Homeಮುಖಪುಟಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ದಲ್ಲಾಳಿಗಳನ್ನು ತಪ್ಪಿಸಿ ಕಾರ್ಪೊರೇಟ್ ಕೈಗೆ ಕೊಟ್ಟರೆ ರೈತರು ಉಳಿಯುವರೆ? ಕಾರ್ಪೊರೇಟ್ ಕಂಪನಿಗಳು ಸಹ ದೊಡ್ಡ ದಲ್ಲಾಳಿಗಳಲ್ಲವೇ? ಎಂದು ರೈತರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಮಸೂದೆಗಳು ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ರಾಜ್ಯಾದ್ಯಂತ ರೈತರು ಬೀದಿಗಿಳಿದಿದ್ದಾರೆ. ಬೃಹತ್ ರಸ್ತೆ ತಡೆ ಪ್ರತಿಭಟನೆ ನಡೆಸುವ ಮೂಲಕ ಈ ತಿದ್ದುಪಡಿಗಳನ್ನು ವಾಪಸ್ ಪಡೆಯಿರಿ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ರೈತ, ಕಾರ್ಮಿಕ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಧಿಕ್ಕಾರ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಬೇಡವೇ ಬೇಡ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ಒಪ್ಪುವುದಿಲ್ಲ, ಕಾರ್ಪೊರೇಟ್ ಕಂಪನಿಗಳ ಪರ ನಿಂತಿರುವ ಕೇಂದ್ರ ರಾಜ್ಯ ಸರ್ಕಾರಗಳಿಗೆ ಧಿಕ್ಕಾರ ಎಂಬ ಘೋಷಣೆಗಳು ಕೇಳಿಬಂದವು.

ದೇಶದಾದ್ಯಂತ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ.

Posted by Naanu Gauri on Thursday, September 24, 2020

ಕೈಯಲ್ಲಿ ಚಾವಟಿ ಕೋಲುಗಳನ್ನು ಹಿಡಿದಿದ್ದ ರೈತರು ರಸ್ತೆಯಲ್ಲಿಯೇ ಉರುಳುಸೇವೆ ಮಾಡುವ ಮೂಲಕ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಪ್ರಧಾನಿ ಮಂತ್ರಿಗಳಾಗಲಿ, ಮುಖ್ಯಮಂತ್ರಿಗಳಾಗಲಿ ರೈತರ ಜೊತೆ ಚರ್ಚೆ ನಡೆಸದೇ ಏಕಾಏಕಿ ತಿದ್ದುಪಡಿಗಳನ್ನು ತರುತ್ತಿದ್ದಾರೆ. ಮಂಡ್ಯ ತಾಲ್ಲೂಕಿನಿಂದ ನಾನು ಇಂದು ಬೆಂಗಳೂರಿಗೆ ಬಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರೆ ನಮ್ಮ ಕಷ್ಟ ಎಷ್ಟಿರಬೇಡ ಎಂಬುದನ್ನು ನೀವೇ ಯೋಚಿಸಿ. ಸರ್ಕಾರ ಈ ನಿರ್ಧಾರಗಳಿಂದ ಹಿಂದೆ ಸರಿಯದಿದ್ದಲ್ಲಿ ಸೆಪ್ಟಂಬರ್ 28ಕ್ಕೆ ಬಂದ್ ನಡೆಸುತ್ತೇವೆ. ನಮ್ಮ ಮನೆಯಲ್ಲಿರುವ ದನಕರು, ಕೋಳಿಗಳನ್ನು ಬೆಂಗಳೂರಿಗೆ ತಂದು ಪ್ರತಿಭಟನೆ ನಡೆಸುತ್ತೇವೆ” ಎಂದು ರೈತರು ಕಿಡಿಕಾರಿದ್ದಾರೆ.

ಕೊರೊನಾ ಬಂದಿದೆಯೆಂದು ಸರ್ಕಾರ ನಮ್ಮನ್ನು ಮನೆಯಲ್ಲಿರಲು ಹೇಳಿತು. ಆದರೆ ಅದು ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದು ಅಸೆಂಬ್ಲಿಯಲ್ಲಿ ಚರ್ಚಿಸದೇ ಅಂಗೀಕರಿಸಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಈ ಕಾಯ್ದೆಗಳು ರೈತರ ಪಾಲಿಗೆ ಮರಣಶಾಸನವಾಗಿದೆ. ದಲ್ಲಾಳಿಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ ಹಾಗಾಗಿ ಈ ತಿದ್ದುಪಡಿ ಎಂದು ಸರ್ಕಾರಗಳು ಹೇಳುತ್ತಿವೆ. ಕೈ ಕೆಸರಾದರೆ ಕೈ ತೊಳೆದುಕೊಳ್ಳಬೇಕೆ ಹೊರತು ಕೈ ಕತ್ತರಿಸಬಾರದು ಅಲ್ಲವೇ? ದಲ್ಲಾಳಿಗಳನ್ನು ತಪ್ಪಿಸಿ ಕಾರ್ಪೊರೇಟ್ ಕೈಗೆ ಕೊಟ್ಟರೆ ರೈತರು ಉಳಿಯುವರೆ? ಕಾರ್ಪೊರೇಟ್ ಕಂಪನಿಗಳು ಸಹ ದೊಡ್ಡ ದಲ್ಲಾಳಿಗಳಲ್ಲವೇ? ಎಂದು ರೈತರು ಪ್ರಶ್ನಿಸಿದ್ದಾರೆ.

ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಸಿಪಿಎಂ, ಸಿಐಟಿಯು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮುಂತಾದ ಸಂಘಟನೆಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪೊಲೀಸರು ಎಲ್ಲಾ ಪ್ರತಿಭಟನಕಾರರನ್ನು ಬಂಧಿಸಿದ್ದಾರೆ.

ಶಿವಮೊಗ್ಗದಲ್ಲಿ ರೈತರಿಂದ ರಸ್ತೆ ತಡೆದು ಪ್ರತಿಭಟನೆ.. ಭೂಸ್ವಾಧೀನ ಕಾಯ್ದೆಗೆ ಭಾರೀ ವಿರೋಧ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ…

Posted by Naanu Gauri on Thursday, September 24, 2020

ಶಿವಮೊಗ್ಗದಲ್ಲಿ ರೈತ ವಿರೋಧಿ, ದಲಿತ ವಿರೋಧಿ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ರಸ್ತೆ ತಡೆ ಚಳುವಳಿ ನಡೆಯಿತು. ಶಿವಮೊಗ್ಗದ ಹೊನ್ನಾಳಿ ರಸ್ತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ ಹಾಗೂ ಕರ್ನಾಟಕ ಜನಶಕ್ತಿಯ ರಾಜ್ಯ ಮುಖಂಡರಾದ ಕೆ.ಎಲ್ ಅಶೋಕ್ ರವರು ಪಾಲ್ಗೊಂಡಿದ್ದರು‌.

ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಎದುರು ರೈತಸಂಘಟನೆಗಳಿಂದ ಬೃಹತ್ ಹೋರಾಟ ಮತ್ತು ರಸ್ತೆ ತಡೆ ನಡೆಸಲಾಯಿತು.


ಇದನ್ನೂ ಓದಿ; ಸೆ. 26ಕ್ಕೆ ವಿಧಾನಸಭಾ ಅಧಿವೇಶನ ಅಂತ್ಯ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...