ಮೇಲೆ ಅಷ್ಟು ಜೋರು ಮಾಡುತ್ತಿದ್ದೆ ಅನಿಸುತ್ತದೆ. ಅವರ ಜೊತೆ ಸಾಕಷ್ಟು ಜಗಳವಾಡುವ ಅವಕಾಶ ನಮಗಿತ್ತು. ಅವರು ಪತ್ರಿಕೆ ನಡೆಸುವುದನ್ನೇ ಸಾಮಾಜಿಕ ಹೋರಾಟ ಅಂದುಕೊಂಡಿದ್ದಾರೆ, ಬೀದಿಗೆ ಬರಲಿ ಅವರಿಗೆ ಗೊತ್ತಾಗುತ್ತದೆ ಎಂದು ನಾನು ಕೆಲವೊಮ್ಮೆ ಗೊಣಗಿದುಂಟು. ಈಗ ಅವರಿಲ್ಲದಾಗ, ಮುಖ್ಯವಾಹಿನಿ ಮಾಧ್ಯಮಗಳು ಮಾರಿಕೊಂಡಿರುವಾಗಿ, ಒಂದು ಸ್ವತಂತ್ರ ಪತ್ರಿಕೆ ನಡೆಸುವುದು ಎಷ್ಟು ಕಷ್ಟ ಎಂದು ಅರಿವಿಗೆ ಬರುತ್ತಿದೆ.

  • ಮುತ್ತುರಾಜು

ಇದನ್ನೂ ಓದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...